CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

ವೇಣುಗೋಪಾಲ್‌ ಭೇಟಿ ಗೊತ್ತಿಲ್ಲ

Team Udayavani, Oct 6, 2024, 6:00 AM IST

DK SHI NEW

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯೇ ಆಗಿಲ್ಲ. ನಾನು ದಿಲ್ಲಿಗೆ ಭೇಟಿ ನೀಡುವಂತಹ ಯಾವ ಪ್ರಸಂಗವೂ ಉದ್ಭವಿಸಿಲ್ಲ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಮ್ಮ ಪಕ್ಷದ ನಾಯಕರು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡದೆ ಯಾರನ್ನು ಭೇಟಿ ಮಾಡಬೇಕು? ನಾನು ದಿಲ್ಲಿಗೆ ಭೇಟಿ ಕೊಟ್ಟಾಗಲೆಲ್ಲ ನಮ್ಮ ಅಧ್ಯಕ್ಷರನ್ನು ಭೇಟಿ ಮಾಡಿ ಬರುತ್ತೇನೆ. ಕೆಪಿಸಿಸಿ ಅಧ್ಯಕ್ಷರಾಗಿ ನಿತ್ಯವೂ ಅವರ ಸಂಪರ್ಕದಲ್ಲಿ ಇರುತ್ತೇನೆ. ಪಕ್ಷದ ಬೆಳವಣಿಗೆಗಳ ಬಗ್ಗೆ ವರದಿ ನೀಡುತ್ತಿರುತ್ತೇನೆ. ಅದಕ್ಕೆಂದೇ ನಮ್ಮಲ್ಲಿ ಒಂದು ಪ್ರತ್ಯೇಕ ತಂಡವೂ ಇದೆ ಎಂದರು.

ಸಚಿವರು, ಶಾಸಕರು, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುವುದು ಸ್ವಾಭಾವಿಕ. ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ನನ್ನನ್ನೂ ನೂರಾರು ಮಂದಿ ಬಂದು ಭೇಟಿ ಮಾಡುತ್ತಾರೆ. ಮಾಧ್ಯಮದವರೂ ರಾಜಕಾರಣಿಗಳನ್ನು ಭೇಟಿ ಮಾಡುತ್ತಾರೆ, ರಾಜಕಾರಣಿಗಳೂ ಮಾಧ್ಯಮದವರನ್ನು ಭೇಟಿ ಆಗುವುದಿಲ್ಲವೇ? ಅದೆಲ್ಲದಕ್ಕೂ ವಿಶೇಷ ಅರ್ಥ ಕಲ್ಪಿಸಲು ಸಾಧ್ಯವೇ? ರಾಜಕೀಯ, ಆಡಳಿತ ಹಾಗೂ ಕೆಲವು ಸನ್ನಿವೇಶಗಳ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ನಿಗಮ ಮಂಡಳಿ ನೇಮಕ ವಿಳಂಬದ ಬಗ್ಗೆ ಬೇಸರ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, ನಾವು ಸಮಿತಿ ರಚಿಸಿದ್ದು, ಶಾಸಕರು ಸೇರಿದಂತೆ ಮುಖಂಡರ ಜತೆ ಚರ್ಚೆ ಮಾಡಲಾಗುವುದು. ಮುಂದಿನ ವಾರ ಇದು ಅಂತಿಮವಾಗಲಿದೆ ಎಂದು ತಿಳಿಸಿದರು.

ಜಾತಿ ಗಣತಿ: ಪಕ್ಷದ ನೀತಿಯಂತೆ ನಡೆ
ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯವೇ ಬೇರೆ, ಪಕ್ಷದ ಅಧ್ಯಕ್ಷರಾಗಿ ಅಭಿಪ್ರಾಯ ಬೇರೆ. ಪಕ್ಷದ ನೀತಿಯಂತೆ ನಾವು ನಡೆಯಬೇಕು. ಪಕ್ಷದ ನೀತಿಯನ್ನು ನಾನೊಬ್ಬನೇ ತೀರ್ಮಾನಿಸಲು ಆಗುವುದಿಲ್ಲ. ಇಡೀ ಪಕ್ಷ ಹಾಗೂ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ರಾಹುಲ್‌ ಗಾಂಧಿ ನಮಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದು, ಪಕ್ಷದ ಪ್ರಣಾಳಿಕೆಯಲ್ಲಿ ಕೆಲವು ವಿಚಾರ ಪ್ರಸ್ತಾವವಾಗಿವೆ. ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಗೃಹ ಸಚಿವನಲ್ಲ. ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ನನಗೆ ಗೊತ್ತೂ ಇಲ್ಲ. ನಾನು ದಸರಾ ಕಾರ್ಯಕ್ರಮ ಉದ್ಘಾಟನೆ ಹಾಗೂ ಚನ್ನಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಯಲ್ಲಿ ನಿರತನಾಗಿ¨ªೆ.
-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.