
ಪೊಲೀಸ್ ವರ್ಗಾವಣೆಗೆ ಹೊಸ ನಿಯಮಾವಳಿ: ಪರಂ
Team Udayavani, May 6, 2017, 11:39 AM IST

ಬೀದರ: ಹೊಸದಾಗಿ ನೇಮಕಗೊಳ್ಳುವ ಪೊಲೀಸ್ ಅಧಿಕಾರಿಗಳು ಪರೀಕ್ಷಾರ್ಥ ಅವಧಿ ಪೂರ್ಣಗೊಳಿಸಿದ ಬಳಿಕ ಆ ಪ್ರದೇಶದಲ್ಲೇ ಇಂತಿಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಕರಡು ಪ್ರತಿ ಸಿದ್ಧಗೊಳ್ಳುತ್ತಿದೆ. ಇದರಿಂದ ಅಧಿಕಾರಿಗಳ ಕೊರತೆ ನೀಗಿಸಲು ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ವರ್ಗಾವಣೆಯನ್ನು ನಿಯಮದಂತೆ
ಮಂಡಳಿಯೇ ಮಾಡುತ್ತದೆ. ಮಂಡಳಿಗೆ ಸಂಪೂರ್ಣ ಸ್ವಾತಂತ್ರ ಇದೆ. ಇದರಲ್ಲಿ ಈಗ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕೆಲವು ಹಂತದಲ್ಲಿ ಸರ್ಕಾರವೇ ವರ್ಗಾವಣೆ ಮಾಡುತ್ತದೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ
ಹಸ್ತಕ್ಷೇಪ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದಲ್ಲಿ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಸೇವೆಯನ್ನು ಜನಸ್ನೇಹಿಯಾಗಿಸುವ ದಿಸೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಹೊಸದಾಗಿ ಜಾರಿಗೆ ತಂದಿರುವ ಸಬ್ ಬಿಟ್ ವ್ಯವಸ್ಥೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಬರುವ ದಿನಗಳಲ್ಲಿ ಈ ಯೋಜನೆಯನ್ನು ಹೆಚ್ಚು
ವ್ಯವಸ್ಥಿವಾಗಿ ರೂಪಿಸಲಾಗುವುದು. ಪ್ರತಿ ಠಾಣೆಗಳನ್ನು ಕಂಪ್ಯೂಟರೀಕರಣ ಗೊಳಿಸಿ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರಿಂದ ಅಪರಾಧ ಪ್ರಕರಣಗಳ ಕುರಿತು ಇಡೀ ರಾಜ್ಯದ ಮಾಹಿತಿ ಲಭ್ಯವಾಗಲಿದೆ ಎಂದು
ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.