ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆ

ಪಕ್ಷಾಂತರಿಗಳಿಗೆ ತಕ್ಕಶಾಸ್ತಿ ಮಾಡಲು ರಾಜಕೀಯ ಪಕ್ಷಗಳು ಒಗ್ಗಟ್ಟಾಗಬೇಕು

Team Udayavani, Jul 1, 2022, 6:49 PM IST

Kharge

ಕಲಬುರಗಿ: ದೇಶದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರುವುದು ಅಗತ್ಯವಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಪಕ್ಷಾಂತರಿಗಳಿಗೆ ತಕ್ಕಶಾಸ್ತಿ ದೊರಕುವಂತಾಗಲು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಒಂದು ವೇಳೆ ಯಾರೇ ಪಕ್ಷ ಬಿಡುವುದಾದ್ರೆ , ಬೇರೆ ಪಕ್ಷಕ್ಕೆ ತಗೋಬಾರದು, ಐದು ವರ್ಷ ಸ್ಪರ್ಧಿಸುವ ಅವಕಾಶ ನೀಡಬಾರದು. ಅಂದಾಗ ಮಾತ್ರ ಬುದ್ದಿ ಕಲಿತಾರೆ.‌ ಇಲ್ಲದಿದ್ರೆ ಇದೇ ರೀತಿ ಮಾಡಕೊಂತ ಹೋದ್ರೆ ದೇಶದ ಗತಿ ಏನು ಎಂಬುದೇ ತಿಳಿಯುತ್ತಿಲ್ಲ. ಈ ವಿಷಯದ ಬಗ್ಗೆ ಸಂದರ್ಭ ಬಂದಾಗ ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ಖರ್ಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ನಮ್ಮ ಮೈತ್ರಿ ಸರಕಾರ ಬಂದಾಗಿನಿಂದ ಬೀಳಿಸುವ ಪ್ರಯತ್ನ ನಡೆಯುತ್ತಲೇ ಬಂದಿವೆ. ಅದರಲ್ಲೂ ಬಿಜೆಪಿಯಿಂದ ಒಂದು ಹವ್ಯಾಸವಾಗಿ ಬಿಟ್ಡಿದೆ. ಏನಾದರು ಮಾಡಿ ನಡೆಯೋ ಸರ್ಕಾರ ಉರುಳಿಸುವುದೇ ಆಗಿದೆ.ಸಿಂಧೆಯನ್ನು ಸಿಎಂ ಮಾಡಿದ್ದು ಪೂರ್ವ ನಿಯೋಜಿತ ಯೋಜನೆಯಾಗಿದೆ.‌ ಅವರ ಸರಕಾರ ಬೀಳಿದಿ ನಿಮ್ಮನ್ನೆ ಸಿಎಂ ಮಾಡ್ತಿವಿ ಅಂತ ಹೇಳಿದ್ರು ಅನ್ನಿಸುತ್ತದೆಯಲ್ಲದೇ
ಮಹಾರಾಷ್ಟ್ರದಲ್ಲಿ ಬಿಜೆಪಿ ಕುತಂತ್ರದಿಂದ ಅಧಿಕಾರ ಕಿತ್ತುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಪಕ್ಷವು ಕರ್ನಾಟಕ, ಮಧ್ಯಪ್ರದೇಶ, ಮಣಿಪುರ್, ಗೋವಾದಲ್ಲಿಯೂ ಸಹ ಬಿಜೆಪಿ ಇದೇ ರೀತಿ ಅಧಿಕಾರ ಕಿತ್ತುಕೊಂಡಿದೆ. ನಾವು ಅಧಿಕಾರ ಕಳೆದುಕೊಂಡಿದ್ದು ಜನರಿಂದ ಅಲ್ಲ. ಅಧಿಕಾರ ಮತ್ತು ಹಣ ಬಲದಿಂದ ಬಿಜೆಪಿ ಈ ರೀತಿ ಮಾಡುತ್ತಿದೆ.‌ ಒಟ್ಟಾರೆ ಇಂತಹ ನಡೆಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಪೆಟ್ಟು. ಲೋಕಸಭೆಯಲ್ಲಿ 330 ಸೀಟು ಗೆದ್ರು, ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ರೂ ಮೋದಿಗೆ ತೃಪ್ತಿ ಇಲ್ಲ ಎಂದು ಖರ್ಗೆ ಟೀಕಿಸಿದರು.

ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಪ್ರಕರಣ: ರಾಜಸ್ತಾನದಲ್ಲಿನ ಟ್ರೈಲರ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರೇ ತಪ್ಪು ಮಾಡಲಿ, ಯಾವ ಪಂಗಡದವನೆ ಆಗಿರಲಿ.. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೆಬೇಕು.‌ ಘಟನೆ ನಂತರ ಅಲ್ಲಿಯ ಸಿಎಂ ಆರೋಪಿಗಳನ್ನ ತಕ್ಷಣ ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸಿಎಂ ಕೊಲೆಯಾದ ವ್ಯಕ್ತಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಹೀಗಾಗಿ ಅಲ್ಲಿನ ಸರಕಾರ ವಜಾ ಮಾಡುವ ಅವಶ್ಯಕತೆ ಇಲ್ಲ. ಹತ್ಯೆಗೆ ಸಂಬಂಧಿಸಿದ ಈಗಾಗಲೇ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಆರೋಪಿಗಳು ಪಾಕಿಸ್ಥಾನದ ಜೊತೆ ನಂಟಿದೆ ಎಂಬ ಬಿಜೆಪಿ ಆರೋಪದ ಮೂಲಕ ರಾಜಕೀಯ ಮಾಡಲು ಹೊರಟಿದೆ. ಉತ್ತರ ಪ್ರದೇಶದಲ್ಲಿ ಎಷ್ಟೋ ಘಟನೆಗಳು ನಡೆದಿವೆ. ಅಲ್ಲಿನ ಸರಕಾರ ವಜಾ ಮಾಡಲಾಗಿದೆಯೇ?. ಧರ್ಮದ ಹೆಸರಿನಲ್ಲಿನ ಸಂಘರ್ಷ ಬಿಟ್ಟು ಶಾಂತಿಯಿಂದ ಇರುವಂತೆ ಮಾತಾಡಿ ಎಂದು ಪ್ರಧಾನಿ ಮೋದಿಗೆ ಹೇಳಿದರೆ ಬಾಯಿನೇ ತೆರೆಯಂಗಿಲ್ಲ. ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಪ್ರಧಾನಿ ಮೋದಿ ಮಾತಾಡ್ತಾರೆ. ಅದೇ ಬೇರೆಯವರು ಮಾತಾಡಿದ್ರೆ ದೇಶಕ್ಕೆ ಅವಮಾನ ಆಯ್ತು ಅಂತಾರೆ. ಹೀಗಾದರೆ ಹೇಗೆ? ಎಂದು ಖರ್ಗೆ ಪ್ರಶ್ನಿಸಿದರು.

ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.