MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

ಅಗತ್ಯ ಮಾಹಿತಿ ಜತೆಗೆ ವೀಡಿಯೋ ಆಧಾರಿತ ಹೇಳಿಕೆ ದಾಖಲಿಸಿದ ಮೈಸೂರು ಲೋಕಾಯುಕ್ತ ಪೊಲೀಸ್‌

Team Udayavani, Oct 26, 2024, 6:45 AM IST

1-aaree

ಮೈಸೂರು: ಮುಡಾದ 50:50 ಅನುಪಾತದಡಿ ನಿವೇಶನ ಹಂಚಿಕೆ ಹಗರಣ ಸಂಬಂಧ 2ನೇ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಶುಕ್ರವಾರ ಮೈಸೂರು ಲೋಕಾಯುಕ್ತ ಪೊಲೀಸರು ಸತತ 3 ತಾಸು ವಿಚಾರಣೆ ನಡೆಸಿ, ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ಕೆಸರೆಯ ಸರ್ವೆ ನಂ.462 ಮತ್ತು 464ರ 3.16 ಎಕ್ರೆ ಭೂಮಿಗೆ ಬದಲಿಯಾಗಿ ಬಿ.ಎಂ. ಪಾರ್ವತಿ ಅವರು 50:50ರ ಅನುಪಾತದಲ್ಲಿ ಮುಡಾದಿಂದ ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನಗಳನ್ನು ಪಡೆದಿದ್ದ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಪಾರ್ವತಿಯವರನ್ನು ವಿಚಾರಣೆಗೆ ಒಳಪಡಿಸಿ ಅಗತ್ಯ ಮಾಹಿತಿ ಕಲೆ ಹಾಕಿರುವುದಲ್ಲದೆ, ವೀಡಿಯೋ ಆಧಾರಿತ ಹೇಳಿಕೆಯನ್ನೂ ದಾಖಲು ಮಾಡಿಕೊಂಡಿದ್ದಾರೆ.

ವಿಚಾರಣೆ ವೇಳೆ ವಿವಾದಿತ ಭೂಮಿಗೆ ಸಂಬಂಧಿಸಿ ಹಲವು ಪ್ರಶ್ನೆ ಕೇಳಿದ್ದು, ಪಾರ್ವತಿ ಅವರು ಸಮರ್ಪಕ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್‌ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ಈಗಾಗಲೇ ಎ4, ಎ3 ಆರೋಪಿಗಳ ಸಹಿತ ಹಲವರನ್ನು ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿರುವ ಲೋಕಾಯುಕ್ತ ಪೊಲೀಸರು, ಗುರುವಾರ ಮಾಜಿ ಸಚಿವ ಬಚ್ಚೇಗೌಡ ಮತ್ತು ನಿವೃತ್ತ ಐಎಎಸ್‌ ಅಧಿಕಾರಿ ಸುಬ್ರಹ್ಮಣ್ಯ ರಾವ್‌ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದರು.

ಅ. 24ರ ಗುರುವಾರ ಸಂಜೆ ಪಾರ್ವತಿ ಅವರಿಗೆ ಶುಕ್ರವಾರವೇ ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ  ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಪಾರ್ವತಿ ಅವರನ್ನು ಮಧ್ಯಾಹ್ನ 1ರ ವರೆಗೆ ವಿಚಾರಣೆ ನಡೆಸಲಾಯಿತು.

ಗೌಪ್ಯತೆ ಕಾಪಾಡಿಕೊಂಡ ಪಾರ್ವತಿ

ಪಾರ್ವತಿಯವರು 14 ನಿವೇಶನ ವಾಪಸ್‌ ನೀಡಿದ ಸಂದರ್ಭ, ಅವುಗಳ ಖಾತೆ ರದ್ದು ಮಾಡುವ ಸಂದರ್ಭ ಗೌಪ್ಯತೆ ಕಾಪಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಉಪನೋಂದಣಾಧಿಕಾರಿಯೇ ಪಾರ್ವತಿ ಅವರು ಇರುವಲ್ಲಿಗೆ ಹೋಗಿ ರದ್ದತಿ ಪ್ರಕ್ರಿಯೆ ನಡೆಸಿದ್ದರು. ಈಗ ಲೋಕಾಯುಕ್ತ ವಿಚಾರಣೆ ಸಂದರ್ಭವೂ ಪಾರ್ವತಿಯವರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ.

ಲೋಕಾಯುಕ್ತ ಪ್ರಶ್ನೆಗಳು

ನಿಮ್ಮ ಆದಾಯದ ಮೂಲ ಯಾವುದು? ನಿಮ್ಮ ಸಹೋದರ ನೀಡಿದ ಭೂಮಿ ಹಿನ್ನೆಲೆ ಗೊತ್ತೇ?

ನಿಮಗೆ ಕೆಸರೆಯ ಸರ್ವೆ ನಂ. 462, 464ರ 3.14 ಎಕ್ರೆ ಭೂಮಿಯ ಬಗ್ಗೆ ಗೊತ್ತಿದೆಯೇ?

ಭೂಮಿಯನ್ನು ಮುಡಾ ವಶಕ್ಕೆ ತೆಗೆದುಕೊಂಡದ್ದು ತಿಳಿದಿತ್ತೇ? ಬೇರೆಡೆ ಬದಲಿ ಭೂಮಿ ಕೇಳಿದ್ದಿರೇ?

ಆ ಭೂಮಿ ಬದಲಿಗೆ ನಿವೇಶನ ತೆಗೆದುಕೊಳ್ಳಿ ಎಂದವರು ಯಾರು? 14 ನಿವೇಶನಗಳಿಗೆ ಅರ್ಜಿ ಹಾಕಿದ್ದಿರಾ?

14 ನಿವೇಶನಗಳ ಅಸಲಿ ದಾಖಲೆಗಳು ನಿಮ್ಮ ಬಳಿ ಇವೆಯೇ? ನಿವೇಶನ ವಾಪಸ್‌ ನೀಡಿದ್ದೇಕೆ?

ಅರ್ಜಿಯಲ್ಲಿ ಹಾಕಿರುವ ಸಹಿ ನಿಮ್ಮದೇ? ನಿಮ್ಮ ಪರ ಬೇರೆಯವರು ಸಹಿ ಹಾಕಿದ್ದಾರೆಯೇ?

ದಾನಪತ್ರದ ಅಸಲಿ ದಾಖಲೆಗಳು ನಿಮ್ಮ ಬಳಿ ಇವೆಯೇ? ಈ ಎಲ್ಲ ವಿಚಾರ ನಿಮ್ಮ ಪತಿ ಸಿದ್ದರಾಮಯ್ಯ, ಪುತ್ರ ಯತೀಂದ್ರ ಅವರಿಗೆ ಗೊತ್ತಿದೆಯೇ?

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.