ಬಾಂಬ್‌ ನಾಗನ ಕಂತೆಗಳ ಪುರಾಣ, ಕೋಟಿ, ಕೋಟಿ ಹಳೇ ನೋಟು ಪತ್ತೆ


Team Udayavani, Apr 15, 2017, 3:50 AM IST

14-BIG-3.jpg

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರ ಅಪ ಹರಣ ಹಾಗೂ ದರೋಡೆ ಪ್ರಕರಣದ ಆರೋಪದ ಮೇಲೆ ಬಿಬಿಎಂಪಿ ಮಾಜಿ ಸದಸ್ಯ, ಮಾಜಿ ರೌಡಿಶೀಟರ್‌ ವಿ. ನಾಗರಾಜ್‌ ಅಲಿಯಾಸ್‌ ಬಾಂಬ್‌ ನಾಗನ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಪೊಲೀಸರು ದಾಳಿ ನಡೆ ಸಿದ್ದು, 14.80 ಕೋಟಿ ರೂ. ಮೌಲ್ಯದ ಹಳೆ 1,000 ಹಾಗೂ 500 ರೂ. ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಅಪಹರಣ ಪ್ರಕರಣ ಸಂಬಂಧ ಸರ್ಚ್‌ ವಾರಂಟ್‌ ಪಡೆದಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಬೆಳಗ್ಗೆ 5.30ರ ವೇಳೆಗೆ ಶ್ರೀರಾಂಪುರದ ನಾಗರಾಜ್‌ನ ನಾಲ್ಕು ಅಂತಸ್ತಿನ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ಡಿಸಿಪಿ ಅಜಯ್‌ ಹಿಲ್ಲೂರಿ, ಎಸಿಪಿ ಸಜ್ಜಾದ್‌ ಖಾನ್‌ ನೇತೃತ್ವದಲ್ಲಿ ಹೆಣ್ಣೂರು ಹಾಗೂ ಶ್ರೀರಾಂಪುರ ಠಾಣೆಯ ಸುಮಾರು 50ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದರು. 

ಈತ ರಿಯಲ್‌ ಎಸ್ಟೇಟ್‌, ಬೆಟ್ಟಿಂಗ್‌ ಹಾಗೂ ಕಪ್ಪು ಬಿಳಿ ದಂಧೆಯಲ್ಲೂ  ಭಾಗಿಯಾಗಿರುವ ಶಂಕೆಯೂ ದಾಳಿ ವೇಳೆ ಗೊತ್ತಾಗಿದೆ. ದಾಳಿಯ ಸೂಚನೆ ತಿಳಿದ ನಾಗರಾಜ್‌ ತನ್ನ ಇಬ್ಬರು ಮಕ್ಕಳಾದ ಗಾಂಧಿ ಮತ್ತು ಶಾಸ್ತ್ರಿ ಜತೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನೋಟು ಅಪಮೌಲ್ಯದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿರುವ ದೊಡ್ಡ ಮೊತ್ತ ಇದಾಗಿದ್ದು, ನಾಗರಾಜ್‌ಗೆ ಇದು ಹೇಗೆ ಬಂತು? ಯಾವ ವ್ಯವಹಾರ? ಯಾರ ನಂಟು ಎಂಬುದರ ಬಗ್ಗೆ ನಗರ ಪೊಲೀಸರು ತೀವ್ರ ತನಿಖೆಯಲ್ಲಿ ತೊಡಗಿದ್ದಾರೆ.

