ಪರಿಷತ್‌ ಸ್ಥಾನಕ್ಕೆ ಚುನಾವಣೆ ಇಲ್ಲ , ಅವಿರೋಧ ಆಯ್ಕೆ?

ಹೆಚ್ಚುವರಿ ಅಭ್ಯರ್ಥಿ ಇಲ್ಲದಿದ್ದರೆ ನಾಡಿದ್ದು ಫ‌ಲಿತಾಂಶ?

Team Udayavani, Jun 4, 2024, 7:20 AM IST

ಪರಿಷತ್‌ ಸ್ಥಾನಕ್ಕೆ ಚುನಾವಣೆ ಇಲ್ಲ , ಅವಿರೋಧ ಆಯ್ಕೆ?

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂ. 13ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾದ ಸೋಮವಾರ ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅಖಾಡದಲ್ಲಿನ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಪ್ರತೀ ಅಭ್ಯರ್ಥಿ ಗೆಲ್ಲಲು ವಿಧಾನಸಭೆಯ ಕನಿಷ್ಠ 19 ಶಾಸಕರ ಮತ ಬೇಕಾಗುತ್ತದೆ. ಅದರಂತೆ ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ ಓರ್ವ ಅಭ್ಯರ್ಥಿ ಗೆಲ್ಲುವ ಅವಕಾಶಗಳಿರುವುದರಿಂದ ಹೆಚ್ಚುವರಿ ಅಭ್ಯರ್ಥಿಯನ್ನು ಹಾಕಿಲ್ಲ. ಆದರೆ ಕಾಂಗ್ರೆಸ್‌ನ ಆಸಿಫ್ ಪಾಶಾ ಎನ್ನುವವರು ನಾಮಪತ್ರ ಸಲ್ಲಿಸಿದ್ದಾರೆ. ಸೂಚಕರು, ಅನುಮೋದಕರ ಹೆಸರು ಹಾಗೂ ಸಹಿ ಇಲ್ಲದಿರುವುದರಿಂದ ಜೂ. 4ರಂದು ನಾಮಪತ್ರ ಪರಿಶೀಲನೆ ವೇಳೆ ಅದು ತಿರಸ್ಕೃತಗೊಳ್ಳುವ ಸಾಧ್ಯತೆಗಳಿವೆ. ನಾಮಪತ್ರ ವಾಪಾಸ್‌ಗೆ ಜೂ. 6 ಕೊನೆಯ ದಿನ.

ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದಿದ್ದರೆ ಮತದಾನ ಪ್ರಕ್ರಿಯೆ ನಡೆಸುವ ಬದಲು ಜೂ. 6ರಂದು ಅವಿರೋಧ ಆಯ್ಕೆಯನ್ನು ಪ್ರಕಟಿಸುವ ಸಂಭವವಿದೆ.

ಅಲ್ಲೇ ಘೋಷಣೆ, ಅಲ್ಲೇ ನಾಮಪತ್ರ ಸಲ್ಲಿಕೆ
ಪರಿಷತ್‌ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ರವಿವಾರಷ್ಟೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿತ್ತು. ಆದರೆ ಜೆಡಿಎಸ್‌ ತನ್ನ ಅಭ್ಯರ್ಥಿ ಯಾರೆಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಸೋಮವಾರ ವಿಧಾನಸೌಧದಲ್ಲಿ ಶಾಸಕಾಂಗ ಸಭೆ ನಡೆಸಿ ಜವರಾಯಿಗೌಡ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದ ಕುಮಾರಸ್ವಾಮಿ ಅವರು ಎಲ್ಲರಿಗಿಂತ ಮೊದಲು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನೂ ಮುಗಿಸಿದರು.

ಕೈ ಅಭ್ಯರ್ಥಿಗಳಿಗೆ
ಸಿಎಂ, ಡಿಸಿಎಂ ಸಾಥ್‌
ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಯಕರ ಜತೆಗೆ ಅಭ್ಯರ್ಥಿಗಳು ಆಗಮಿಸಿದ್ದರು. ಅಷ್ಟೂ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೂ ಸಿಎಂ, ಡಿಸಿಎಂ ಖುದ್ದು ಹಾಜರಿದ್ದು, ಹರಸಿದರು. ಬೋಸರಾಜ್‌, ಐವನ್‌ ಡಿ’ಸೋಜಾ, ವಸಂತಕುಮಾರ್‌ ಮೂರು ನಾಮಪತ್ರ ಸಲ್ಲಿಸಿದರೆ ಯತೀಂದ್ರ, ಬಿಲ್ಕಿಸ್‌ ಬಾನೋ, ಗೋವಿಂದರಾಜು ಎರಡೆರಡು ನಾಮಪತ್ರ ಸಲ್ಲಿಸಿದರು. ಜಗದೇವ್‌ ಗುತ್ತೇದಾರ್‌ ಒಂದು ಸೆಟ್‌ ಮಾತ್ರ ಸಲ್ಲಿಸಿದರು.

ರಾಜ್ಯಾಧ್ಯಕ್ಷರಿಗೆ ಕಾದ ಕಲಿಗಳು
ಬಿಜೆಪಿಯ ಸಿ.ಟಿ. ರವಿ, ಎನ್‌. ರವಿಕುಮಾರ್‌ ಹಾಗೂ ಡಾಣ ಎಂ.ಜಿ. ಮುಳೆ ತಲಾ ಒಂದೊಂದು ಸೆಟ್‌ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಎಂ.ಡಿ. ಲಕ್ಷ್ಮೀನಾರಾಯಣ ಹಾಜರಿದ್ದರು. ಬಳಿಕ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಆಗಮಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬರುವುದು ತಡವಾದ್ದರಿಂದ ಬಿಜೆಪಿ ಅಭ್ಯರ್ಥಿಗಳು ಮತ್ತೂಂದು ಸೆಟ್‌ ನಾಮಪತ್ರ ಸಲ್ಲಿಸಲು ಕಾಯುವಂತಾಗಿತ್ತು. ವಿಜಯೇಂದ್ರ ಆಗಮನದ ಬಳಿಕ ಬಿಜೆಪಿ ನಾಯಕರೆಲ್ಲರೂ ಒಟ್ಟಾಗಿ ತೆರಳಿ ಉಮೇದುವಾರಿಕೆ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಪರಸ್ಪರ ಶುಭ ಹಾರೈಸಿಕೊಂಡ ಬಿಜೆಪಿ ಜೆಡಿಎಸ್‌
ಬಿಜೆಪಿಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ವಿಧಾನಸೌಧದಲ್ಲಿರುವ ಚುನಾವಣಾ ಧಿಕಾರಿ ಕಚೇರಿಯಿಂದ ವಿಪಕ್ಷದ ನಾಯಕರ ಕೊಠಡಿಯತ್ತ ಹೊರಟಿದ್ದರು. ಇದೇ ವೇಳೆ ಜೆಡಿಎಸ್‌ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಮಿತ್ರಪಕ್ಷದ ನಾಯಕರು ಇರುವುದನ್ನು ಮನಗಂಡು ಕೊಠಡಿಯೊಳಗೆ ತೆರಳಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಳಿಕ ಬಿಜೆಪಿ ಜೆಡಿಎಸ್‌ ನಾಯಕರು ಪರಸ್ಪರ ಶುಭ ಹಾರೈಸಿಕೊಂಡರು.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.