
ಮತಾಂತರ ನಿಷೇಧ ಕಾಯಿದೆ ಜಾರಿಗೆ ಮುತಾಲಿಕ್ ಆಗ್ರಹ
Team Udayavani, Nov 12, 2021, 9:30 PM IST

ಬೆಂಗಳೂರು: ಮತಾಂತರ ನಿಷೇಧ ಕಾಯಿದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬ್ರಿಟಿಷರ ಕಾಲದಿಂದ ಆರಂಭವಾಗಿರುವ ಮತಾಂತರ ಈಗಲೂ ದೇಶಾದ್ಯಂತ ನಡೆಯುತ್ತಿದೆ. ಮತಾಂತರ ನಿಷೇಧ ಮಾಡಲಾಗುತ್ತದೆ ಎಂಬ ವಿಚಾರ ಗೊತ್ತಾದ ಬಳಿಕ ಪಾದ್ರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿರುವುದು ಸರಿಯಲ್ಲ ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದರು.
ಬಿಟ್ಕಾಯಿನ್:
ಬಿಟ್ಕಾಯಿನ್ ವಿಚಾರ ಪ್ರಸ್ತಾವಿಸಿದ ಮುತಾಲಿಕ್, ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಪರಸ್ಪರ ದೂಷಣೆಯಿಂದ ಸತ್ಯ ಹೊರಬರದು. ಪ್ರಕರಣದಲ್ಲಿ ಯಾರಿದ್ದರೂ ಅವರನ್ನು ಹೊರಗೆಳೆಯಬೇಕು. ಯುವಶಕ್ತಿಯನ್ನು ಹಾಳು ಮಾಡುತ್ತಿರುವ ಡ್ರಗ್ ಮಾಫಿಯಾದಂತೆ ಈ ಪ್ರಕರಣವನ್ನು ಮುಚ್ಚಿಹಾಕಬಾರದು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.