365 ದಿನಗಳಲ್ಲಿ 32 ಕೋಟಿ ಸ್ಮಾರ್ಟ್‌ಫೋನ್‌ ಬಳಕೆದಾರರು ಸೇರ್ಪಡೆ!


Team Udayavani, Nov 18, 2021, 6:20 AM IST

365 ದಿನಗಳಲ್ಲಿ 32 ಕೋಟಿ ಸ್ಮಾರ್ಟ್‌ಫೋನ್‌ ಬಳಕೆದಾರರು ಸೇರ್ಪಡೆ!

ಬೆಂಗಳೂರು: ಕೇವಲ ಒಂದು ವರ್ಷದ ಅಂತರದಲ್ಲಿ ದೇಶದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಸುಮಾರು 32 ಕೋಟಿ ಹೆಚ್ಚಾಗಿದೆ!

ಹೌದು, 2020ರಲ್ಲಿ ದೇಶದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರು 50 ಕೋಟಿ ಇದ್ದರು. ಈಗ ಅದು 82 ಕೋಟಿಗೆ ಏರಿಕೆಯಾಗಿದೆ ಎಂದು ಕಿಂಡ್ರೆಲ್‌ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಟಿನ್‌ ಶ್ರೋಟರ್‌ ಮಾಹಿತಿ ನೀಡಿದರು.

ಮೂರು ದಿನಗಳ ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಬುಧವಾರ “ವಿದ್ವತ್‌ ಗೋಷ್ಠಿ’ಯಲ್ಲಿ ಮಾತನಾಡಿದ ಅವರು, ಕೋವಿಡ್‌ ನಂತರ ಜಗತ್ತಿನ ಡಿಜಿಟಲ್‌ ಆರ್ಥಿಕ ವ್ಯವಸ್ಥೆಯು ಬಹುದೊಡ್ಡ ಸ್ಥಿತ್ಯಂತರವನ್ನು ಕಂಡಿದ್ದು, ಭಾರತದಲ್ಲೇ ನೂರು ಕೋಟಿ ವ್ಯವಹಾರ ನಡೆಸಲು ಸಾಧ್ಯವಾಗಿದೆ. ಇದೆಲ್ಲವೂ ತಂತ್ರಜ್ಞಾನದ ಫ‌ಲ ಎಂದ ಅವರು, ಇದೇ ಕೊರೊನಾ ಮಹಾಮಾರಿ ಅವಧಿಯಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಕೂಡ ಹೆಚ್ಚಾಗಿದೆ. ವರ್ಷದ ಅವಧಿಯಲ್ಲಿ 320 ದಶಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ ಎಂದರು.

ಸಾಮಾಜಿಕ ಜೀವನ, ವೈದ್ಯವೃತ್ತಿ, ಉದ್ಯೋಗಗಳು, ಕೃಷಿ-ಆಹಾರ ಉತ್ಪನ್ನಗಳ ಕ್ಷೇತ್ರಗಳ ಕಾರ್ಯಶೈಲಿಯಲ್ಲಿ ಕೋವಿಡ್‌ ತರುವಾಯದ ಸಮಗ್ರ ಬದಲಾವಣೆಗೆ ತಂತ್ರಜ್ಞಾನವು ಸಹಾಯಕವಾಗಿ ಒದಗಿಬಂದಿದೆ ಎಂದ ಅವರು, ಕೇಂದ್ರವು ಕೇವಲ 278 ದಿನಗಳಲ್ಲಿ 100 ಕೋಟಿ ಕೋವಿಡ್‌ ಲಸಿಕೆ ನೀಡಿರುವುದು ದೊಡ್ಡ ಸಾಧನೆಯಾಗಿದೆ. ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಭವಿಷ್ಯ ಉಜ್ವಲವಾಗಿದ್ದು, ದತ್ತಾಂಶಗಳ ಬಳಕೆ ಮತ್ತು ನಿರ್ವಹಣೆ ಮೂಲಕ ಮಹತ್ತನ್ನು ಸಾಧಿಸಬಹುದು ಎಂದು ಹೇಳಿದರು.

ಇದನ್ನೂ ಓದಿ:ಒಳ ಹರಿವು ಹೆಚ್ಚಳದಿಂದ ರಸ್ತೆಗೆ ಹರಿದ ನೀರು: ಕೊಚ್ಚಿಕೊಂಡು ಹೋದ ನಿಲ್ಲಿಸಿದ್ದ ಕಾರು

“ಭವಿಷ್ಯದ ಸದೃಢತೆಗೆ ಸಂಶೋಧನೆಯಲ್ಲಿ ಹೂಡಿಕೆ’
ಕಡಿಮೆ ದರದಲ್ಲಿ ದೊರಕುವ ಉದ್ಯೋಗಿಗಳಿಂದ ಆರ್ಥಿಕತೆ ಬೆಳೆಯುವುದಿಲ್ಲ; ಬದಲಿಗೆ ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಹೆಚ್ಚು ಹೂಡಿಕೆಯಿಂದ ಮಾತ್ರ ಭವಿಷ್ಯ ಸದೃಢವಾಗಿರಲಿದೆ ಎಂದು ನೊಬೆಲ್‌ ಪುರಸ್ಕೃತ ವಿಜ್ಞಾನಿ ವೆಂಕಿ ರಾಮಕೃಷ್ಣನ್‌ ಪ್ರತಿಪಾದಿಸಿದರು.

ಭಾರತದಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ದೇಶದ ಆಂತರಿಕ ವೃದ್ಧಿ ದರ (ಜಿಡಿಪಿ)ಯ ಕೇವಲ ಶೇ. 0.8ರಷ್ಟು ಹೂಡಿಕೆಯಾಗುತ್ತಿದೆ. ಇದು ಕೊರಿಯಾ, ಜಪಾನ್‌ ಮತ್ತಿತರ ದೇಶಗಳಿಗೆ ಹೋಲಿಸಿದರೆ, ಶೇ. 25ಕ್ಕಿಂತ ಕಡಿಮೆ. ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿದಲ್ಲಿ ಮಾತ್ರ ಭವಿಷ್ಯ ಸದೃಢ ಆಗಿರಲಿದೆ ಎಂದು ಸೂಚ್ಯವಾಗಿ ಹೇಳಿದರು.

ಸುಸ್ಥಿರ ಅಭಿವೃದ್ಧಿ ಹೆಚ್ಚಿಸುವ ಕ್ಷೇತ್ರಗಳಲ್ಲಿ ಸಂಶೋಧನೆಗಳನ್ನು ನಡೆಸುವ ಸಾಧ್ಯತೆಗಳು ಹೆಚ್ಚಬೇಕು ಎಂದ ಅವರು, ಆಹಾರ ಭದ್ರತೆ, ಸುಸ್ಥಿರ ಇಂಧನ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ನಿರಂತರ ಅಧ್ಯಯನ ಮತ್ತು ಸಂಶೋಧನೆಗಳು ನಡೆಯುವುದು ಅತ್ಯವಶ್ಯಕ. ಗೂಗಲ್, ಮೈಕ್ರೊಸಾಫ್ಟ್ ನಂತಹ ಖಾಸಗಿ ಸಂಸ್ಥೆಗಳು ಸಹ ಸಂಶೋಧನಾ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿವೆ ಎಂದರು.

ಇಂದು ಜಗತ್ತಿನ ಟ್ರಿಲಿಯನ್‌ಗಟ್ಟಲೆ ಡಾಲರ್‌ ವ್ಯವಹಾರ ನಡೆಸುವ ಹಲವು ಕಂಪನಿಗಳು ಹುಟ್ಟಿರುವುದಕ್ಕೆ ಹೊಸ ಸಂಶೋಧನೆಗಳೇ ಕಾರಣ. ಕ್ವಾಂಟಮ್‌ ವಿಜ್ಞಾನದ ಅಧ್ಯಯನದ ಫ‌ಲವಾಗಿ ಟ್ರಾನ್ಸಿಸ್ಟರ್‌, ಲೇಸರ್‌ನಂತಹ ಹೊಸ ಶೋಧನೆಗಳು ಸಾಧ್ಯವಾದವು. ನ್ಯೂಟನ್‌ ಅವರ “ಲಾ ಆಫ್ ಮೋಷನ್‌’ ಬಳಸಿ ರಾಕೆಟ್‌, ಉಪಗ್ರಹಗಳ ಉಡಾವಣೆಯಲ್ಲಿ ಬಹಳ ದೊಡ್ಡ ಸಾಧನೆ ಸಾಧ್ಯವಾಯಿತು. ಜಿಪಿಎಸ್‌ ಅನ್ವೇಷಣೆಯ ಹಿಂದಿನ ತತ್ವವು ಆಲ್ಬರ್ಟ್‌ ಐನ್‍ಸ್ಟೈನ್ ಅವರ “ಥಿಯರಿ ಆಫ್ ರಿಲೇಟಿವಿಟಿ’ ಯನ್ನು ಆಧರಿಸಿದೆ ಎಂದು ಮೆಲುಕು ಹಾಕಿದ ಅವರು, ಕೋವಿಡ್‌ ಸಂದರ್ಭದಲ್ಲಿ ನೀಡಲಾದ ಲಸಿಕೆಯ ಶೋಧನೆಯ ಹಿಂದೆ ಸುಮಾರು 1965-2018ರ ನಡುವಿನ ಹಲವು ಶೋಧನೆಗಳು ನೆರವಿಗೆ ಬಂದಿವೆ ಎಂದೂ ಹೇಳಿದರು. ಬಯೋಕಾನ್‌ ಸಂಸ್ಥಾಪಕಿ ಕಿರಣ್‌ ಮಜುಂದಾರ್‌ ಷಾ ಇದ್ದರು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.