
ನನ್ನತ್ರ ಯಾವ ಲಾಬಿಯೂ ನಡೆಯಲ್ಲ: ರೆಡ್ಡಿ ಖಡಕ್ ವಾರ್ನಿಂಗ್
Team Udayavani, Sep 9, 2017, 12:41 PM IST

ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿ ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರ್.ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ವಿಶೇಷವೆಂದರೆ ಪಾರದರ್ಶಕತೆಯನ್ನು ತೋರುವುದಕ್ಕಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಧ್ಯಮ ಪ್ರತಿನಿಧಿಗಳಿಗೂ ಅವಕಾಶ ನೀಡಲಾಗಿತ್ತು.
ಪೊಲೀಸರಿಗೆ ಖಡಕ್ ಸೂಚನೆ ನೀಡಿದ ರಾಮಲಿಂಗಾ ರೆಡ್ಡಿ ‘ನನ್ನ ಹತ್ರ ಯಾವುದೇ ಲಾಬಿ ನಡೆಯುವುದಿಲ್ಲ. ನಾನು ಅವ್ರ ಕಡೆಯೋನು, ಇವ್ರ ಕಡೆಯೋನು ಅಂದ್ರೆ ಆಗಲ್ಲ’ ಎಂದರು.
ರೌಡಿಗಳನ್ನು ಮಟ್ಟ ಹಾಕಿ ಇಲ್ಲದಿದ್ದರೆ ರಾಜ್ಯದಿಂದ ಗಡಿಪಾರು ಮಾಡಿ ಎಂದು ಖಡಕ್ ಸೂಚನೆ ನೀಡಿದರು.
ಮೀಟರ್ ಬಡ್ಡಿ ದಂಧೆ ನಡೆಸುವವರು ಯಾರೆಂದು ನಿಮಗೆ ಗೊತ್ತು ಅಂತಹವರ ವಿರುದ್ಧ ಕೂಡಲೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದರು.
ಸಣ್ಣ ಪುಟ್ಟ ಗಲಾಟೆಗೆ ಗೂಂಡಾ ಕಾಯಿದೆ ಅಡಿ ಪ್ರಕರಣ ದಾಖಲಿಸಬೇಡಿ. ಇದರಿಂದ ಅಪ್ರಾಪ್ತ ವಯಸ್ಕರ ಜೀವನ ಹಾಳಾಗುತ್ತದೆ. ಅವರಿಗೆ ಬುದ್ದಿ ಹೇಳಿ ಸರಿ ದಾರಿಗೆ ತನ್ನಿ. ಆದರೆ ಪದೇ ಪದೇ ಗೂಂಡಾಗಿರಿ ಮಾಡಿದರೆ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದರು.
ವಿದೇಶಿಯರು ಇರುವ ಕಡೆ ಕಾನೂನು ವ್ಯವಸ್ಥೆ ಹಾಳಾಗುತ್ತಿದೆ. ಅಂತಹ ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸಿ ಭದ್ರತೆ ನೀಡಿ ಎಂದರು.
ಸಭೆಯಲ್ಲಿ ಡಿಜಿ, ಐಜಿಪಿ ಆರ್.ಕೆ.ದತ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ , ರಾಜ್ಯದ ಎಲ್ಲಾ ಎಸ್ಪಿಗಳು,ಬೆಂಗಳೂರು ನಗರದ ಎಲ್ಲಾ ಎಸ್ಐಗಳು , ಸಂಚಾರಿ ಇನ್ಸ್ಪೆಕ್ಟರ್ಗಳು ಭಾಗಿಯಾಗಿದ್ದರು.
ಕೆಂಪಯ್ಯಗೆ ನೋ ಎಂಟ್ರಿ
ಗೃಹ ಸಚಿವಾಲಯದ ಸಲಹೆಗಾರರಾಗಿದ್ದ ಕೆಂಪಯ್ಯ ಅವರನ್ನು ಇಂದಿನ ಮಹತ್ವದ ಸಭೆಯಿಂದ ದೂರ ಇರಿಸಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.