BJP-JDS ಮೈತ್ರಿಗೆ “ಪಾದಯಾತ್ರೆ’ ಬಿರುಕು ? ಮೈತ್ರಿ ಪಕ್ಷದ ಅವಗಣನೆಗೆ

ವಿಜಯೇಂದ್ರ ನಡೆ ಬಗ್ಗೆ ಜೆಡಿಎಸ್‌, ಬಿಜೆಪಿಯಲ್ಲಿ ಬೇಸರ

Team Udayavani, Aug 1, 2024, 6:35 AM IST

BJP-JDS ಮೈತ್ರಿಗೆ “ಪಾದಯಾತ್ರೆ’ ಬಿರುಕು ? ಮೈತ್ರಿ ಪಕ್ಷದ ಅವಗಣನೆಗೆ

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪಾದಯಾತ್ರೆ ಈಗ ಜೆಡಿಎಸ್‌ ಜತೆಗಿನ ಮೈತ್ರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, “ದೋಸ್ತಿ’ ಮೇಲೆ ಅಡ್ಡ ಪರಿಣಾಮ ಬೀರುವ ಸನ್ನಿವೇಶವನ್ನು ನಿರ್ಮಿಸಿದೆ.

ಈ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನೇರವಾಗಿ ಅಡ್ಡಗಾಲು ಹಾಕಿದರೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಡೆಯನ್ನು ಒಪ್ಪದ ಬಿಜೆಪಿ ನಾಯಕರು ಆಂತರಿಕವಾಗಿ ತಡೆಯೊಡ್ಡಿದ್ದಾರೆನ್ನಲಾಗಿದೆ. ಪಾದಯಾತ್ರೆ ನಡೆಸಬೇಕೋ, ಬೇಡವೋ ಎಂಬುದನ್ನು ಅಂತಿಮವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಧರಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 2 ದಿನಗಳಿಂದ ದಿಲ್ಲಿಯಲ್ಲೇ ಬೀಡುಬಿಟ್ಟಿದ್ದು, ವರಿಷ್ಠರ ಒಪ್ಪಿಗೆ ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

ಕುಮಾರಸ್ವಾಮಿಯವರ ನೇರ ಆಕ್ಷೇಪದ ನಡುವೆಯೂ ಪಾದಯಾತ್ರೆಗೆ ಬೇಕಾದ ಸಿದ್ಧತೆಗಳು ನಿಧಾನವಾಗಿ ನಡೆಯುತ್ತಿದ್ದು, ಮಳೆ ಹಾಗೂ ಪ್ರವಾಹದ ನೆಪವೊಡ್ಡಿ ದಿನಾಂಕವನ್ನು ಮುಂದೂಡುವ ಸಾಧ್ಯತೆ ಹೆಚ್ಚಿದೆ. ಆದರೆ, ಒಟ್ಟಾರೆಯಾಗಿ ಈ ಬೆಳವಣಿಗೆ ಮೈತ್ರಿ ಪಕ್ಷದ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದು, ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ಪ್ರಯೋಗಿಸಿದ ಮೊದಲ ಅಸ್ತ್ರವೇ ಮೊನಚು ಕಳೆದುಕೊಂಡಂತಾಗಿದೆ.

