ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ


Team Udayavani, Jun 14, 2022, 5:34 PM IST

ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ

ದಾವಣಗೆರೆ: ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ದಾಖಲಿಸಿದ್ದ ಎಲ್ಲ ಮೊಕದ್ದಮೆಗಳ ವಿಚಾರಣೆಗೆ ಸಹಕರಿಸಿ ಯಾವುದೇ ಆರೋಪ ಇಲ್ಲದೇ ಹೊರ ಬಂದರು. ಅದೇ ರೀತಿ ಕಾಂಗ್ರೆಸ್ ಮುಖಂಡರು ಸಹ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದರೂ ಒಬ್ಬರೇ ತನಿಖೆಗೆ ಹೋಗಿ 10 ಗಂಟೆ ವಿಚಾರಣೆ ಎದುರಿಸಿ, ಹೊರ ಬಂದಂತಹ ಉದಾಹರಣೆ ಇದೆ ಎಂದರು.

ಅಮಿತ್ ಶಾ ಅವರೂ ಸಹ ಗುಜರಾತ್ ಗೃಹ ಮಂತ್ರಿ ಆಗಿದ್ದರೂ ಒಮ್ಮೆಯೂ ಸಾವಿರಾರು ಜನರಿಗೆ ರಸ್ತೆಗೆ ಇಳಿಸಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿಸಿ, ತನಿಖೆ ಆಗದಂತೆ ಮಾಡಬೇಕು ಎಂದು ಮಾಡಲಿಲ್ಲ. ಬಿಜೆಪಿ ಇತಿಹಾಸದಲ್ಲೇ ಕಾಂಗ್ರೆಸ್ಸಿನವರಂತೆ ಹೀಗೆ ಮಾಡುತ್ತಿರುವ ರೀತಿ ಯಾವುದೇ ಹೋರಾಟ ಮಾಡಲಿಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ತಾವಿಬ್ಬರೂ ಸರ್ಕಾರಕ್ಕಿಂತ ತಾವು ಮೇಲೆ ಇದ್ದೇವೆ. ಕಾನೂನಿಗಿಂತ ನಾವೇ ಮೇಲು. ಸರ್ಕಾರದ ಯಾವುದೇ ಸಂಸ್ಥೆಗಳು ತನಿಖೆ ಇರಲಿ ನಮ್ಮನ್ನು ಪ್ರಶ್ನೆ ಮಾಡುವಂತಿಲ್ಲ. ದೇಶದ ಸಂವಿಧಾನ, ಕಾನೂನಿಗಿಂತ ಮೇಲಿದ್ದೇವೆ ಎಂಬ ಭಾವನೆಯಲ್ಲಿದ್ದಾರೆ ಎಂದು ದೂರಿದರು.

ಯುವರಾಜ ರಾಹುಲ್, ಕಾಂಗ್ರೆಸ್ಸಿನ ನಾಯಕರಿಗೆ ದೇಶ ಪ್ರಜಾಪ್ರಭುತ್ವ ಗಾಂಧಿ ಕುಟುಂಬದ ಅಡಿಯಲ್ಲಿ ಇಲ್ಲ. ಕಾನೂನು ಚೌಕಟ್ಟಿನಡಿ, ಸಂವಿಧಾನದಡಿ ನಡೆಯುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ತಾಕೀತು ಮಾಡಿದರು.

ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರ ಕಳೆದುಕೊಂಡ ಸಂದರ್ಭಗಳೆಲೆಲ್ಲಾ ದೇಶಾದ್ಯಂತ ಯಾವುದಾದರೂ ವಿಷಯದಲ್ಲಿ ಗೊಂದಲ ಸೃಷ್ಠಿಸುವ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ. ಕಾನೂನು ಗೌರವಿಸುವುದನ್ನು ಗಾಂಧಿ ಕುಟುಂಬದವರು ಮಾಡಲಿ ಎಂದರು.

ಇದನ್ನೂ ಓದಿ: ದಾವಣಗೆರೆ: 11 ತಿಂಗಳ ಮಗುವಿನೊಂದಿಗೆ ಮಹಿಳೆ ನೇಣಿಗೆ ಶರಣು

ಅವರ ಮನಸ್ಸಿನಲ್ಲಿ ಕಟ್ಟಿಕೊಂಡ ಅರಮನೆಯಿಂದ ಹೊರಗಡೆ ಬಂದು, ಸಾಮಾನ್ಯ ಮನುಷ್ಯರ ಹಾಗೆ ತನಿಖೆ, ಕೋರ್ಟ್‌ಗೆ ಸಹಕರಿಸಬೇಕು. ಸತ್ಯ ಇದ್ದರೆ ತೀರ್ಪು ಅವರ ಪರ ಇರುತ್ತದೆ. ಭ್ರಷ್ಟಾಚಾರ ಮಾಡಿದ್ದರೆ  ವಿರುದ್ಧ ತೀರ್ಪು ಬರುತ್ತದೆ. ಇನ್ನಾದರೂ ಇಂದಿರಾಗಾಂಧಿ ಕುಟುಂಬ ಸಾಮಾನ್ಯರಂತೆ ಬಾಳಲಿ ಎಂದು ಆಶಿಸಿದರು.

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭ್ರಷ್ಟಾಚಾರ ಕಣ್ಣಿಗೆ ಕಾಣುವಂತೆ ಇದೆ. ಸರ್ಕಾರದ ಮೇಲೆ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, ಸಂವಿಧಾನದ ಮೇಲೆ ಗೌರವವಿದ್ದರೆ ಕಾಂಗ್ರೆಸ್ಸಿನ ನಾಯಕರು ತನಿಖೆಗೆ ಸಹಕರಿಸಬೇಕು. ಸರ್ಕಾರ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ, ಗೌರವ ಇದ್ದರೆ ತನಿಖೆಗೆ ಸರಿಯಾಗಿ ಸಹಕರಿಸಬೇಕಿತ್ತು. ತನಿಖೆ, ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುವ ಧೈರ್ಯವನ್ನು ಸೋನಿಯಾ, ರಾಹುಲ್ ತೋರಬೇಕಿತ್ತು. ಸ್ವಾತಂತ್ರ್ಯಕ್ಕಾಗಿ ಸತ್ಯಾಗ್ರಹ ಮಾಡುತ್ತಿದ್ದ ಕಾಂಗ್ರೆಸ್ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭ್ರಷ್ಟಾಚಾರದ ವಿರುದ್ಧ ತನಿಖೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ, ಇಡಿ ಅಧಿಕಾರಿಗಳ ಮೇಲೆ ಬ್ಲ್ಯಾಕ್ ಮೇಲ್ ಮಾಡಲು ಹೋರಾಟ ನಡೆಸುವ ಮಟ್ಟಕ್ಕೆ ಇಳಿದಿರುವುದು ದುರಂತ ಎಂದು ಬಣ್ಣಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.