![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 10, 2019, 1:01 AM IST
ಬೆಂಗಳೂರು: ತಮ್ಮ ಹತ್ಯೆಗೆ ಸ್ಕೆಚ್ ರೂಪಿಸಲಾಗಿತ್ತು ಎನ್ನುವ ಊಹಾಪೋಹಕ್ಕೆ ನಟ ಯಶ್ ತೆರೆ ಎಳೆದಿದ್ದಾರೆ. ಈ
ಸಂಬಂಧ ಸುದ್ದಿಗೋಷ್ಠಿ ನಡೆಸಿದ ಯಶ್, ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಶ್, “ಸುಪಾರಿ ಪ್ರಕರಣದಲ್ಲಿ ನನ್ನ ಹೆಸರೇ ಇಲ್ಲ, ನನಗೂ ಇದಕ್ಕೂ ಸಂಬಂಧವಿಲ್ಲ. ಈ ವಿಷಯದಲ್ಲಿ ಕೆಲವು ಮಾಧ್ಯಮಗಳಲ್ಲಿ ವಿನಾ ಕಾರಣ ನನ್ನ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ.
ಈ ಸುದ್ದಿ ನೋಡಿದ ಮೇಲೆ ಸ್ವತಃ ನಾನೇ ಗೃಹ ಸಚಿವರ ಬಳಿ ಹಾಗೂ ಪೊಲೀಸ್ ಅಧಿಕಾರಿಗಳ ಬಳಿ ಮಾತನಾಡಿದ್ದೇನೆ. ಎಫ್ಐಆರ್ ಅಥವಾ ಈ ಪ್ರಕರಣದಲ್ಲಿ ನನ್ನ ಹೆಸರಿಲ್ಲ ಎಂದು ಅವರೇ ಖಚಿತ ಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.
“ಯಾರೋ ಬಂದು ಕೊಲೆ ಮಾಡೋದಕ್ಕೆ ನಾನೇನು ಕೋಳಿನಾ..ಕುರಿನಾ..? ನಾನೇನು, ನನ್ನ ಶಕ್ತಿಯೇನು ಅಂತ ನನಗೆ ಗೊತ್ತಿದೆ. ಬೇರೆಯವರಿಗೂ ಗೊತ್ತಾಗಲಿ ಅಂತಾನೇ ನಾನು ನಿಮ್ಮ ಮುಂದೆ ಬಂದಿದ್ದೀನಿ. ಆದ್ರೆ, ಆ ರೀತಿ
ಯಾವುದೇ ಘಟನೆ ನಡೆದಿಲ್ಲ. ಇದೆಲ್ಲ ಎಲ್ಲಿಂದ ಆರಂಭವಾಗಿದೆ, ಹೇಗೆ ಹರಡುತ್ತಿದೆ ಎಂಬುದು ಗೊತ್ತಿಲ್ಲ. ದಯವಿಟ್ಟು ಯಾರೂ ಇಂತಹ ಸುದ್ದಿಗಳಿಗೆ ಕಿವಿಕೊಡಬೇಡಿ’ ಎಂದು ಯಶ್ ಮನವಿ ಮಾಡಿದರು.
ನಮ್ಮ ಇಂಡಸ್ಟ್ರಿಯಲ್ಲಿ ಅಂಥವರಿಲ್ಲ: ಸಾಮಾಜಿಕ ಜಾಲತಾಣದಲ್ಲಿ ಇದು ಕೆಟ್ಟ ಪರಿಣಾಮ ಬೀರುತ್ತಿದೆ. ಇನ್ನೊಬ್ಬ ನಟ ಯಾರೋ ಸುಪಾರಿ ಕೊಟ್ಟಿರಬಹುದು ಎಂಬ ಮಾತುಗಳು ಚರ್ಚೆಯಾಗ್ತಿದೆ. ಇದೆಲ್ಲ ನಮ್ಮ ಇಂಡಸ್ಟ್ರಿಯಲ್ಲಿ ಇಲ್ಲ. ನಮ್ಮಲ್ಲಿ ಯಾರೂ ಆ ರೀತಿ ಯೋಚನೆ ಕೂಡ ಮಾಡಲ್ಲ. ಆ ರೀತಿ ಇದ್ದರೇ ದಾಖಲೆ ಕೊಡಿ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.