ಕಂದಾಯ ನ್ಯಾಯಾಲಯಗಳಲ್ಲಿ ಲಕ್ಷ ಅರೆ ನ್ಯಾಯಿಕ ಪ್ರಕರಣಗಳು ಬಾಕಿ


Team Udayavani, Apr 20, 2022, 6:35 AM IST

ಕಂದಾಯ ನ್ಯಾಯಾಲಯಗಳಲ್ಲಿ ಲಕ್ಷ ಅರೆ ನ್ಯಾಯಿಕ ಪ್ರಕರಣಗಳು ಬಾಕಿ

ಬೆಂಗಳೂರು: ರಾಜ್ಯದಲ್ಲಿ ಕಂದಾಯ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಭಾರ ಹೆಚ್ಚಾಗುತ್ತಲೆ ಇದೆ. ಸದ್ಯ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ 1 ಲಕ್ಷಕ್ಕೂ ಅಧಿಕ ಅರೆ ನ್ಯಾಯಿಕ ಪ್ರಕರಣಗಳು ಬಾಕಿ ಇವೆ.

ಜಮೀನಿನ ಹಕ್ಕು ವರ್ಗಾವಣೆ, ಮ್ಯುಟೇಶನ್‌, ಖಾತಾ ಮತ್ತು ಆರ್‌. ಟಿ.ಸಿ. ಬದಲಾವಣೆಗಳಿಗೆ ಸಂಬಂಧಿಸಿದ ಅರೆ ನ್ಯಾಯಿಕ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸುತ್ತಾರೆ. ಆದರೆ, ಅಧಿಕಾರಿಗಳ ಕಾರ್ಯಬಾಹುಳ್ಯದ ಪರಿಣಾಮ ಅರೆ ನ್ಯಾಯಿಕ ಪ್ರಕರಣಗಳ ಬಾಕಿ ಹೆಚ್ಚುತ್ತಲೆ ಇದೆ.

ಅದಕ್ಕಾಗಿ ಈ ಬಾಕಿ ಪ್ರಕರಣಗಳ ಭಾರ ಇಳಿಸಲು ಕಂದಾಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಎಲ್ಲ ಅರೆ ನ್ಯಾಯಿಕ ಕಂದಾಯ ನ್ಯಾಯಾಲಯಗಳು ಪ್ರಕರಣಗಳ ವಿಚಾರಣೆಯನ್ನು ವಾರದ ಪ್ರತಿ ಮಂಗಳವಾರ ಮತ್ತು ಗುರುವಾರಗಳಂದು ಪೂರ್ಣದಿನ ಕಡ್ಡಾಯವಾಗಿ ನಡೆಸಲು ನಿರ್ದೇಶನ ನೀಡಿದೆ. ಅದೇ ರೀತಿ ಮ್ಯುಟೇಶನ್‌, ಖಾತಾ ಮತ್ತು ಆರ್‌ಟಿಸಿ ಬದಲಾವಣೆಗೆ ಸಲ್ಲಿಕೆಯಾಗುವ ಅರ್ಜಿಗಳು ವಿವಾದರಹಿತವಾದ ಪ್ರಕರಣಗಳಿದ್ದಲ್ಲಿ ಖಾತೆ ಬದಲಾವಣೆಯನ್ನು 60 ದಿನಗಳಲ್ಲಿ ಭೂಮಿ ತಂತ್ರಾಂಶದ ಮೂಲಕ ಸಕಾಲ ಸೇವೆಗಳಡಿ ವಿಲೇವಾರಿ ಮಾಡಲಾಗುತ್ತಿದೆ.

ಅಲ್ಲದೇ ಅರ್ಜಿಯು ಆಸ್ತಿಯ ಹಕ್ಕಿನ ಹೊರತಾದ ವಿವಾದಿತ ಪ್ರಕರಣವಾಗಿದ್ದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮದ ಪ್ರಕಾರ ತಹಶೀಲ್ದಾರರು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಮೇಲ್ಮನವಿಗಳನ್ನು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳು 6 ತಿಂಗಳಲ್ಲಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:ಬಂಡೀಪುರ ಸಂರಕ್ಷಿತ ಪ್ರದೇಶದಲ್ಲಿ ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ!

ಅಧಿಕಾರಿಗಳಿಗೆ ತಿಂಗಳ ಗುರಿ
ಬಾಕಿ ಪ್ರಕರಣಗಳ ವಿಲೇವಾರಿಯನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಸರಕಾರ ತಿಂಗಳ ಗುರಿ ನೀಡಿದೆ. ಅದರಂತೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಅರೆ ನ್ಯಾಯಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನ ಸಭೆ ನಡೆಸಿ, ಪ್ರತಿ ಜಿಲ್ಲಾಧಿಕಾರಿ ಪ್ರತಿ ತಿಂಗಳು 75 ಪ್ರಕರಣಗಳನ್ನು ಹಾಗೂ ಉಪ ವಿಭಾಗಾಧಿಕಾರಿಗಳು ಪ್ರತಿ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಗುರಿ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.