Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ


Team Udayavani, Jun 27, 2024, 10:48 PM IST

1-wedsadsad

ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‌ಗೆ ಸಂಬಂಧಿಸಿದಂತೆ ದೇಶದ ಅತಿ ದೊಡ್ಡ ನೆಟ್ವರ್ಕ ಸಂಸ್ಥೆ ಏಥರ್‌ ಎನರ್ಜಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದು ಮಹಾರಾಷ್ಟ್ರಕ್ಕೆ ಹೋಗಿದ್ದು, ಇದರಿಂದ ರಾಜ್ಯಕ್ಕೆ ಭಾರೀ ಅನ್ಯಾಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಏಥರ್‌ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡಿ ಸುಮಾರು 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ2,000 ಕೋಟಿ ರೂ. ಹೂಡಿಕೆ ಮತ್ತು 4,000 ಮಂದಿಗೆ ಉದ್ಯೋಗಾವಕಾಶ ತಪ್ಪಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏಥರ್‌ಎನರ್ಜಿ ಬೆಂಗಳೂರಿನಲ್ಲಿ ಕೇಂದ್ರ ಸ್ಥಾನ ಹೊಂದಿರುವ ಕಂಪನಿಯಾಗಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿಪುಲ ಅವಕಾಶಗಳಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಕಂಪನಿ ಜತೆ ಮಾತುಕತೆ ನಡೆಸಿ ಹೂಡಿಕೆಗೆ ಕಂಪನಿಯ ಮನವೊಲಿಸುವಲ್ಲಿ ವಿಫಲವಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಇನ್ನು ಮುಂದಾದರೂ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಂಪನಿಗಳನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಏಥರ್‌ಎನರ್ಜಿಯಂತೆ ಇತರೆ ಕಂಪನಿಗಳು ಕೂಡ ರಾಜ್ಯದಿಂದ ಹಿಂದೆ ಸರಿಯುವ ಪರಿಸ್ಥಿತಿ ಎದುರಾಗಬಹುದು. ಇದು ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರಲಿದೆ ಎಂದು ಬೆಲ್ಲದ್ ಹೇಳಿದರು.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಂಪನಿಯು ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಸರ್ಕಾರ ಬಂಡವಾಳ ಹೂಡಿಕೆ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಹೂಡಿಕೆದಾರರ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದನ್ನು ಎತ್ತಿ ತೋರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕಂಪನಿ ಜತೆ ಮಾತುಕತೆ ನಡೆಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯಕ್ಕೆ ಹೂಡಿಕೆ ಮಾಡಲು ಮುಂದಾಗುವ ಕಂಪೆನಿಗಳನ್ನ ಪ್ರಧಾನಿ ಮೋದಿ ಅವರು ಗುಜರಾತ್‌ಗೆ ಸೆಳೆಯುತ್ತಿದ್ದಾರೆ ಎನ್ನುವ ಆರೋಪ ಮಾಡುವ ಕಾಂಗ್ರೆಸ್ ನಾಯಕರು ಮೊದಲು ತಮಗೆ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳರಿ ಎಂದು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.