ನರೇಗಾದಲ್ಲಿ 1.40 ಕೋಟಿ ಹೆಚ್ಚುವರಿ ಮಾನವ ದಿನ ಸೃಜನೆ: ಈಶ್ವರಪ್ಪ


Team Udayavani, Dec 31, 2021, 6:20 AM IST

ನರೇಗಾದಲ್ಲಿ 1.40 ಕೋಟಿ ಹೆಚ್ಚುವರಿ ಮಾನವ ದಿನ ಸೃಜನೆ: ಈಶ್ವರಪ್ಪ

ಬೆಂಗಳೂರು: ನರೇಗಾ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳನ್ನು ಪೂರೈಸಿದ್ದು, ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರಕಾರ 1.40 ಕೋಟಿ ಮಾನವ ದಿನಗಳ ಸೃಜನೆಗೆ ಅವಕಾಶ ಕಲ್ಪಿಸಿದೆ. ಇದರಿಂದ ರಾಜ್ಯಕ್ಕೆ 715 ಕೋಟಿ ರೂ. ಅನುದಾನ ದೊರೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಇಲಾಖೆಯ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಗೆ ಈ ವರ್ಷ 4.45 ಲಕ್ಷ ಉದ್ಯೋಗ ಕಾರ್ಡ್‌ ವಿತರಿಸುವ ಮೂಲಕ 10.68 ಲಕ್ಷ ಜನರು ಸೇರ್ಪಡೆಯಾಗಿದ್ದಾರೆ. ಪ್ರಸ್ತುತ ವರ್ಷದಲ್ಲಿ 31.45 ಲಕ್ಷ ಕುಟುಂಬಗಳ 58.96 ಲಕ್ಷ ಜನರಿಗೆ ಉದ್ಯೋಗ ಒದಗಿಸಲಾಗಿದ್ದು, ಈಗಾಗಲೇ 46 ಸಾವಿರ ಕುಟುಂಬಗಳು 100 ದಿನಗಳ ಕೂಲಿ ಪೂರ್ಣಗೊಳಿಸಿವೆ. ಈ ವರ್ಷ ಈ ಯೋಜನೆ ಅಡಿಯಲ್ಲಿ 29.15 ಲಕ್ಷ ಮಹಿಳೆಯರು, 4.83 ಲಕ್ಷ ಹಿರಿಯರು, 22 ಸಾವಿರಕ್ಕೂ ಹೆಚ್ಚು ವಿಕಲಚೇತನರಿಗೆ ಉದ್ಯೋಗ ನೀಡಲಾಗಿದೆ ಎಂದರು

ಪ್ರವಾಹ ಪೀಡಿತ 17 ಜಿಲ್ಲೆಗಳ 99 ತಾಲೂಕುಗಳ ಜನರಿಗೆ 150 ದಿನ ಉದ್ಯೋಗ ಕಲ್ಪಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸರಕಾರ ಡಿ. 24ರಂದು 661 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಪ್ರಸ್ತುತ ವರ್ಷ 13.09 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 3.87 ಲಕ್ಷ ಕಾಮಗಾರಿಗಳು ಪೂರ್ಣಗೊಂಡಿವೆ. ಕೂಲಿ ಪಾವತಿಸಲು 3738 ಕೋಟಿ ರೂ. ಹಾಗೂ ಸಾಮಗ್ರಿ ವೆಚ್ಚ ಪಾವತಿಸಲು 1354.30 ಕೋಟಿ ರೂ. ವೆಚ್ಚ ಮಾಡಲಾಗಿದೆ. ಎಂದರು.

ಜಲಶಕ್ತಿ ಅಭಿಯಾನ: ಪ್ರಥಮ ಸ್ಥಾನ:

ಜಲಶಕ್ತಿ ಅಭಿಯಾನದಲ್ಲಿ ರಾಜ್ಯ 4.87 ಲಕ್ಷ ಕಾಮಗಾರಿ ಪೂರ್ಣಗೊಳಿಸುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ, ಕಲುºರ್ಗಿ ಮತ್ತು ಕೊಪ್ಪಳ ಜಲಶಕ್ತಿ ಅಭಿಯಾನದಲ್ಲಿ ಅತೀ ಹೆಚ್ಚು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿವೆ. ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಮಹಿಳಾ ಕಾಯಕೋತ್ಸವ ಹಮ್ಮಿಕೊಳ್ಳಲಾಗಿದೆ. 20 ಸಾವಿರಕ್ಕಿಂತ ಹೆಚ್ಚಿನ ಮಾನವ ದಿನಗಳನ್ನು ಸೃಜನೆ ಮಾಡಿರುವ 2680 ಗ್ರಾಮ ಪಂಚಾಯತಿಗಳಿಗೆ ಮಹಿಳಾ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಲಾಗಿದೆ ಎಂದರು.

ಪಂಚಾಯತಿ ಮಟ್ಟದಲ್ಲಿ ಅರಣ್ಣೀಕರಣ ಹೆಚ್ಚಳ, ರೈತರ ಆದಾಯ ಹೆಚ್ಚಿಸಲು ತೋಟಗಾರಿಕಾ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ ಎರೆ ಹುಳು ತೊಟ್ಟಿ ನಿರ್ಮಿಸಲು ರೈತ ಬಂಧು ಅಭಿಯಾನ ಆರಂಭಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗೆ 25 ಎರೆ ಹುಳು ತೊಟ್ಟಿ ನಿರ್ಮಿಸಲಾಗುವುದು. ನರೇಗಾ ಯೋಜನೆ ಮೂಲಕ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯವನ್ನೂ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ದೇವಸ್ಥಾನ ನಿರ್ವಹಣೆಗೆ ಸಮಿತಿ  :

ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ, ದೇವಸ್ಥಾನದ ಹಣ ಬಳಕೆಗೆ ಭಕ್ತರೇ ಆಯ್ಕೆ ಮಾಡುವ ಸಮಿತಿ ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದ ಹಣ ಇದ್ಧರೂ ಅದನ್ನು ದೇವಾಲಯಕ್ಕೇ ಬಳಸಿಕೊಳ್ಳಲು ಈಗ ಅವಕಾಶ ಇಲ್ಲ. ಆ ಹಣಕ್ಕೆ ಸರ್ಕಾರ ಕೈ ಹಾಕದೆಯೇ ದೇವಸ್ಥಾನದಲ್ಲೇ ಭಕ್ತರೇ ಆಯ್ಕೆ ಮಾಡುವ ಸಮಿತಿ ಮೂಲಕ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಸಮಿತಿಗೆ ಹೆಚ್ಚು ಅಧಿಕಾರ ಕೊಡುವ ವ್ಯವಸ್ಥೆ ಮಾಡಲಾಗುವುದು. ಆದರೆ, ಸರ್ಕಾರದ ಉಸ್ತುವಾರಿ ಇರುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.