ಚಿನ್ನೇಗೌಡ ವಾಣಿಜ್ಯ ಮಂಡಳಿ ಅಧ್ಯಕ್ಷ
Team Udayavani, Jun 27, 2018, 6:00 AM IST
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ
ಎಸ್. ಎ. ಚಿನ್ನೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಿತು. ವಿತರಕ ವಲಯದಿಂದ ಅಧ್ಯಕ್ಷ ಸ್ಥಾನಕ್ಕೆ ಚಿನ್ನೇಗೌಡರು ಸ್ಪರ್ಧಿಸಿದ್ದರು. ಅವರ ವಿರುದಟಛಿ ಸುರೇಶ್ (ಮಾರ್ಸ್) ಸ್ಪರ್ಧೆಗಿಳಿದಿದ್ದರು. ಚಿನ್ನೇಗೌಡರು 551 ಮತಗಳನ್ನು ಪಡೆದರೆ, ಸುರೇಶ್ (ಮಾರ್ಸ್) 317 ಮತಗಳನ್ನು ಮಾತ್ರ ಪಡೆದು ಪರಾಭವ ಗೊಂಡರು. ಚಿನ್ನೇಗೌಡರು 234 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು.
ಈ ಬಾರಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಕರಿಸುಬ್ಬು, ವಿತರಕರ ವಲಯದಿಂದ ಕೆ.ಮಂಜು ಸ್ಪರ್ಧಿಸಿ, ಗೆಲುವು ಸಾಧಿಸಿದರೆ, ಪ್ರದರ್ಶಕರ ವಲಯದಿಂದ ಅಶೋಕ್ ಅವರು ಅವಿರೋಧ ಆಯ್ಕೆಯಾದರು. ಇನ್ನು, ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಭಾ.ಮ.ಹರೀಶ್, ವಿತರಕರ ವಲಯದಿಂದ ಶಿಲ್ಪಾ ಶ್ರೀನಿವಾಸ್ ಅವರು ಗೆಲುವು ಪಡೆದರು. ಪ್ರದರ್ಶಕರ ವಲಯದಿಂದ ಸುಂದರ್ರಾಜ್ ಅವಿರೋಧ ಆಯ್ಕೆಯಾದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ಎಂ. ವೀರೇಶ್ ಅವರು ಜಯಸಿಂಹ ಮುಸುರಿ ಅವರ ವಿರುದ್ಧ ಗೆಲುವು ಸಾಧಿಸಿದರು. ನೂತನ ಮಂಡಳಿ ಬುಧವಾರ (ಇಂದು) ಬೆಳಗ್ಗೆ 11 ಕ್ಕೆ ಅಧಿಕಾರ ವಹಿಸಿಕೊಳ್ಳಲಿದೆ.
ನಂತರ ಮಾತನಾಡಿದ ಎಸ್.ಎ. ಚಿನ್ನೇಗೌಡ, “ಕಳೆದ 30 ವರ್ಷಗಳಿಂದ ವಾಣಿಜ್ಯ ಮಂಡಳಿಯ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿದ್ದೆ. ಈಗ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ಕಂಡಿದ್ದೇನೆ. ಅಧ್ಯಕ್ಷನಾಗಿ ಕನ್ನಡ ಚಿತ್ರರಂಗ ಮತ್ತು ವಾಣಿಜ್ಯ ಮಂಡಳಿಯ ಘನತೆ ಉಳಿಸುವ ಕೆಲಸ ಮಾಡುತ್ತೇನೆ. ಮುಂಬರುವ ದಿನಗಳಲ್ಲಿ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸದ್ಯಕ್ಕೆ ಕನ್ನಡ ಚಿತ್ರಂಗವು ಸಂಕಷ್ಟ ಎದುರಿಸುತ್ತಿದ್ದು, ಸ್ಟಾರ್ ನಟರುಗಳು ವರ್ಷಕ್ಕೆ ಕನಿಷ್ಠ ಎರಡು ಸಿನಿಮಾಗಳಲ್ಲಾದರೂ ನಟಿಸಿದರೆ, ಚಿತ್ರರಂಗವು ಚಟುವಟಿಕೆಯಿಂದರಲು ಸಾಧ್ಯ’ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.