![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 14, 2023, 7:52 AM IST
ಬೆಂಗಳೂರು: ವಿಧಾನ ಪರಿಷತ್ನ ಮೂರು ನಾಮಕರಣ ಸದಸ್ಯ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು 6 ಮಂದಿ ಸಂಭವನೀಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಬಳಿಕ ಮೂರು ಮಂದಿ ಒಟ್ಟಿಗೆ ಕುಳಿತು ನಡೆಸಿದ ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.
ನಾಮಕರಣ ಸದಸ್ಯ ಸ್ಥಾನಗಳಿಗೆ ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ, ಮೇಲ್ಮನೆ ಮಾಜಿ ಸಭಾಪತಿ ಡಾ| ಬಿ.ಎಲ್. ಶಂಕರ್, ಮೇಲ್ಮನೆ ಮಾಜಿ ಸದಸ್ಯ ಐವನ್ ಡಿ’ಸೋಜಾ, ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಜುನಾಥ ಗೌಡ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಹೆಸರುಗಳಿವೆ. ಜತೆಗೆ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ 3 ಉಪ ಚುನಾವಣೆಗಳಿಗೆ ಸಚಿವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ದಿಲ್ಲಿಯಲ್ಲಿ ಮತ್ತೂಂದು ಸುತ್ತಿನ ಸಭೆ ನಡೆದ ಬಳಿಕ ಜೂ. 17 ಇಲ್ಲವೇ 18ರಂದು ಅಧಿಕೃತವಾಗಿ ಪಟ್ಟಿ ಹೊರಬೀಳಲಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.