ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ನನ್ನ ಹೆಸರು ಏಕೆ ಬರೆದರೋ ಗೊತ್ತಿಲ್ಲ

Team Udayavani, May 29, 2024, 6:45 AM IST

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧಿಕಾರಿ ಚಂದ್ರಶೇಖರ್‌ ಮರಣ ಪತ್ರದಲ್ಲಿ ನನ್ನ ಹೆಸರು ಏಕೆ ಬರೆದಿದ್ದಾರೆಂದು ಗೊತ್ತಿಲ್ಲ. ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ತಮಗೆ ತಾವೇ ಪ್ರಮಾಣೀಕರಿಸಿಕೊಂಡರು.ನಿಗಮದಲ್ಲಿ ಇಂತಹದೊಂದು ಘಟನೆ ನಡೆದಿದೆ ಎನ್ನುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ನಾವೆಲ್ಲರೂ ಲೋಕಸಭೆ, ವಿಧಾನಪರಿಷತ್‌ ಚುನಾವಣಾ ಕಾರ್ಯದಲ್ಲಿದ್ದೆವು. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಲಾಖೆ ಹಾಗೂ ನಿಗಮದ ವ್ಯವಹಾರಗಳಲ್ಲಿ ತಲೆ ಹಾಕಿಲ್ಲ. ನಾನು ಯಾವುದೇ ಆದೇಶ ನೀಡುವುದಾದರೂ ದಾಖಲೆ ಸಮೇತ ಸಹಿ ಮಾಡಿಯೇ ಕೊಡುತ್ತೇನೆ. ಮೌಖೀಕ ಆದೇಶಗಳನ್ನೆಲ್ಲಾ ಕೊಡುವವನಲ್ಲ. ಆದರೂ ನನ್ನ ಹೆಸರು ಹೇಗೆ ಥಳಕು ಹಾಕಿಕೊಂಡಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಎರಡೂ ತಿಂಗಳಾದರೂ ನನ್ನ ಗಮನಕ್ಕೆ ಬಂದಿಲ್ಲ:
ನಿಗಮದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಒಟ್ಟು 187 ಕೋಟಿ ರೂ. ಹಣವಿಡಲಾಗಿತ್ತು. ಈ ಪೈಕಿ 87 ಕೋಟಿ ರೂ.ಗಳು ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿನ ಅನಧಿಕೃತ ಖಾತೆಗೆ ವರ್ಗಾವಣೆ ಆಗಿದೆ. ಮಾರ್ಚ್‌ 30 ರಂದು ಈ ಘಟನೆ ನಡೆದಿದ್ದು, ಇದುವರೆಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಮಾಧ್ಯಮಗಳ ವರದಿ ನೋಡಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ.ಪದ್ಮನಾಭ ಅವರನ್ನು ವಿಚಾರಿಸಿದಾಗ ಈ ಬಗ್ಗೆ ವಿವರಿಸಿದರು.

ಸೋಮವಾರ ಸಂಜೆಯೊಳಗೆ ಅಷ್ಟೂ ಹಣ ಬ್ಯಾಂಕ್‌ ಖಾತೆಯಲ್ಲಿ ಇರಬೇಕು ಎಂದು ಸೂಚಿಸಿದ್ದೆ. ಅಷ್ಟರಲ್ಲಿ ಲೆಕ್ಕಾಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

ಸಿಐಡಿ ತನಿಖೆಗೆ ವಹಿಸಿ ಆದೇಶ:
ಇಷ್ಟೆಲ್ಲಾ ನಡೆದರೂ ನಿಗಮದ ಎಂಡಿಯಾಗಲೀ, ಯಾವ ಸಿಬ್ಬಂದಿಯೂ ನನ್ನ ಗಮನಕ್ಕೆ ತಂದಿಲ್ಲ. ಇದರ ಸಲುವಾಗಿಯೇ ಸೋಮವಾರ ಸಿಎಂ ಮತ್ತು ಡಿಸಿಎಂ ಅವರ ಗಮನಕ್ಕೂ ತಂದಿದ್ದು ತಕ್ಷಣವೇ ಇದನ್ನು ಸಿಐಡಿ ತನಿಖೆಗೂ ವಹಿಸಲಾಗಿದೆ. ನಿಗಮದ ಎಂಡಿ ಪದ್ಮನಾಭ, ಮತ್ತೋರ್ವ ಅಧಿಕಾರಿ ದುರ್ಗಣ್ಣ ಪ್ರಶಾಂತ್‌ ಮತ್ತು ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕಿ ಶುಚಿಸ್ಮಿತಾ ರಾಹುಲ್‌ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಸಿಐಡಿ ಅಧಿಕಾರಿಗಳು ಶಿವಮೊಗ್ಗಕ್ಕೂ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದರು.

ನಿಗಮದ ಎಂಡಿ ಸಹಿಯೂ ನಕಲು:
ಇದೆಲ್ಲದರ ಮಧ್ಯೆ ನಿಗಮದ ಎಂಡಿ ಪದ್ಮನಾಭ ಕೂಡ ಪೊಲೀಸರಿಗೆ ಮತ್ತೊಂದು ದೂರು ಕೊಟ್ಟಿದ್ದು, ತಮ್ಮ ಸಹಿಯನ್ನು ನಕಲು ಮಾಡಿ ಯಾರೋ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಅದರ ವರದಿಗಾಗಿ ಕಾಯುತ್ತಿದ್ದೇವೆ. ನಿಗಮ ಹಾಗೂ ಬ್ಯಾಂಕ್‌ ಸಿಬ್ಬಂದಿ ಸೇರಿಯೇ ಈ ಕೃತ್ಯ ಎಸಗಿರುವಂತಿದೆ. 87 ಕೋಟಿ ರೂ.ಗಳಲ್ಲಿ 26 ಕೋಟಿ ರೂ. ವಾಪಸ್‌ ಬಂದಿದ್ದು ಉಳಿದ ಹಣ ವಾಪಸ್‌ ತರುವ ಜವಾಬ್ದಾರಿಯನ್ನು ನಿಗಮದ ಎಂಡಿಗೆ ವಹಿಸಿದ್ದೇವೆ. ಹೀಗಾಗಿ ಅವರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಸಿಐಡಿ ತನಿಖಾ ವರದಿ ಹಾಗೂ ಎಫ್ಎಸ್‌ಎಲ್‌ ವರದಿ ಬಂದ ಬಳಿಕ ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಜರುಗಿಸದೇ ಬಿಡುವುದಿಲ್ಲ. ಎಂಡಿಯನ್ನು ಸೇವೆಯಿಂದ ವಜಾ ಮಾಡಲೂ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಎಲ್ಲದಕ್ಕೂ ವಿರೋಧ ಪಕ್ಷದವರು ಇದೇ ರೀತಿಯ ಹೇಳಿಕೆ ಕೊಡುತ್ತಲೇ ಇದ್ದಾರೆ. ಏಕೆ ಆತ್ಮಹತ್ಯೆ ಆಯಿತು ಇತ್ಯಾದಿಗಳನ್ನು ತಿಳಿದು ಮಾತನಾಡಬೇಕು. ಅತಿರೇಕದ ಹೇಳಿಕೆಗಳನ್ನೇ ಕೊಡುತ್ತಿದ್ದಾರೆ. ಅವರ ಕಾಲದಲ್ಲಿ ಯಾವ ರೀತಿ ಆಡಳಿತ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ವಿಷಯ ತಿಳಿದು ಮಾತನಾಡಿದರೆ ಒಳ್ಳೆಯದು ಅವರು.
-ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.