ಪ್ರಧಾನಿ ಹುದ್ದೆಯನ್ನೇ ತಿರಸ್ಕರಿಸಿ ಬಂದವರು ನಾವು, ಮಂತ್ರಿ ಸ್ಥಾನದ ಆಸೆಯಿಲ್ಲ: ಕುಮಾರಸ್ವಾಮಿ


Team Udayavani, Jan 3, 2021, 4:17 PM IST

ಪ್ರಧಾನಿ ಹುದ್ದೆಯನ್ನೇ ತಿರಸ್ಕರಿಸಿ ಬಂದವರು ನಾವು, ಮಂತ್ರಿ ಸ್ಥಾನದ ಆಸೆಯಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಪಕ್ಷದೊಂದಿಗೆ ವಿಲೀನ ಅಥವಾ ಮೈತ್ರಿ ಸಾಧ್ಯತೆಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಖಡಾಖಂಡಿತವಾಗಿ ತಿರಸ್ಕರಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ದಾಳಿ ನಡೆಸಿದ್ದು, ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದ ನಮಗೆ ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆಯಿಲ್ಲ ಎಂದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು ಎಂದಿದ್ದಾರೆ.

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ, ಭ್ರಷ್ಟಾಚಾರ ವಿಪರೀತವಾಗಿದೆ: ‌ರಾಮಲಿಂಗ ರೆಡ್ಡಿ

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ.  1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

ಇದನ್ನೂ ಓದಿ: ಜೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಬೆಂಗಳೂರಿಗೆ ಶಿಫ್ಟ್

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಎಚ್ ಡಿಕೆ ವಿಲೀನ ವಿಚಾರವನ್ನು ತಳ್ಳಿಹಾಕಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.