ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ವೀಡಿಯೋ ಬಿಡುಗಡೆ ಮಾಡಿದವರ ವಿರುದ್ದ ಕ್ರಮ ಆಗುತ್ತಿಲ್ಲ

Team Udayavani, May 20, 2024, 11:24 PM IST

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ಬೆಂಗಳೂರು: ನಾನು, ರೇವಣ್ಣ ಸಹಿತ ನಮ್ಮ ಕುಟುಂಬ ಹಾಗೂ ನನ್ನ ಸುತ್ತಮುತ್ತ ಇರುವ ಸುಮಾರು 40 ಜನರ ದೂರವಾಣಿಯನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಟಿ ತನಿಖೆ ಯಾವ ರೀತಿ ನಡೆಯುತ್ತಿದೆ? ಎಫ್ಐಆರ್‌ನಲ್ಲಿ ಏನೆಲ್ಲ ದೋಷಗಳಿವೆ? ಚಿತಾವಣೆಯ ಕಾರಣಕರ್ತರು ಯಾರು ಎಲ್ಲವೂ ಗೊತ್ತಿದೆ. ಬೆಂಗಳೂರಿನಲ್ಲಿ ಡಿಜಿಪಿ ಅಲೋಕ್‌ ಕುಮಾರ್‌ ಸಮ್ಮುಖದಲ್ಲೇ ರೇವಣ್ಣ ವಿರುದ್ಧದ ದೂರು ಪ್ರತಿಯನ್ನು ಟೈಪ್‌ ಮಾಡಿ ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳುಹಿಸಲಾಗಿದೆ ಎಂದು ದೂರಿದರು.

ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಬಿಡುಗಡೆ ಮಾಡಿದ ಯಾರ ವಿರುದ್ಧವೂ ಕ್ರಮ ಆಗುತ್ತಿಲ್ಲ. ಸಂತ್ರಸ್ತೆಯರ ಮರ್ಯಾದೆ ಹರಾಜು ಹಾಕಿದವರ ವಿರುದ್ಧವೂ ಕ್ರಮ ಆಗಿಲ್ಲ. ಹೀಗಾಗಿಯೇ ಸಿಬಿಐ ತನಿಖೆಗೆ ಆಗ್ರಹಿಸು ತ್ತಿದ್ದೇವೆ. ನಮ್ಮ ಸಿ.ಡಿ. ಶಿವು ಬಂಡವಾಳ ಹೊರಗೆ ಬರುತ್ತದೆ ಎಂದು ದೇವರಾಜೇಗೌಡರನ್ನೂ ಬಂಧಿಸಲಾಗಿದೆ ಎಂದು ದೂರಿದರು.

ಕದ್ದಾಲಿಸಲು ಎಚ್‌ಡಿಕೆ, ರೇವಣ್ಣ ಭ‌ಯೋತ್ಪಾದಕರಾ?
ಬೆಂಗಳೂರು: ದೂರವಾಣಿ ಕದ್ದಾಲಿಸಲು ಎಚ್‌.ಡಿ. ಕುಮಾರಸ್ವಾಮಿ ಮತ್ತು ಎಚ್‌.ಡಿ. ರೇವಣ್ಣ ಅವರೇನು ಭಯೋ ತ್ಪಾದಕರೇ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಭಯೋತ್ಪಾದಕರ ದೂರವಾಣಿ ಗಳನ್ನು ಅನುಮತಿ ಪಡೆದು ಕದ್ದಾಲಿಸ ಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ದೂರವಾಣಿಗಳನ್ನು ಕದ್ದಾಲಿಸುವ ಅಗತ್ಯ ನಮ್ಮ ಸರಕಾರಕ್ಕಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪ ಮಾಡುತ್ತಿ¨ªಾರೆ. ದೂರವಾಣಿ ಕದ್ದಾಲಿಕೆಯಂಥ ಮುಠಾuಳತನದ ಕೆಲಸವನ್ನು ನಮ್ಮ ಸರಕಾರ ಮಾಡುವುದಿಲ್ಲ ಎಂದರು.

ಸರಕಾರ ಒಂದು ವರ್ಷ ಐಸಿಯುನಲ್ಲಿತ್ತು ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿ ಕ್ರಿಯಿ ಸಿದ ಡಿ.ಕೆ.ಶಿ., ಅವರು ಇನ್ನೇನು ಹೇಳಲು ಸಾಧ್ಯ? ಆದರೆ ಇದನ್ನು ಜನ ಹೇಳಬೇಕು; ನಾಯಕರಲ್ಲ. ಈ ಹಿಂದಿನ ಸರಕಾರದ ಕೆಟ್ಟ ಆಡಳಿತ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರ ಜೀವನದಲ್ಲಿ ನಮ್ಮ ಸರಕಾರದ ಆಡಳಿತದಿಂದ ಬದಲಾವಣೆ ಉಂಟಾಗಿದೆ ಎಂದರು.

ಯಾರ ದೂರವಾಣಿಯನ್ನೂ ಕದ್ದಾಲಿಸಿಲ್ಲ: ಪರಂ
ಹುಬ್ಬಳ್ಳಿ: ರಾಜ್ಯ ಸರಕಾರ ಅಥವಾ ಗೃಹ ಇಲಾಖೆಯಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಹಿತ ಯಾವುದೇ ನಾಯಕರ ದೂರವಾಣಿಯನ್ನೂ ಕದ್ದಾಲಿಸಿಲ್ಲ. ಒಂದು ವೇಳೆ ಕದ್ದಾಲಿಸಿರುವ ದಾಖಲೆಗಳನ್ನು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರವಾಣಿ ಕದ್ದಾಲಿಸಬೇಕಾದರೆ ಗೃಹ ಇಲಾಖೆ ಕಾರ್ಯದರ್ಶಿಯಿಂದ ಆದೇಶ ಆಗಬೇಕು. ಅಂಥದ್ದೇನಾದರೂ ದಾಖಲೆಗಳನ್ನು ನೀಡಿದರೆ ಕ್ರಮ ತನಿಖೆ ಮಾಡಲಾಗುವುದು. ಒಂದೊಮ್ಮೆ ಖಾಸಗಿಯವರು ಕದ್ದಾಲಿಸುತ್ತಿದ್ದರೆ ನಮಗೆ ಸಂಬಂಧವಿಲ್ಲ. ಈ ಕುರಿತು ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.