ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
8 ಲಕ್ಷ ಪುಟಗಳ ಜೆರಾಕ್ಸ್...!!!, ದಾಖಲೆಗಳ ಹುಡುಕಾಟವನ್ನು ಹೇಗೆ ದಾಳಿ ಎಂದು ಕರೆಯುತ್ತೀರಿ?
Team Udayavani, Oct 18, 2024, 6:50 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕುಟುಂಬ ಸದಸ್ಯರು ಮತ್ತಿತರರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕೋರಿರುವ ಎಲ್ಲಾ ದಾಖಲೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (MUDA) ನೀಡಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh) ಶುಕ್ರವಾರ(ಅ18) ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಶುಕ್ರವಾರ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಕೆಲವು ಸ್ಥಳಗಳಲ್ಲಿ ಶೋಧ ನಡೆಸಿದ ಬೆನ್ನಲ್ಲೇ ಸಚಿವ ಸುರೇಶ್ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.
“ಯಾವುದೇ ದಾಖಲೆಗಳನ್ನು ಕೋರಿದರೂ, ಮುಡಾ ನೀಡುತ್ತದೆ…ಇಸಿಐಆರ್ (Enforcement Case Information Report) ಬುಕ್ ಮಾಡಿದ ನಂತರ ಸಿಎಂ ವಿರುದ್ಧ ದಾಳಿ ಮಾಡಲು ಇಡಿ ಅಧಿಕಾರವನ್ನು ಪಡೆದಿದೆ ಎಂದು ಹೇಳಲಾಗುತ್ತದೆ, ಅವರು ಯಾವುದೇ ದಾಖಲೆಗಳನ್ನು ಕೇಳಿದರೂ ಮುಡಾ ನೀಡುತ್ತದೆ. ನಾವು ಇದರಲ್ಲಿ ಭಾಗಿಯಾಗುವ ಪ್ರಶ್ನೆಯೇ ಇಲ್ಲ, ಅಧಿಕಾರಿಗಳು ದಾಖಲೆಗಳನ್ನು ಒದಗಿಸುತ್ತಾರೆ” ಎಂದು ಸುರೇಶ್ ಹೇಳಿಕೆ ನೀಡಿದ್ದಾರೆ.
”ಇದು ನಮ್ಮ ದೇಶದ ಕಾನೂನು, ಇದು ನಮ್ಮ ಇಡಿ, ಪೊಲೀಸ್ ಮತ್ತು ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿಯ ಮಿತಿಗಳನ್ನು ತಿಳಿದಿದ್ದಾರೆ. ಇಡಿ ತನಿಖೆ ಮಾಡಲಿ. ಇಂದು ಆಗಿರುವುದು ದಾಳಿಯಲ್ಲ, ದಾಖಲೆಗಳನ್ನು ಹುಡುಕುತ್ತಿದ್ದಾರೆ. ದಾಖಲೆಗಳನ್ನು ಹುಡುಕುವುದನ್ನು ನೀವು ಹೇಗೆ ದಾಳಿ ಎಂದು ಕರೆಯುತ್ತೀರಿ? . ಅಧಿಕಾರಿಗಳು ಕೇಳಿದಷ್ಟು ಕೊಡುತ್ತಾರೆ. 8 ಲಕ್ಷ ಪುಟಗಳ ದಾಖಲೆಗಳಿವೆ. ದೇಸಾಯಿ ಸಮಿತಿಗೆ 8 ಲಕ್ಷ ಪುಟ ನೀಡಿದ್ದು, ಕೇಳಿದರೆ ಇಡಿ ಗೂ ನೀಡಲಾಗುವುದು. 8 ಲಕ್ಷ ಪುಟಗಳ ಜೆರಾಕ್ಸ್ ತೆಗೆಯಲು ಒಂದು ವಾರ ಬೇಕಾಗಬಹುದಾದ್ದರಿಂದ ಒಂದೇ ದಿನದಲ್ಲಿ ನೀಡಲು ಸಾಧ್ಯವಾಗದೇ ಇರಬಹುದು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ
Mangaluru: ಡಿಜಿಟಲ್ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್ ಗಟ್ಟಿ ಕಾಪಿಕಾಡ್
Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.