ಹೆಚ್ಚುವರಿ ಹಣ ವಸೂಲಿ ಮಾಡಿದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ: ಕೆ.ಸುಧಾಕರ್


Team Udayavani, Aug 21, 2022, 12:48 PM IST

ಹೆಚ್ಚುವರಿ ಹಣ ವಸೂಲಿ ಮಾಡಿದ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ: ಕೆ.ಸುಧಾಕರ್

ಬೆಂಗಳೂರು: ಕೋವಿಡ್‌ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರ್ಕಾರದಿಂದಲೂ ಹಣ ಪಡೆದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, 577 ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಿಸಿದ್ದಾರೆ. ಹಾಗೆಯೇ, 403 ರೋಗಿಗಳ ಕುಟುಂಬಗಳಿಗೆ 1,58,22,359 ರೂ. ಹಣವನ್ನು ಹಿಂದಿರುಗಿಸಿ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್‌ ಆಧಾರದಲ್ಲಿ ಕೋವಿಡ್‌ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು. ಕೋವಿಡ್‌ ರೋಗಿಗಳ ಕುಟುಂಬಕ್ಕೆ ನೆರವಾಗುವ ಸದುದ್ದೇಶದಿಂದ ಸರ್ಕಾರ ಈ ಪ್ರಯೋಜನವನ್ನು ನೀಡುತ್ತಿದೆ. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ.

ಈ ಕುರಿತು ದೂರುಗಳು ಬಂದಾಗ, ತಕ್ಷಣ ಕ್ರಮ ವಹಿಸಿದ ಸಚಿವ ಡಾ.ಕೆ.ಸುಧಾಕರ್, ಪರಿಶೀಲನೆ ನಡೆಸಿ ನೊಟೀಸ್‌ ಜಾರಿ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ, ಈವರೆಗೆ 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಟ್ಟು 18.87 ಕೋಟಿ ರೂ. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದುಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ.

ಚಿಕಿತ್ಸಾ ವೆಚ್ಚ ಭರಿಸಿದ ಸರ್ಕಾರ: ಕೋವಿಡ್‌ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗಿದೆ. ಮೊದಲನೇ ಅಲೆಯಲ್ಲಿ, 2020 ರ ಮಾರ್ಚ್‌ನಿಂದ 2021 ರ ಮಾರ್ಚ್‌ವರೆಗೆ 391.26 ಕೋಟಿ ರೂ., ಎರಡನೇ ಅಲೆಯಲ್ಲಿ, 2021ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 376.76 ಕೋಟಿ ರೂ. ಹಾಗೂ ಮೂರನೇ ಅಲೆಯ ವೇಳೆ, 2022 ರ ಜನವರಿಯಿಂದ ಮಾರ್ಚ್‌ವರೆಗೆ 11.80 ಕೋಟಿ ರೂ. ಪಾವತಿಸಲಾಗಿದೆ.

ಇದನ್ನೂ ಓದಿ:ಅಂದ್ರಗಿನಾ ಇನ್ನೊಂದ್‌ಕಿತಾ ಸಿದ್ರಾಮಣ್ಣೋರೂ ಗುಡಾ ಸಿಎಮ್‌ ಆಗ್ಲೀ…

ಈ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈವರೆಗೆ 1.58 ಕೋಟಿ ರೂ.ನಷ್ಟು ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಇದು, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟ ಎಚ್ಚರಿಕೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.