ಪುಟಾಣಿ ಮಕ್ಕಳ ಗ್ರಂಥಾಲಯ ಬಳಕೆಗಾಗಿ “ಓದುವ ಬೆಳಕು’

ಗ್ರಾಮೀಣಾಭಿವೃದ್ದಿ ಮತ್ತು ಪಂ.ರಾಜ್‌, ಗ್ರಂಥಾಲಯ ಇಲಾಖೆ ಜತೆಗೂಡಿ ಕಾರ್ಯಕ್ರಮ

Team Udayavani, Apr 10, 2022, 8:05 AM IST

ಪುಟಾಣಿ ಮಕ್ಕಳ ಗ್ರಂಥಾಲಯ ಬಳಕೆಗಾಗಿ “ಓದುವ ಬೆಳಕು’

ಬೆಂಗಳೂರು: ಮಕ್ಕಳಲ್ಲಿ ಓದುವ ಹವ್ಯಾಸ ಮೂಡಿಸಲು, ಓದುವ ಚಟುವಟಿಕೆಗಳನ್ನು ರೂಪಿಸಿ ಅವರ ಮುಂದಿನ ಕಲಿಕೆ ಸುಗಮಗೊಳಿಸಲು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಗ್ರಂಥಾಲಯ ಇಲಾಖೆ ಜತೆಗೂಡಿ “ಓದುವ ಬೆಳಕು’ ಕಾರ್ಯಕ್ರಮ ರೂಪಿಸಿದೆ.

ಮೂರನೇ ತರಗತಿಯ ಹಂತದಲ್ಲೆ ವಿದ್ಯಾರ್ಥಿಗಳು ದಿನಪತ್ರಿಕೆ ಹಾಗೂ ಪುಸ್ತಕಗಳನ್ನು ಓದಿ ಅರ್ಥೈಸಿಕೊಳ್ಳುವುದು ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುವುದು ಇದರ ಉದ್ದೇಶವಾಗಿದೆ. ಓದುವ ಬೆಳೆಕು ಕಾರ್ಯಕ್ರಮಕ್ಕೆ ಈಗಾಗಲೇ ಗ್ರಾಮ ಪಂಚಾಯತ್‌ಗಳಲ್ಲಿ ಸ್ಥಾಪಿಸಲಾಗಿರುವ ಗ್ರಂಥಾಲಯಗಳನ್ನು ಮಕ್ಕಳು ಮತ್ತು ಶಾಲಾ ಶಿಕ್ಷಕರು ಬಳಸಿಕೊಳ್ಳುವಂತೆ ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸೂಚಿಸಿದೆ. ಈ ಸಂಬಂಧ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜತೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ.

ಕಲಿಕೆಗೆ ನಾಂದಿಯಾಗುವ ಆಶಯ
1ರಿಂದ 12ನೇ ತರಗತಿ ವಿದ್ಯಾರ್ಥಿಗಳಲ್ಲಿ ಓದಿ ಅರ್ಥೈಸಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿ ಸಮುದಾಯದಲ್ಲಿ ಬೆಳೆಸುವುದು ಕೂಡ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿಯಾಗಿದೆ. ಜತೆಗೆ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್‌ ಹಾಗೂ ನಗರ ವ್ಯಾಪ್ತಿಯಲ್ಲಿರುವ ನಗರ ಕೇಂದ್ರ ಗ್ರಂಥಾಲಯಗಳಿಗೆ ಭೇಟಿ ನೀಡಿ ಕಥಾ ಪುಸ್ತಕಗಳು, ಪುರವಣಿಗಳು, ನಿಯತಕಾಲಿಕೆಗಳು, ವಾರ್ತಾ ಪತ್ರಿಕೆಗಳು, ವಾರ ಪತ್ರಿಕೆಗಳನ್ನು ಓದಿ ಅರ್ಥೈಯಿಸಿಕೊಂಡು ಮುಂದಿನ ಕಲಿಕೆಗೆ ನಾಂದಿಯಾಗಲಿ ಎನ್ನುವ ಆಶಯ ಇದರಲ್ಲಿ ಸೇರಿದೆ ಎಂದು ಪಂಚಾಯತ್‌ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಶೇ. 100 ಗುರಿ
ಈ ಕಾರ್ಯ ಸಾಧನೆಗಾಗಿ ಗುರಿ ಹೊಂದಲಾಗಿದೆ. 2026-27ರ ಒಳಗೆ 3ನೇ ತರಗತಿಯ ಶೇ. 100ರಷ್ಟು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಓದುವ ಕೌಶಲವನ್ನು ಹೊಂದುವಂತೆ ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿಗಳೊಂದಿಗೆ ಶಾಲೆಗಳು, ಶಿಕ್ಷಕರು ಹಾಗೂ ಸಮುದಾಯ ಕೂಡ ಕೈ ಜೋಡಿಸಿ ಗುರಿ ಮಟ್ಟಲು ಶ್ರಮಿಸಬೇಕಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಶಿಕ್ಷಕರ ಭೇಟಿ ಕಡ್ಡಾಯ
ಶಾಲಾ ಮಕ್ಕಳು ವಾರದಲ್ಲಿ ಒಮ್ಮೆ ಕಡ್ಡಾಯವಾಗಿ ಗ್ರಂಥಾಲಯಕ್ಕೆ ಶಾಲಾ ಶಿಕ್ಷಕರೊಂದಿಗೆ ಭೇಟಿ ನೀಡುವುದು ಕೂಡ ಇದರಲ್ಲಿ ಸೇರಿದೆ. ಜತೆಗೆ 1ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ಹಿರಿಯ ತರಗತಿ ವಿದ್ಯಾರ್ಥಿಗಳೊಡನೆ ಒಗ್ಗೂಡಿಸಿ ಜಂಟಿ ಓದುವಿಕೆಯಲ್ಲಿ ತೊಡಗಿಸಿಕೊಳ್ಳುವುದು. ಹಾಗೂ 4ರಿಂದ 6ರ ವಯೋಮಾನದ ಮಕ್ಕಳು ಸಹ ಗ್ರಂಥಾಲಯಗಳಿಗೆ ಭೇಟಿ ನೀಡಲು ಪ್ರೇರೇಪಿಸಿ ಅವರಿಗೆ ಪುಸ್ತಕಗಳನ್ನು ಓದುವ ಹಾಗೂ ಅವುಗಳನ್ನು ಬಳಸುವ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಕ್ಕಳಲ್ಲಿ ಪುಟ್ಟವಯಸ್ಸಿನಲ್ಲೆ ಓದಿನ ಅಭಿರುಚಿ ಬೆಳೆಸುವುದರ ಜತೆಗೆ ಅರ್ಥೈಸಿಕೊಂಡು ಓದುವುದಕ್ಕೆ ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ರೂಪಿತ ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಜ್ಞಾನದ ಅಭಿರುಚಿ ಬಿತ್ತಲಿದೆ.
– ಡಾ| ಸತೀಶ ಕುಮಾರ್‌ ಹೊಸಮನಿ, ನಿರ್ದೇಶಕರು ಗ್ರಂಥಾಲಯ ಇಲಾಖೆ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.