MUDA CASE : ಇಂದು ಮಹತ್ವದ ವಿಚಾರಣೆ, ತೀರ್ಪು ಎಂದು?

ಸಿಎಂ, ರಾಜ್ಯಪಾಲರ ನಡುವೆ ಕಾನೂನು ಸಂಘರ್ಷ ; ಇಂದು ಸಿಂಘ್ವಿ , ಪ್ರೊ| ರವಿವರ್ಮ ಮರು ವಾದ

Team Udayavani, Sep 12, 2024, 7:15 AM IST

MUDA CASE : ಇಂದು ಮಹತ್ವದ ವಿಚಾರಣೆ, ತೀರ್ಪು ಎಂದು?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಿವೇಶನ ಹಂಚಿಕೆ ವೇಳೆ ನಡೆದಿದೆ ಎನ್ನಲಾದ ಹಗರಣ ಸಂಬಂ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಮಧ್ಯೆ ಹೈಕೋರ್ಟ್‌ನಲ್ಲಿ ನಡೆಯು ತ್ತಿರುವ ಕಾನೂನು ಸಮರ ಗುರುವಾರ ಮುಂದುವರಿ ಯಲಿದ್ದು, ಪ್ರಕರಣ ನಿರ್ಣಾಯಕ ಹಂತಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರ ದೃಷ್ಟಿ ಹೈಕೋರ್ಟ್‌ ಮೇಲೆ ನೆಟ್ಟಿದೆ.

ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿ ರುವ ಅರ್ಜಿ ಕುರಿತು ನ್ಯಾ| ಎಂ. ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠ ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣೆ ಮುಂದುವರಿಸಲಿದೆ.

ರಾಜ್ಯಪಾಲರ ಪರ ವಕೀಲರು ಹಾಗೂ ದೂರುದಾರರ ಪರ ವಕೀಲರ ವಾದಗಳಿಗೆ ಮುಖ್ಯಮಂತ್ರಿಪರ ವಕೀಲರಾದ ಅಭಿಷೇಕ್‌ ಮನುಸಿಂಘ್ವಿ ಹಾಗೂ ಪ್ರೊ| ರವಿವರ್ಮ ಕುಮಾರ್‌ ಮರು ವಾದ ಮಂಡಿಸಲಿ ದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಇನ್ನಷ್ಟು ವಿಸ್ತರಿಸುವುದು ಸೂಕ್ತವಲ್ಲ.

ಸೆ. 12ರಂದು ಮುಗಿಸೋಣ ಎಂದು ಸೆ. 9ರ ವಿಚಾರಣೆ ವೇಳೆ ನ್ಯಾಯಾಲಯ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗುರುವಾರದ ವಿಚಾರಣೆ ಸಾಕಷ್ಟು ಕುತೂಹಲ ಸೃಷ್ಟಿಸಿದೆ.

6ನೇ ಬಾರಿಗೆ ವಿಚಾರಣೆ
ಸಿಎಂ ಪರ ವಕೀಲರು ಮರು ವಾದ ಮಂಡಿಸಿದ ಬಳಿಕ ರಾಜ್ಯಪಾಲರ ಪರ ಹಾಗೂ ದೂರುದಾರರ ಪರ ವಕೀಲರು ಸ್ಪಷ್ಟನೆ, ಮರು ವಾದಕ್ಕೆ ಗುರುವಾರವೇ ಅವಕಾಶ ಕೊಡಬಹುದು. ಒಂದೊಮ್ಮೆ ಪ್ರತಿವಾದಿಗಳ ಪರ ವಕೀಲರು ಸಮಯ ಕೇಳಿದರೆ ಮತ್ತೆ ವಿಚಾರಣೆ ಮುಂದೂಡಹುದು. ಆದರೆ ಅರ್ಜಿದಾರರು ಮತ್ತು ಪ್ರತಿವಾದಿಗಳ ಪರ ವಕೀಲರ ಮರುವಾದ, ಸ್ಪಷ್ಟನೆ ಮುಕ್ತಾಯಗೊಂಡರೆ ತೀರ್ಪು ಕಾಯ್ದಿರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆ. 19ರಂದು ಮೊದಲ ಬಾರಿ ವಿಚಾರಣೆ ನಡೆದಿತ್ತು. ಬಳಿಕ ಆ. 29, 31, ಸೆ. 2 ಹಾಗೂ 9ರಂದು ವಿಚಾರಣೆ ನಡೆದಿದೆ.

ಪ್ರಕರಣದಲ್ಲಿ ರಾಜ್ಯಪಾಲರ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ದೂರುದಾರರ ಪರ ಹಿರಿಯ ವಕೀಲರಾದ ಮಣೀಂದರ್‌ ಸಿಂಗ್‌, ಕೆ.ಜಿ. ರಾಘವನ್‌, ಪ್ರಭುಲಿಂಗ ಕೆ. ನಾವದಗಿ, ಲಕ್ಷ್ಮೀ ಅಯ್ಯಂಗಾರ್‌, ವಕೀಲ ರಂಗನಾಥ ರೆಡ್ಡಿ ತಮ್ಮ ವಾದಗಳನ್ನು ಪೂರ್ಣಗೊಳಿಸಿದ್ದಾರೆ.

ಸಾರ್ವಜನಿಕ ಸೇವಕರ ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್‌ 17ರಡಿ ಅಭಿಯೋಜನೆಗೆ ಅನುಮತಿ ನೀಡುವ ಮೊದಲು ಪೊಲೀಸರಿಂದ ಪ್ರಾಥಮಿಕ ತನಿಖೆ ನಡೆದಿರಬೇಕು. ಸಚಿವ ಸಂಪುಟದ ಸಲಹೆ ಮತ್ತು ಅಭಿಪ್ರಾಯಕ್ಕೆ ರಾಜ್ಯಪಾಲರು ಬದ್ಧರಾಗಿರಬೇಕು, ರಾಜ್ಯಪಾಲರ ವಿವೇಚನಾಧಿಕಾರ ಇತ್ಯಾದಿ ಕಾನೂನು ಮತ್ತು ಸಂವಿಧಾನದ ಅಂಶಗಳು ಇಡೀ ಪ್ರಕರಣದ ಕೇಂದ್ರ ಬಿಂದುಗಳಾಗಿವೆ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.