![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 3, 2019, 3:00 AM IST
ಶಿರಸಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಾಯಕಲ್ಪ ನೀಡದಿದ್ದರೆ ಉತ್ತರ ಕರ್ನಾಟಕದ ಭವಿಷ್ಯಕ್ಕೆ ಆತಂಕ ಎದುರಾಗಲಿದೆ. ಈ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಶಿವರಾಮ ಹೆಬ್ಬಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಎಂಟು ದಿನದಲ್ಲಿ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ವಾಯವ್ಯ ಸಾರಿಗೆ ಮೂಲಕ 9 ಜಿಲ್ಲೆಗಳಲ್ಲಿ 5.36 ಲಕ್ಷ ವಿದ್ಯಾರ್ಥಿಗಳಿಗೆ ಈ ವರ್ಷ ಬಸ್ಪಾಸ್ ವಿತರಿಸಲಿದ್ದೇವೆ. ವಿದ್ಯಾರ್ಥಿಗಳಿಂದ ಶೇ.8 ಮಾತ್ರ ಹಣ ಪಡೆದು ಉಳಿದ ಶೇ.42 ರಷ್ಟನ್ನು ನಿಗಮ ಭರಿಸುತ್ತಿದೆ. ಇದು ನಿಗಮಕ್ಕೆ ದೊಡ್ಡ ಹೊರೆಯಾಗಿದೆ ಎಂದು ಹೇಳಿದರು. 70 ಕೋಟಿ ರೂ.ಗಳಷ್ಟು ಹಣವನ್ನು ನೌಕರರಿಗೆ ನೀಡಬೇಕಿದೆ. ವಾರ್ಷಿಕ 30 ಕೋಟಿ ರೂ. ಪಿಎಫ್ ಹಣ ತುಂಬುವುದೂ ಸಮಸ್ಯೆಯಾಗುತ್ತಿದೆ. ರಾಜ್ಯ ಸರ್ಕಾರದಿಂದ ಬರಬೇಕಾದ ಹಣ ಬಂದರೆ ನಿಗಮದ ಕಷ್ಟ ದೂರವಾಗಲಿದೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ನನ್ನನ್ನು ಬಿಜೆಪಿಯವರು ಭೇಟಿಯಾಗಿದ್ದು ನಿಜ. ಎಲ್ಲರನ್ನೂ ನಾನು ಭೇಟಿಯಾಗುತ್ತೇನೆ. ಆದರೆ, ಸಮ್ಮಿಶ್ರ ಸರ್ಕಾರಕ್ಕೆ ಇದು ಏಟಲ್ಲ. ಸರಕಾರ ಭದ್ರವಾಗಿದೆ. ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ.
-ಶಿವರಾಮ್ ಹೆಬ್ಬಾರ್, ಅಧ್ಯಕ್ಷ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.