ಅಧಿಕಾರಿ, ಸಚಿವರ ಅನುಪಸ್ಥಿತಿಗೆ ಪ್ರತಿಪಕ್ಷ ಆಕ್ಷೇಪ


Team Udayavani, Feb 20, 2020, 3:06 AM IST

adhikari-sa

ವಿಧಾನ ಪರಿಷತ್‌: ಅಪರಾಹ್ನ ಕಲಾಪ ಆರಂಭ ಆಗುತ್ತಿದ್ದಂತೆ ಸೂಚಿತ ಅಧಿಕಾರಿಗಳು ಮತ್ತು ನಿರ್ದಿಷ್ಟ ಸಂಖ್ಯೆಯಲ್ಲಿ ಸಚಿವರು ಹಾಜರಾಗದೇ ಇರುವ ಬಗ್ಗೆ ಪ್ರತಿಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌ರೊಂದಿಗೆ ಕಾಂಗ್ರೆಸ್‌ ಸದಸ್ಯ ಐವಾನ್‌ ಡಿಸೋಜ, ಅಧಿಕಾರಿಗಳು ಹಾಗೂ ಸಚಿವರ ಅನುಪಸ್ಥಿತಿ ಕುರಿತು ಪ್ರಸ್ತಾಪ ಮಾಡಿದರು. ಆಡಳಿತ ಪಕ್ಷದ ನಾಯಕ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಲ್ಲರೂ ಇನ್ನು ಸ್ವಲ್ಪ ಹೊತ್ತಲ್ಲಿ ಬರುತ್ತಾರೆಂದು ಸಮಜಾಯಿಷಿ ನೀಡಿದರು. ಕಲಾಪದಲ್ಲಿ ಆಡಳಿತ-ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯೂ ಎದ್ದು ಕಾಣುತ್ತಿತ್ತು.

ಸಭಾಪತಿ ಪ್ರತಾಪ್‌ ಚಂದ್ರಶೆಟ್ಟಿ ಅವರು ಆರಂಭದಲ್ಲಿ ನಿಲುವಳಿ ಸೂಚನೆಯಡಿ ಮಾತನಾ ಡಲು ಕಾಂಗ್ರೆಸ್‌ ಸದಸ್ಯ ಪಿ.ಆರ್‌.ರಮೇಶ್‌ರಿಗೆ ಸೂಚಿಸಿದರು. ಹುಬ್ಬಳ್ಳಿ-ಧಾರವಾಡ ಕೆಎಲ್‌ಇ ಕಾಲೇಜಿನ ಮೂವರು ವಿದ್ಯಾರ್ಥಿಗಳು ದೇಶ ದ್ರೋಹ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಆದರೆ, ಕಾಲೇಜು ಪ್ರಾಂಶುಪಾಲರು ಇವರು ಪ್ರಧಾನಿ ಸ್ಕಾಲರ್‌ ಶಿಪ್‌ ಅಡಿ ಬಂದವರು ಎಂದು ಹೇಳಿದ್ದಾರೆ. ಇದರಿಂದ ಪ್ರಧಾನಿ ಕಾರ್ಯಾಲಯ ವಿಚಾರಣೆಗೆ ಎಳೆಯಬಾರದು ಎಂದು ವಿದ್ಯಾರ್ಥಿಗಳನ್ನು ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಇದೇ ಸಂದರ್ಭ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲಕಾಲ ಆರೋಪ, ಪ್ರತ್ಯಾರೋಪ ಕೇಳಿಬಂತು. ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಸದಸ್ಯರು ಆಗ್ರಹಿಸಿದರೆ, ಪ್ರಧಾನಿ ಕಾರ್ಯಾಲಯ ಎಲ್ಲವನ್ನೂ ಪರಿಶೀಲನೆ ಮಾಡಲು ಆಗಲ್ಲ ಎಂದು ಆಡಳಿತ ಪಕ್ಷದವರು ವಾದಿಸಿದರು.

ಅಮಾಯಕರನ್ನು ಗೋಲಿಬಾರ್‌ ಮಾಡಿ ಸಾಯಿಸಿ ದೇಶದ್ರೋಹ ಪ್ರಕರಣ ಹೇರಿದ್ದಾರೆ. ಎಷ್ಟು ಸರಿ ಎಂದು ಪ್ರತಿಪಕ್ಷ ನಾಯಕರು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದರು. ನೈತಿಕ-ಅನೈತಿಕ ಎಂಬ ಮಾತು ಎರಡೂ ಕಡೆಯಿಂದ ಕೇಳಿಬಂತು. 15 ನಿಮಿಷ ಗದ್ದಲದ ನಂತರ ತಿಳಿಯಾಗುತ್ತಾ ಬಂದಾಗ ಬಿಜೆಪಿ ಸದಸ್ಯರು ಪ್ರತಿಪಕ್ಷಗಳು ಸದನದಲ್ಲಿ ಸಂಘ ಪರಿವಾರದ ಹೆಸರು ಪ್ರಸ್ತಾಪಿಸಿದ್ದು ಸರಿಯಲ್ಲ ಎಂದರು.

ಕಾಂಗ್ರೆಸ್‌ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ಮಂಗಳೂರು ಗಲಭೆ ವೇಳೆ ಪೊಲೀಸರು ಸೋಡಾ ಬಾಟಲಿ ಬಳಸಿದ್ದಾರೆಂಬ ಪದಕ್ಕೆ, ಅನಿವಾರ್ಯ ಸಂದರ್ಭ ಪ್ರಾಣ ರಕ್ಷಣೆಗೆ ಬಳಸಿದ್ದರೂ ಬಳಸಿರಬಹುದು ಎಂಬ ಹೇಳಿಕೆಯನ್ನು ಆಡಳಿತ ಪಕ್ಷದ ನಾಯಕರು ನೀಡಿದರು. ಆದರೆ ಪೊಲೀಸರ ಕೈಲಿ ಲಾಠಿ ಇರುತ್ತದೆ. ಯಾರೋ ಎಸೆದ ಸೋಡಾ ಬಾಟಲಿ ಬಳಸುವ ಅವಶ್ಯಕತೆ ಇಲ್ಲ. ಲಾಠಿಯಿಂದ ಹೊಡೆದು ಪ್ರಾಣ ರಕ್ಷಿಸಿಕೊಳ್ಳಬಹುದು.

ಇಂತಹ ಪೊಲೀಸರನ್ನು ನಾನೆಲ್ಲೂ ಕಂಡಿಲ್ಲ. ಸೋಡಾ ಬಾಟಲಿ, ಕಲ್ಲು ಬಳಕೆ ಸರಿಯಲ್ಲ, ಪೊಲೀಸರ ಮೇಲೆ ನಮಗೂ ಗೌರವಿದೆ ಎಂದರು. ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಕೈಲಿ ಬಾಟಲಿ ಹಿಡಿದಿದ್ದರು ಎಂದಿದ್ದಾರೆ, ಹೊಡೆದಿದ್ದಾರೆ ಎಂದಿಲ್ಲ ಎಂಬ ಸಮಜಾಯಿಷಿ ನೀಡಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಆ ಕಡೆಯಿಂದ ಬಂದಿರುವ ಬಾಟಲಿಯನ್ನು ಕೈಯಲ್ಲಿ ಹಿಡಿದಿದ್ದಿರಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.