National Lok Adalat: ಹೈ ಪೀಠಗಳಲ್ಲಿ 1087 ಪ್ರಕರಣ ಇತ್ಯರ್ಥ
Team Udayavani, Dec 11, 2023, 8:19 PM IST
ಬೆಂಗಳೂರು: ಇದೇ ಮೊದಲ ಬಾರಿ ಧಾರವಾಡ ಪೀಠದಲ್ಲಿ ಸರ್ಕಾರ ಹಾಗೂ ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ 22 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸಲಾಗಿದೆ.
ಬೆಂಗಳೂರು, ಧಾರವಾಡ, ಕಲಬುರಗಿ ಪೀಠದಲ್ಲಿ ಒಟ್ಟು 1087 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಬೆಂಗಳೂರಿನ ಆರು ಪೀಠದಲ್ಲಿ 1,266 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, 623 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಅದರಲ್ಲಿ 612 ಪ್ರಕರಣಗಳು ಅಪಘಾತಕ್ಕೆ, 2 ಸಿವಿಲ್ ವ್ಯಾಜ್ಯ, 1 ವಾಣಿಜ್ಯ ಹಾಗೂ 8 ಎನ್ಐ ಆಕ್ಟ್ ಸಂಬಂಧಿಸಿದ ಪ್ರಕರಣದಲ್ಲಿ 14.91 ಕೋಟಿ ಮೊತ್ತ ಇತ್ಯರ್ಥಗೊಳಿಸಲಾಗಿದೆ.
ಧಾರವಾಡ ಪೀಠದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಆದಾಲತ್ನ 5 ಪೀಠದಲ್ಲಿ 1006 ಪ್ರಕರಣ ಕೈಗೆತ್ತಿಕೊಂಡಿದ್ದು, ಅದರಲ್ಲಿ 272 ಪ್ರಕರಣ ಇತ್ಯರ್ಥಗೊಂಡಿದೆ. 244 ಅಪಘಾತ, 2 ಸಿವಿಲ್, 2 ಎನ್ಐ ಆಕ್ಟ್, 2 ಕೌಟುಂಬಿಕ ಹಾಗೂ 22 ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಒಟ್ಟು 4.11ಕೋಟಿ ರೂ. ಮೊತ್ತದ ವಾಜ್ಯ ಇತ್ಯರ್ಥ ಪಡಿಸಲಾಗಿದೆ.
ಕಲಬುರಗಿಯ ಉತ್ಛ ನ್ಯಾಯಾಲಯದ 2 ಪೀಠದಲ್ಲಿ 277 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ 192 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 189 ಅಪಘಾತ, 3 ಸಿವಿಲ್ ಪ್ರಕರಣದಲ್ಲಿ 6.34 ಕೋಟಿ ರೂ. ಮೊತ್ತ ಇತ್ಯರ್ಥಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.