ಶ್ರೀ ಶಾರದಾ ಪೀಠದ ಕುಂಭಾಭಿಷೇಕಕ್ಕೆ ತೆರೆ
Team Udayavani, Feb 13, 2017, 3:45 AM IST
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿದ್ದ ಕುಂಭಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು ಭಾನುವಾರ ಕೋಟಿ ಕುಂಕುಮಾರ್ಚನೆಯೊಂದಿಗೆ ಮುಕ್ತಾಯಗೊಂಡಿತು. ಶ್ರೀ ಶಾರದಾಂಬಾ ರಥೋತ್ಸವವು ಸೋಮವಾರ ಬೆಳಗ್ಗೆ
ನಡೆಯಲಿದ್ದು, ಉಭಯ ಜಗದ್ಗುರುಗಳು ರಥೋತ್ಸವದಲ್ಲಿ ಪಾಲ್ಗೊಳ್ಳುವರು. ಕಳೆದ 15 ದಿನಗಳಿಂದ ಶ್ರೀ ಮಠದಲ್ಲಿ
300 ಕ್ಕೂ ಹೆಚ್ಚು ಋತ್ವಿಜರಿಂದ ನಡೆಯುತ್ತಿದ್ದ ಹೋಮ, ಹವನಗಳು ಭಾನುವಾರ ಮುಕ್ತಾಯಗೊಂಡಿದೆ. ಶ್ರೀ
ಶಾರದಾಲಯ ಸ್ವರ್ಣ ಶಿಖರದ ಕುಂಭಾಭಿಷೇಕದ ನಿಮಿತ್ತವಾಗಿ ಶ್ರೀಮಠದಲ್ಲಿ ಗಾಯತ್ರಿ ಹೋಮ, ಲಕ್ಷ ಮೋದಕ ಗಣಪತಿ ಹೋಮ, ಹನ್ನೆರಡು ದಿನಗಳ ಕಾಲ ನಡೆದ ಅತಿರುದ್ರಮಹಾಯಾಗ, ಸಹಸ್ರ ಚಂಡಿಕಾ ಮಹಾಯಾಗ ನಡೆಯಿತು. ಭಾನುವಾರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಬೆಳಗ್ಗೆ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಬೆಳಗ್ಗೆ ಶ್ರೀ ಶಾರದಾ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ನಂತರ ಶ್ರೀ ಮಠದ ಹೊರ ಪ್ರಾಂಗಣ ಹಾಗೂ ಒಳ ಪ್ರಾಂಗಣದ ಎಲ್ಲಾ ದೇವಸ್ಥಾನಗಳಿಗೆ ಜಗದ್ಗುರುಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆಯ ಕೊನೆಯ ದಿನದ ಕಲಾಪದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.