Muzrai; ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ
Team Udayavani, Oct 13, 2024, 6:58 AM IST
ಬೆಂಗಳೂರು: ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನದ ಅರ್ಚಕ ಹಾಗೂ ನೌಕರರಿಗೆ 5 ಲಕ್ಷ ರೂ. ಮೌಲ್ಯದ ಜೀವ ವಿಮೆ ನೀಡಬೇಕು ಎನ್ನುವ ಆಶಯವಿದೆ ಎಂದು ಮುಜರಾಯಿ ಮತ್ತು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು.
ಚಾಮರಾಜಪೇಟೆಯ ಶ್ರೀ ರಾಮೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಧಾರ್ಮಿಕ ಇಲಾಖೆಯ ನೌಕರರ, ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮೃತ ಅರ್ಚಕರ ಕುಟುಂಬಕ್ಕೆ ಮರಣ ಉಪಾದಾನ ವಿರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೌಕರರ, ಅರ್ಚಕರ ಅಭಿವೃದ್ಧಿಗಾಗಿ ಶ್ರಮಿಸು ವುದೇ ನಮ್ಮ ಮೊದಲ ಗುರಿ. ಈ ಹಿನ್ನೆಲೆಯಲ್ಲಿ ಜೀವವಿಮೆ ಯೋಜನೆ ಜಾರಿಗೆ ತರಬೇಕು ಎನ್ನುವುದು ನಮ್ಮ ಆಶಯ. ಇದರಿಂದಾಗಿ ಅರ್ಚಕ ಸಮುದಾಯಕ್ಕೆ ದೊಡ್ಡ ಆರ್ಥಿಕ ಭದ್ರತೆ ಸಿಕ್ಕಂತಾಗುತ್ತದೆ. ಈ ಬಗ್ಗೆ ಸರ್ಕಾರದ ವಲಯದಲ್ಲಿ ಚರ್ಚೆಗಳಾಗಿದ್ದು, ರಾಜ್ಯಪಾಲರ ಒಪ್ಪಿಗೆಯನ್ನು ಎದುರು ನೋಡುತ್ತಿದ್ದೇವೆ ಎಂದರು.
ಇಲಾಖೆಯ ಅನುದಾನ ಸದುಪಯೋಗಪಡಿಸಿಕೊಳ್ಳಬೇಕು ಎನ್ನುವ ಆಶಯದಲ್ಲಿ ಈ ವರ್ಷ 163 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಮಂದಿನ ವರ್ಷ ಈ ಯೋಜನೆಗೆ ಹೆಚ್ಚಿನ ಪ್ರಚಾರ ನೀಡಿ, 2-3 ಸಾವಿರ ವಿದ್ಯಾರ್ಥಿಗಳಿಗೆ ವಿಸ್ತರಿಸುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿರುವ ಸಿ ಗ್ರೇಡ್ ಟೆಂಪಲ್ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಬೇಕು. ಪ್ರಸ್ತುತ 1271ಕ್ಕೂ ಅಧಿಕ ದೇವಸ್ಥಾನದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಅರ್ಹ ದೇವಸ್ಥಾನದ ಅಭಿವೃದ್ಧಿಯಿಂದ ಜನರ ಭೇಟಿಯೂ ಹೆಚ್ಚುತ್ತದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟವೂ ಸೇರಿದಂತೆ ರಾಜ್ಯದ 4 ಪ್ರಮುಖ ದೇವಸ್ಥಾನಗಳಿಗೆ ಪ್ರಾಧಿಕಾರ ರಚಿಸಲಾಗಿದೆ ಎಂದು ತಿಳಿಸಿದರು.
ಇನ್ನೂ ತಸ್ತೀಕ್ ವರ್ಷಾಸನವು ನೇರ ಬ್ಯಾಂಕ್ ಖಾತೆಗಳಿಗೆ ಜಮಾ ಅಗುವಂತೆ ಮಾಡಿದ್ದರಿಂದ ಹಲ ವಾರು ಅರ್ಚಕರು ವರ್ಷಾಶನಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅಲೆಯು ವುದು ತಪ್ಪಿದೆ. ಜತೆಗೆ ಮನೆಯ ಒಬ್ಬ ಸದಸ್ಯರೊಂದಿಗೆ ಕಾಶಿ-ಗಯಾ ದರ್ಶನ ಯೋಜನೆಯೂ ಸಂಪೂರ್ಣ ಯಶಸ್ಸು ಕಂಡಿದೆ ಎಂದು ಶ್ಲಾ ಸಿದರು. ಇನ್ನುಳಿದ ಅರ್ಚಕರ ಬೇಡಿಕೆಗಳ ಬಗ್ಗೆ ಹಂತ ಹಂತವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS;ಶತಮಾನ ಸಂಭ್ರಮಕ್ಕೆ ‘ಪಂಚಪರಿವರ್ತನ’: 3 ಹಂತದಲ್ಲಿ 5 ತತ್ತ್ವಗಳ ಪಾಲನೆ
Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್
PRR:ಭೂ ಪರಿಹಾರ ಬದಲಿಗೆ ಟಿಡಿಆರ್ ನೀಡಲು ಸಂಪುಟ ಸಭೆ ತೀರ್ಮಾನ
G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!
H.D. Kumaraswamy; ಹತ್ತು ವರ್ಷಗಳ ಹಿಂದಿನ ವರದಿ ಇಟ್ಟುಕೊಂಡು ಏನು ಮಾಡುತ್ತೀರಿ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Martin Movie Review: ಆ್ಯಕ್ಷನ್ ಅಬ್ಬರದಲ್ಲಿ ಮಾರ್ಟಿನ್ ಮಿಂಚು
Baba Siddique Case: ಲಾರೆನ್ಸ್ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್ ಗಳ ಬಂಧನ
Udupi: ನಕಲಿ ದಾಖಲೆಗಳ ಪೂರೈಕೆಯ ಫ್ಯಾಕ್ಟರಿ ಕರಾವಳಿಯಲ್ಲಿ?
Bangla Illegal immigrants: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪೊಲೀಸರ ಕಟ್ಟೆಚ್ಚರ
Women’s T20 World Cup: ಭಾರತಕ್ಕಿಂದು ಆಸೀಸ್ವಿರುದ್ಧ ನಿರ್ಣಾಯಕ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.