ಕೇಂದ್ರದ ನೂತನ ಹಾಲ್‌ ಮಾರ್ಕ್‌ ನೀತಿಗೆ ಆಭರಣ ವ್ಯಾಪಾರಿಗಳ ವಿರೋಧ


Team Udayavani, Aug 23, 2021, 11:00 PM IST

ಕೇಂದ್ರದ ನೂತನ ಹಾಲ್‌ ಮಾರ್ಕ್‌ ನೀತಿಗೆ ಆಭರಣ ವ್ಯಾಪಾರಿಗಳ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರದ ನೂತ ಹಾಲ್‌ಮಾರ್ಕ್‌ ನೀತಿಗೆ ಕರ್ನಾಟಕ ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌ ಆಕ್ಷೇಪ ವ್ಯಕ್ತಪಡಿಸಿದೆ. ಆಭರಣ ಕ್ಷೇತ್ರದಲ್ಲಿ  ಪಾರದರ್ಶಕತೆ ತರಲು “ಹಾಲ್‌ ಮಾರ್ಕಿಂಗ್‌ ಯೂನಿಕ್‌ ಐಡಿ’ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು ಇದನ್ನು ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್‌ ವಿರೋಧಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕರ್ನಾಟಕ ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಟಿ.ಎ.ಶರವಣ, ಹಾಲ್‌ ಮಾರ್ಕಿಂಗ್‌ ವ್ಯವಸ್ಥೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ ಯೂನಿಕ್‌ ಐಡಿ ವ್ಯವಸ್ಥೆಯನ್ನು ವಿರೋಧಿಸುತ್ತೇವೆ. ಈ ವ್ಯವಸ್ಥೆಯಿಂದ ಆಭರಣ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ತೊಂದರೆ ಉಂಟಾಗಲಿದೆ ಎಂದು ಹೇಳಿದರು.

ಯೂನಿಕ್‌ ಐಡಿ ವ್ಯವಸ್ಥೆಯಿಂದ ಗ್ರಾಹಕರಿಗೆ ಕಿರಿಕಿರಿ ಉಂಟಾಗಲಿದೆ. ಗ್ರಾಹಕರ ಮತ್ತು ಆಭರಣ ಖರೀದಿದಾರರ ನಡುವಿನ ಬಾಂಧವ್ಯಕ್ಕೆ ಧಕ್ಕೆ ಉಂಟಾಗಲಿದೆ. ಎಲ್ಲದಕ್ಕೂ ಮಿಗಿಲಾಗಿ ಖರೀದಿದಾರರ ಖಾಸಗಿ ತನಕ್ಕೆ ಧಕ್ಕೆ ಉಂಟಾಗಲಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೂತನ ಹಾಲ್‌ ಮಾರ್ಕ್‌ ನೀತಿಯನ್ನು ವಿರೋಧಿಸುತ್ತಿರುವುದಾಗಿ ತಿಳಿಸಿದರು.

ಈ ವ್ಯವಸ್ಥೆಯನ್ನು ಜಾರಿ ಮಾಡಿ ಕೇಂದ್ರ ಸರ್ಕಾರ ಪರೋಕ್ಷವಾಗಿ ಮಾನಸಿಕ ಒತ್ತಡ ಹೇರುವ ಜತೆಗೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗುವಂತಾಗಲು ಸರ್ಕಾರವೇ ಅನುವು ಮಾಡಿಕೊಟ್ಟಂತಿದೆ. ಕೆಲವು ತುರ್ತು ಸಂದರ್ಭದಲ್ಲಿ ಮದುವೆ ಮತ್ತಿತರರ ಸಮಾರಂಭಗಳಿಗೆ ಮಾಂಗಲ್ಯ, ಬಳೆ, ಉಂಗುರ ಮತ್ತಿತರರ ಆಭರಣಗಳನ್ನು ಖರೀದಿಸಲು ಗ್ರಾಹಕರಿಗೆ ತೊಂದರೆ ಆಗುತ್ತಿದೆ ಎಂದು ದೂರಿದರು.

ಆಭರಣ ವ್ಯಾಪಾರಿಗಳು 2ಲಕ್ಷ ರೂ.ಗೂ ಹೆಚ್ಚು ಮೊತ್ತದ ಖರೀದಿ ಮಾಡುವವರಿಂದ ಸೂಕ್ತ ದಾಖಲೆ ಪಡೆದು ಆಭರಣ ಮಾರಾಟ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಈ ಆದೇಶದ ವಿರುದ್ಧ ಆಭರಣ ಅಸೋಸಿಯೇಷನ್‌ ನ್ಯಾಯಾಲಯದ ಮೆಟ್ಟಿಲನ್ನು ಏರಲಿದೆ ಎಂದು ಹೇಳಿದರು. ಜ್ಯುವೆಲ್ಲರಿ ಅಸೋಸಿಯೇಷನ್‌ ಬೆಂಗಳೂರು ಅಧ್ಯಕ್ಷ ವೈ.ಎಸ್‌.ರವಿಕುಮಾರ್‌, ಕೇಂದ್ರ ಸರ್ಕಾರ ಈ ವ್ಯವಸ್ಥೆಯನ್ನು ಜಾರಿಗೊಳಿಸುವ ಮೊದಲು ಇದರ ಸಾಧಕ ಬಾಧಕಗಳ ಬಗ್ಗೆ ಸರ್ಕಾರ ಗಮನಹರಿಸಬೇಕಾಗಿತ್ತು. ಆಭರಣ ಹಾಲ್‌ ಮಾರ್ಕ್‌ ಕೇಂದ್ರಗಳನ್ನು ಸೂಸುತ್ರವಾಗಿ ತೆರೆದು ಆ ನಂತರ ಹಾಲ್‌ಮಾರ್ಕ್‌ ಐಡಿ ಜಾರಿಗೆ ಮುಂದಾಗಬೇಕಾಗಿತ್ತು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಜನವಿರೋಧಿ ಹಾಲ್‌ಮಾರ್ಕ್‌ ಪದ§ತಿಯನ್ನು ಹಿಂಪಡಯಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ  ಇದರ ವಿರುದ್ಧ ಬೀದಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಸಂಘದ ಪದಾಧಿಕಾರಿಗಳಾದ ರವಿಕುಮಾರ್‌,ಪ್ರಕಾಶ್‌, ನೇಮಿಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.