![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 26, 2020, 1:14 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ 1,05,313 ಮಂದಿ ಕೋವಿಡ್ ವೈರಸ್ ಸೋಂಕಿನಿಂದ ಮುಕ್ತರಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿನಿಂದ ಗುಣಮುಖರ ಸಂಖ್ಯೆ ಎರಡು ಲಕ್ಷ ಗಡಿ ದಾಟಿದೆ. ಇದೇ ವೇಳೆ ಮಂಗಳವಾರ ಹಿಂದೆಂದಿಗಿಂತಲೂ ಅತಿ ಹೆಚ್ಚು 148 ಸೋಂಕಿತರ ಸಾವು ವರದಿಯಾಗಿವೆ. ಮಂಗಳವಾರ ಹೊಸದಾಗಿ 8,161 ಮಂದಿಗೆ ಸೋಂಕು ತಗಲಿದ್ದರೆ, 6,814 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕು ಪ್ರಕರಣಗಳು 2,91,826ಕ್ಕೆ ಮತ್ತು ಗುಣಮುಖರಾದವರ ಸಂಖ್ಯೆ 2,04,439ಕ್ಕೆ ಏರಿಕೆಯಾಗಿದೆ.
ಅತಿ ಹೆಚ್ಚು ಸಾವು
ಈ ಹಿಂದೆ ರಾಜ್ಯದಲ್ಲಿ ಒಂದೇ ದಿನ 140 ಸೋಂಕಿತರ ಸಾವು ವರದಿಯಾಗಿತ್ತು. ಆದರೆ, ಮಂಗಳವಾರ 148 ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು 61, ಮೈಸೂರು 16, ಧಾರವಾಡ ಎಂಟು, ಕೊಪ್ಪಳ ಮತ್ತು ಬಳ್ಳಾರಿ ತಲಾ ಆರು ಮಂದಿ ಮೃತಪಟ್ಟಿದ್ದಾರೆ.
ಸೋಂಕು ಪರೀಕ್ಷೆ ಹೆಚ್ಚಿಸಲು ಶಿಫಾರಸು
ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಸೋಂಕು ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಪರೀಕ್ಷೆಗಳು ಹೆಚ್ಚಳವಾಗಿ, ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಮಾಡಿದರೆ ಮಾತ್ರ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು.
ಪರೀಕ್ಷೆ ಹೆಚ್ಚಳ
ಸೋಂಕು ಪರೀಕ್ಷೆ ಹೆಚ್ಚಳವಾದ ಹಿನ್ನೆಲೆ ಸೋಂಕು ಪ್ರಕರಣಗಳು ಹೆಚ್ಚಳವಾ ಗಿವೆ. ಕಳೆದ ಐದು ದಿನಗಳಿಂದ ರಾಜ್ಯದಲ್ಲಿ ಸೋಂಕು ಪರೀಕ್ಷೆಗಳು 40 ಸಾವಿರ ಆಸುಪಾಸಿನಲ್ಲಿದ್ದವು, ಅಂತೆಯೇ ಸೋಂಕು ಪ್ರಕರಣಗಳು ಕೂಡಾ ಆರು ಸಾವಿರದ ಆಸುಪಾಸಿನಲ್ಲಿದ್ದವು. ಆದರೆ, ಮಂಗಳವಾರ ಸೋಂಕು ಪರೀಕ್ಷೆಗಳು 59,787ಕ್ಕೆ ಹೆಚ್ಚಳವಾಗಿದ್ದು, ಪ್ರಕರಣಗಳು 8,161ಕ್ಕೆ ಏರಿಕೆಯಾಗಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.