ರಾಜ್ಯದಲ್ಲಿ ಇನ್ನು “ಮುಂಗಾರು ಮಳೆ’! ಕೆಲವು ಕಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ

2-3 ದಿನಗಳಲ್ಲಿ ಮಾನ್ಸೂನ್‌ ಕರ್ನಾಟಕ ಪ್ರವೇಶಿಸಲು ಅನುಕೂಲ ಸ್ಥಿತಿ

Team Udayavani, Jun 2, 2024, 7:30 AM IST

ರಾಜ್ಯದಲ್ಲಿ ಇನ್ನು “ಮುಂಗಾರು ಮಳೆ’! ಕೆಲವು ಕಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಈ ಬಾರಿ ನಿರೀಕ್ಷೆಯಂತೆ ರಾಜ್ಯಕ್ಕೆ ಜೂ. 2ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ವಾಡಿಕೆಗಿಂತ ಒಂದು ವಾರ ಮುಂಚಿತವಾಗಿ ಆಗಮಿಸಿದಂತಾಗಲಿದೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಅಂದರೆ ಜೂ. 7 ಅಥವಾ 8ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುತ್ತದೆ.

ರಾಜಧಾನಿ ಬೆಂಗಳೂರು ಸಹಿತ ಹಳೇ ಮೈಸೂರು ಭಾಗದಲ್ಲಿ ಶನಿವಾರ ವರುಣನ ಅಬ್ಬರ ಬಿರುಸಾಗಿತ್ತು. ಹಾಸನ ನಗರ ಮತ್ತು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಮುಂಗಾರು ಮಳೆ ಆಶಾದಾಯಕವಾಗುವ ಮುನ್ಸೂಚನೆ ನೀಡಿದೆ.

ಚಾಮರಾಜನಗರದಲ್ಲೂ ಉತ್ತಮ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಮಳೆಯಾಯಿತು.

ಮಂಡ್ಯ ಜಿಲ್ಲಾದ್ಯಂತ ಸಂಜೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.

ಶ್ರೀರಂಗಪಟ್ಟಣದಲ್ಲಿ ಸಂಜೆ ಸುರಿದ ಗುಡುಗು ಸಹಿತ ಮಳೆಗೆ ಪಟ್ಟಣದ ಮುಖ್ಯರಸ್ತೆಯ ಹೊಟೇಲೊಂದರ ಛಾವಣಿ ಕುಸಿದಿದೆ.

ಇಂದು ಹಲವೆಡೆ ಮಳೆ ಸಾಧ್ಯತೆ
ರವಿವಾರದಿಂದ ರಾಜ್ಯದ ಕೆಲವು ಕಡೆಗಳಲ್ಲಿ ಮುಂಗಾರು ಮಳೆ ಸುರಿಯುವ ಸಾಧ್ಯತೆಗಳಿದ್ದು, ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್‌ ಪೂರ್ಣ ಪ್ರಮಾಣದಲ್ಲಿ ಕರ್ನಾಟಕವನ್ನು ಪ್ರವೇಶಿಸುವ ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣಗೊಂಡಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಗಿಂತ ಮೊದಲೇ ಪ್ರವೇಶ
ಈ ಬಾರಿ ಜೂನ್‌ ಮೊದಲ ವಾರವೇ ಮುಂಗಾರು ಪ್ರವೇಶಿಸಲಿದೆ. ವಾಡಿಕೆಗಿಂತ ಬೇಗ ಮಳೆಗಾಲ ಬಂದರೆ ಆ ವರ್ಷಗಳಲ್ಲಿ ಅತ್ಯಧಿಕ ಮಳೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.