ನಾಗರಾಜ್‌  ಕುಟುಂಬ ವಾಸವಿರುವ ಮನೆಯಲ್ಲಿ ಯಾವುದೇ ನಗದು ಪತ್ತೆಯಾಗಿಲ್ಲ. ಆದರೆ, ವಾಣಿಜ್ಯ ಸಂಕೀರ್ಣದ ಕಚೇರಿಯಲ್ಲಿ ಹಳೆಯ ನೋಟುಗಳು, ಬೇನಾಮಿ ಆಸ್ತಿ ಹಾಗೂ ಕೆಲ ಉದ್ಯಮಿಗಳು, ಸ್ಥಳೀಯರ ಹೆಸರಿನಲ್ಲಿರುವ ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ. ಅಮಾನ್ಯಗೊಂಡ 1000 ರೂ. ಹಾಗೂ 500 ರೂ. ನೋಟುಗಳನ್ನು ಪೊಲೀಸರು ಆರ್‌ಬಿಐ ವಶಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ‌18ರಂದು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿ ಕಿಶೋರ್‌, ಉಮೇಶ್‌ ಹಾಗೂ ಗಣೇಶ್‌ ಅವರನ್ನು ಅಪಹರಿಸಿದ ನಾಗರಾಜ್‌, ತನ್ನ ಸ್ನೇಹ ಸೇವಾ ಸಮಿತಿ ಕಚೇರಿಗೆ ಕರೆ ತಂದು 50 ಲಕ್ಷ ರೂ. ವಸೂಲಿ ಮಾಡಿ ಪ್ರಾಣ ಬೆದರಿಕೆಯೊಡ್ಡಿದ್ದ. ಜತೆಗೆ ಅವರ ಬಳಿಯಿದ್ದ ಉಂಗುರ, ಸರ  ಕಿತ್ತುಕೊಂಡಿದ್ದ. ಆದರೆ ಈ ಸಂಬಂಧ ತತ್‌ಕ್ಷಣ ಉಮೇಶ್‌ ದೂರು ನೀಡಿರಲಿಲ್ಲ. ಅನಂತರ ಎ. 7ರಂದು ಹೆಣ್ಣೂರು ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ಪ್ರಕರಣ ತನಿಖೆ ನಡೆಸಿದ ಪೊಲೀಸರು, ಆರೋಪಿಯ ವಿರುದ್ಧ ಸರ್ಚ್‌ ವಾರಂಟ್‌ ಪಡೆದು ಒಂದು ವಾರದ ಹಿಂದೆಯೇ ಬಂಧಿಸಲು ಯತ್ನಿಸಿದ್ದು, ಆತನ ಸಂಪೂರ್ಣ ವ್ಯವಹಾರ ಬಗ್ಗೆ ಮಾಹಿತಿ ಸಂಗ್ರಹಿಸಲು ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಮತ್ತು ಸಿಬಂದಿ ಮಾರುವೇಷದಲ್ಲಿ ಆತನ ಮನೆ ಮತ್ತು ಕಚೇರಿಗೆ ಭೇಟಿ ನೀಡಿದ್ದರು. ಅಲ್ಲದೇ ಮಫ್ತಿಯಲ್ಲಿ  ಪೊಲೀಸ್‌ ಪೇದೆಗಳು ಮಾಹಿತಿ ಕಲೆ ಹಾಕಿದ್ದರು. ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಿದ್ದ ನಾಗರಾಜ್‌ ಎ.14ರಂದು ಅಂಬೇಡ್ಕರ್‌ ಜಯಂತಿಗೆ ಬರುವ ಮಾಹಿತಿ ಲಭಿಸಿತು. ಅದರಂತೆ ಪೊಲೀಸರು ದಾಳಿ ನಡೆಸಿದರು. ಆದರೆ ಇದರ ಮಾಹಿತಿಯೂ ತಿಳಿದುಕೊಂಡ ನಾಗರಾಜ್‌ ಪೊಲೀಸರ ದಾಳಿಗೆ ಮುನ್ನವೇ ಪರಾರಿಯಾಗಿದ್ದ.

ಮನೆಯಲ್ಲಿ ಪತ್ನಿ ಹಾಗೂ ಪುತ್ರಿ ಇದ್ದು, ಪೊಲೀಸರ ದಾಳಿ ಸಂದರ್ಭದಲ್ಲಿ ಪತ್ನಿ ಲಕ್ಷ್ಮಿ ಹೈಡ್ರಾಮಾ ನಡೆಸಿದರು. ಪತಿ ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾನೇನೂ ಬಚ್ಚಿಟ್ಟುಕೊಂಡಿಲ್ಲ ಎಂದು ಜೋರು ಧ್ವನಿಯಲ್ಲಿ ಉತ್ತರಿಸಿದಳು. ಜತೆಗೆ ಸಂಜೆ ನನಗೆ ವಾಯುವಿಹಾರಕ್ಕೆ ಹೋಗಬೇಕು, ಅವಕಾಶ ಮಾಡಿಕೊಡಿ. ಇಲ್ಲವಾದರೆ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಡುತ್ತೇನೆ ಎಂದು ಧಮ್ಕಿ ಹಾಕಿದರು ಎಂದು ಮೂಲಗಳು ತಿಳಿಸಿವೆ.

ಸಿಕ್ಕಿದ್ದು ಕೋಟಿ ಕೋಟಿ: ಉದ್ಯಮಿ ಉಮೇಶ್‌ ಅಪಹರಿಸಿ 50 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್‌ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು, ಆತನ ಮನೆಯಲ್ಲಿ ದೊರೆತ ಕಂತೆ ಕಂತೆ ನೋಟುಗಳನ್ನು ಕಂಡು ಒಂದು ಕ್ಷಣ ಆಶ್ಚರ್ಯ ಚಕಿತರಾದರು.  ಐಷಾರಾಮಿ ಕಚೇರಿ ಮತ್ತು ಮನೆಯ ಪ್ರತಿ ಕಪಾಟುಗಳಲ್ಲಿ ಆಸ್ತಿಗಳಿಗೆ ಸಂಬಂಧಿಸಿ ದಾಖಲೆಗಳು, ಹಣದ ಕಂತೆಗಳು ಪತ್ತೆಯಾಗಿವೆ. ಆತನ ಮನೆಯ ಚಪ್ಪಲಿ ಸ್ಟಾಂಡ್‌ನ‌ ಹಿಂಭಾಗದಲ್ಲೂ ಆಸ್ತಿಯ ದಾಖಲೆಗಳನ್ನು ಅಡಗಿಸಿಟ್ಟಿದ್ದು ಪತ್ತೆಯಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.