ಮುಜರಾಯಿ ದೇಗುಲಗಳಲ್ಲಿ ಮುದ್ರಾಧಾರಣೆ  ಮಾಡುವಂತಿಲ್ಲ

ವಿವಾದಕ್ಕೆಡೆಯಾದ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

Team Udayavani, Nov 10, 2022, 11:40 PM IST

ಮುಜರಾಯಿ ದೇಗುಲಗಳಲ್ಲಿ ಮುದ್ರಾಧಾರಣೆ  ಮಾಡುವಂತಿಲ್ಲ

ಬೆಂಗಳೂರು:  ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳಲ್ಲಿ  “ಮುದ್ರಾಧಾರಣೆ’ ಸಹಿತ ಆಚರಣೆಯಲ್ಲಿರುವ ಆಗಮ ಶಾಸ್ತ್ರ, ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಸಂಪ್ರದಾಯ ಮತ್ತು ಆಚರಣೆಗಳನ್ನು ನಿಷೇಧಿಸುವ  ರಾಜ್ಯ ಧಾರ್ಮಿಕ ಪರಿಷತ್‌ ಕೈಗೊಂಡಿರುವ ನಿರ್ಣಯದಂತೆ ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರು ಹೊರಡಿಸಿರುವ ಸುತ್ತೋಲೆ  ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಈ ಸುತ್ತೋಲೆಗೆ ವೈಷ್ಣವ ಸಂಪ್ರದಾಯದ ಮಾಧ್ವರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು,  ಸುತ್ತೋಲೆಯನ್ನು ಹಿಂಪಡೆಯುವಂತೆ ಭಾರೀ ಒತ್ತಡ ವ್ಯಕ್ತವಾಗುತ್ತಿದೆ. ಈ ಮಧ್ಯೆ, ರಾಜ್ಯ ಧಾರ್ಮಿಕ ಪರಿಷತ್‌ನ ನಿರ್ಣಯದಂತೆ ಸುತ್ತೋಲೆ ಹೊರಡಿಸಲಾಗಿದೆ.   ಇದರಿಂದ ಸಮಸ್ಯೆ ಅಥವಾ ವಿವಾದವಾಗುತ್ತಿದ್ದರೆ ಮರು ಪರಿಶೀಲಿಸಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ದೇವಾಲಯದಲ್ಲಿ ನಡೆದು ಬಂದಿರುವ ಪದ್ಧತಿಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆಗಳನ್ನು ನಡೆಸುವುದು, ನಾಮಫ‌ಲಕ, ಫೋಟೋ ಇತ್ಯಾದಿಗಳನ್ನು ಅಳವಡಿಸುತ್ತಿರುವ ಬಗ್ಗೆ ಆಕ್ಷೇಪ ಹಾಗೂ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ 2022ರ ನ.2ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾವವಾಗಿ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಆಚರಣೆಯಲ್ಲಿರುವ ಪದ್ಧತಿ-ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸುವುದು, ಮುದ್ರಾಧಾರಣೆ ಮಾಡುತ್ತಿರುವುದು, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುತ್ತಿರುವುದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಹಾಗಾಗಿ ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾದ ಆಚರಣೆ ಅನುಸರಿಸುವುದು, ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವುದು, ಮುದ್ರಾಧಾರಣೆ ಮಾಡುವುದು, ಜಯಂತಿಗಳನ್ನು ಆಚರಿಸುವುದನ್ನು ನಡೆಸದಂತೆ ಹಾಗೂ ಇದಕ್ಕೆ ವಿರುದ್ಧವಾಗಿ ಈಗಾಗಲೇ ನಡೆಸಲಾಗಿರುವ ಭಾವಚಿತ್ರ, ಬೋರ್ಡ್‌ಗಳನ್ನು ತೆರವುಗೊಳಿಸಲು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಅದರಂತೆ, ರಾಜ್ಯ ಧಾರ್ಮಿಕ ಪರಿಷತ್ತಿನ ತೀರ್ಮಾನದಂತೆ ಹಾಗೂ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ-1997ರ ಸೆಕ್ಷನ್‌ 58ರಂತೆ ಇನ್ನು ಮುಂದೆ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಆಚರಣೆಯಲ್ಲಿರುವ ಆಗಮ, ಶಾಸ್ತ್ರ, ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸುವುದು, ಮುದ್ರಾಧಾರಣೆ ಮಾಡುವುದು, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಹಾಗೂ ಇದಕ್ಕೆ ಅವಕಾಶ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಅದಕ್ಕೆ ವಿರೋಧ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

suicide (2)

Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

6

Karkala: ಎಲ್ಲಿ ಹೋಯಿತು ಬಂಗ್ಲೆಗುಡ್ಡೆ ವೃತ್ತದ ಸಿಸಿ ಕೆಮರಾ?

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

5

Karkala: ಬಸ್‌ ನಿಲ್ದಾಣದಲ್ಲಿ ಲಘು ವಾಹನ!ಬಸ್‌ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.