ಹೊಸ ನಾಟಕ ಶುರು: ಬಿಎಸ್‌ವೈ


Team Udayavani, Jun 4, 2019, 3:05 AM IST

BSY

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಷ್ಟು ದಿನ ಪಂಚತಾರಾ ಹೋಟೆಲ್‌ನಲ್ಲಿದ್ದುಕೊಂಡು ಕಾಲಹರಣ ಮಾಡಿದರು. ಇದೀಗ ಗ್ರಾಮ ವಾಸ್ತವ್ಯ ನೆನಪಾಗಿದ್ದು, ಹೊಸ ನಾಟಕ ಶುರು ಮಾಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದ ಪರಿಣಾಮ ಸರ್ಕಾರಿ ಬಂಗಲೆಗೆ ಹೋಗುತ್ತಿದ್ದಾರೆ. ಅವರ ಶಾಲಾ ವಾಸ್ತವ್ಯಕ್ಕೆ ನಮ್ಮ ಅಭ್ಯಂತರವಿಲ್ಲ. ಜಿಲ್ಲೆಗಳಿಗೆ ಹೋಗಿ ಪರಿಸ್ಥಿತಿ ತಿಳಿಯದೇ ಶಾಲೆಗಳಲ್ಲಿ ವಾಸ್ತವ್ಯ ಮಾಡಲು ಹೋದರೆ ಜನ ಮೆಚ್ಚುವುದಿಲ್ಲ. ಇನ್ನಾದರೂ ಅವರ ನಿರ್ಧಾರದ ಬಗ್ಗೆ ಮರು ಪರಿಶೀಲನೆ ಮಾಡಲಿ ಎಂದು ಸಲಹೆ ನೀಡಿದರು.

ಜೂನ್‌ 5ರ ಬಳಿಕ ನಾನು ಬರ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಲಿದ್ದೇನೆ. ಸರ್ಕಾರವನ್ನು ಬೀಳಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಸರ್ಕಾರ ಪತನವಾದಾಗ ನೋಡೋಣ. ಪಕ್ಷದ ಯಾವ ನಾಯಕರು ಈ ಬಗ್ಗೆ ಹೇಳಿಕೆ ನೀಡದಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೆಲವೆಡೆ ಮುನ್ನಡೆ, ಮತ್ತೆ ಕೆಲವೆಡೆ ಹಿನ್ನಡೆಯ ಫ‌ಲಿತಾಂಶ ಬಂದಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಭ್ಯರ್ಥಿಗಳ ಮೇಲೆ ನಿರ್ಧರಿತವಾಗುತ್ತವೆ. ಹಾಗಾಗಿ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಆದರೂ ಏನಾಗಿದೆ ಎಂಬ ಬಗ್ಗೆ ತಿಳಿದುಕೊಳ್ಳುತ್ತೇನೆ. ಶಿಕಾರಿಪುರದಲ್ಲಿ ನಮಗೆ ಹಿನ್ನಡೆಯಾಗಿದೆ. ಸೋಲಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸೊರಬ, ಸಾಗರದಲ್ಲಿ ನಿರೀಕ್ಷೆ ಮಾಡದೆ ನಮಗೆ ಗೆಲುವು ಸಿಕ್ಕಿದೆ. ಶಿರಾಳಕೊಪ್ಪದಲ್ಲಿ ಬೇರೆ ಬೇರೆ ಕಾರಣಗಳಿಗೆ ಹಿನ್ನಡೆಯಾಗಿದೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಮುಖ್ಯಮಂತ್ರಿಗಳಿಗೆ ಹೇಗೆ ಜ್ಞಾನೋದಯವಾಯಿತೋ ಗೊತ್ತಿಲ್ಲ. ಸದ್ಯ ತಾಜ್‌ ವೆಸ್ಟ್‌ಎಂಡ್‌ ಹೋಟೆಲ್‌ಗೆ ತೆರಿಗೆದಾರರ ಹಣ ಕಟ್ಟುವುದನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ. ದಯಮಾಡಿ ಅವರು ಗ್ರಾಮ ವಾಸ್ತವ್ಯ ಮುಂದೂಡಿ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳನ್ನು ಜಿಲ್ಲೆಗಳಿಗೆ ಕಳುಹಿಸಿ ವಾಸ್ತವಾಂಶ ಅರಿಯಲಿ.
-ವಿ.ಸೋಮಣ್ಣ, ಮಾಜಿ ಸಚಿವ

ಪಾಪ ಮಾಡಿದ ಮೇಲೆ ಪಶ್ಚಾತ್ತಾಪ ಪಡಲೇಬೇಕು. ರಾಜನಂತೆ ಇದ್ದ ಕುಮಾರಸ್ವಾಮಿಯವರು ರಾಜಧರ್ಮ ಪಾಲಿಸಲಿಲ್ಲ. ಅದಕ್ಕಾಗಿ ಮಂಡ್ಯ, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋತರು. ಗ್ರಾಮ ವಾಸ್ತವ್ಯ ಬಿಟ್ಟು ಕೆರೆಗಳ ಹೂಳೆತ್ತಿಸುವ ಕೆಲಸ ಮಾಡಲಿ. ಗ್ರಾಮ ವಾಸ್ತವ್ಯ ಕೇವಲ ನಾಟಕ ಕಂಪೆನಿ ಇದ್ದಂತೆ.
-ಸುರೇಶ್‌ಗೌಡ, ಬಿಜೆಪಿ ಮಾಜಿ ಶಾಸಕ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.