ಯಾಕೆ ವಿರೋಧ?:
ಬಿಜೆಪಿ ಹಾಗೂ ಜೆಡಿಎಸ್‌ ಮೂಲಗಳ ಪ್ರಕಾರ ಪ್ರೀತಮ್‌ ಗೌಡ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದರೂ ಪಾದಯಾತ್ರೆ ವಿಚಾರದಲ್ಲಿ ತಮ್ಮನ್ನು ಬಿಜೆಪಿ ನಾಯಕರು ನಿರ್ಲಕ್ಷಿಸಿದ್ದಾರೆ ಎಂದು ರಾಷ್ಟ್ರೀಯ ನಾಯಕರ ಬಳಿ ಅತೃಪ್ತಿ ತೋಡಿಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿಗಿಂತ ಜೆಡಿಎಸ್‌ ಪ್ರಭಾವ ಹೆಚ್ಚಿದೆ. ಆದರೆ, ಈ ಭಾಗದಲ್ಲಿ ಪಾದಯಾತ್ರೆ ನಡೆಸುವುದಕ್ಕೆ ಮುನ್ನ ತಮ್ಮನ್ನು ನೆಪ ಮಾತ್ರಕ್ಕೂ ಸಂಪರ್ಕಿಸದೇ ನಿರ್ಣಯ ತೆಗೆದುಕೊಂಡಿದ್ದಾರೆ. ನಿರ್ಧಾರ ತೆಗೆದುಕೊಂಡ ಬಳಿಕ ಸಮನ್ವಯ ಸಭೆಗೆ ಆಹ್ವಾನ ನೀಡಿದ್ದು, ಅಲ್ಲಿಯೂ ಸರಿಯಾಗಿ ನಡೆಸಿಕೊಂಡಿಲ್ಲ. ಸ್ವಾಗತ ಭಾಷಣ ಕೋರುವಾಗಲೂ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಬಳಿಕ ವಿಜಯೇಂದ್ರ ಹೆಸರನ್ನು ಪ್ರಸ್ತಾವಿಸಿ ಕುಮಾರಸ್ವಾಮಿಯವರ ಹಿರಿತನವನ್ನು ನಿರ್ಲಕ್ಷಿಸಲಾಗಿದೆ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನು ಪ್ರಚಾರ ಸಾಮಗ್ರಿಗಳಲ್ಲಿ ಎಲ್ಲಿಯೂ ಜೆಡಿಎಸ್‌ ಪಕ್ಷ ಹಾಗೂ ನಾಯಕರ ಹೆಸರನ್ನು ಪ್ರಸ್ತಾವಿಸಿಲ್ಲ. ಇದು ಎನ್‌ಡಿಎ ಪಾದಯಾತ್ರೆ ಎಂದು ಉಲ್ಲೇಖೀಸಿದರೂ ತೊಂದರೆ ಇರಲಿಲ್ಲ. ಏಕಪಕ್ಷೀಯವಾಗಿ ಬಿ. ವೈ. ವಿಜಯೇಂದ್ರ ತೀರ್ಮಾನ ಕೈಗೊಂಡಂತೆ ಇದೆ. ಆ. 3ರ ಬದಲು ಆ. 10 ಅಥವಾ 11ಕ್ಕೆ ಮುಂದೂಡಿ ಎಂದು ಕುಮಾರಸ್ವಾಮಿ ಸಂದೇಶ ಕಳುಹಿಸಿದರೂ ಸ್ಪಂದಿಸಿಲ್ಲ. ಮೈತ್ರಿ ನಿಲುವಿಗೆ ಇದು ಸಂಪೂರ್ಣ ವಿರುದ್ಧವಾಗಿದ್ದು, ಜೆಡಿಎಸ್‌ ಅನ್ನು ಸಂಪೂರ್ಣ ಕತ್ತಲಲ್ಲಿ ಇಡಲಾಗಿದೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಪ್ರಸ್ತಾವಿಸಲಾಗಿತ್ತು. ಇದೇ ವಿಚಾರವನ್ನು ಬಿಜೆಪಿ ಹೈಕಮಾಂಡ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಬಣ ರಾಜಕೀಯ ಪ್ರಭಾವ?:
ಇನ್ನೊಂದೆಡೆ ಬಿಜೆಪಿಯ ಬಣ ರಾಜಕಾರಣವೂ ಇಲ್ಲಿ ಕೆಲಸ ಮಾಡಿದೆ. ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಸುವಾಗ ಪಕ್ಷದ ಪ್ರಭಾವಿ ಒಕ್ಕಲಿಗ ಮುಖಂಡರ ಜತೆಗೆ ಸಮಾಲೋಚನೆ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಕುಮಾರಸ್ವಾಮಿಯ ರೀತಿ ಬಿಜೆಪಿ ನಾಯಕರಿಂದಲೂ ವಿಜಯೇಂದ್ರ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕೇವಲ ತಮ್ಮೇಶ್‌ ಗೌಡ, ಪ್ರೀತಮ್‌ ಗೌಡ ಹಾಗೂ ರುದ್ರೇಶ್‌ ಅವರ ಸಲಹೆ ಆಧರಿಸಿ ಇಂಥ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಡಾ.ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಅವರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಒಟ್ಟಾರೆಯಾಗಿ ಕಾಂಗ್ರೆಸ್‌ ವಿರುದ್ಧ ಪ್ರಯೋಗಿಸಿದ ಅಸ್ತ್ರ ಮೈತ್ರಿ ಪಡೆಯಲ್ಲೇ ಅಸಮಾಧಾನದ ಜ್ವಾಲಾಮುಖೀಯನ್ನು ಸ್ಫೋಟಿಸಿದೆ.

ದಿಲ್ಲಿಯಲ್ಲೇ ವಿಜಯೇಂದ್ರ
ಇದೆಲ್ಲದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಎಲ್ಲ ವಿದ್ಯಮಾನಗಳ ಬಗ್ಗೆ ಅವರು ವಿವರಣೆ ನೀಡಿದ್ದು, ಪಾದಯಾತ್ರೆ ಮುಂದುವರಿಸುವುದಕ್ಕೆ ಹಾಗೂ ಸಮಾರೋಪ ಸಭೆಗೆ ಬರುವಂತೆ ಆಹ್ವಾನವನ್ನು ನೀಡಿದ್ದಾರೆ. ಆದರೆ, ಪಾದಯಾತ್ರೆ ಮುಂದುವರಿಸಬೇಕೋ, ಬೇಡವೋ ಎಂಬ ಬಗ್ಗೆ ವರಿಷ್ಠರು ಇನ್ನೂ ಅನುಮತಿ ನೀಡಿಲ್ಲ. ತಡರಾತ್ರಿ ನಡೆಯುವ ಸಭೆಯಲ್ಲಿ ಈ ವಿಚಾರ ಇತ್ಯರ್ಥವಾಗಬಹುದೆಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿಯಲ್ಲಿನ ಅಪಸ್ವರಕ್ಕೆ ಕಾರಣವೇನು ?
– ಪಾದಯಾತ್ರೆ ಬ್ರಹ್ಮಾಸ್ತ್ರವೇ ವಿನಾ ಆರಂಭದಲ್ಲೇ ಬಳಸುವುದಲ್ಲ.
– ವೈಯಕ್ತಿಕವಾಗಿ ತೀರ್ಮಾನಿಸಿ ಪಕ್ಷದ ಒಪ್ಪಿಗೆ ಪಡೆಯುವ ಪ್ರಯತ್ನ
– ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರಸ್ತಾವಿಸದೇ ಇರುವುದು
– ಇದು ವಿಜಯೇಂದ್ರ ಅವರ ವೈಯಕ್ತಿಕ ತೀರ್ಮಾನ ಎಂಬ ಆಕ್ಷೇಪ
– ವರಿಷ್ಠರ ಜತೆಗೂ ಸಮಾಲೋಚನೆ ಮಾಡಿಲ್ಲ
– ಹಿರಿಯರನ್ನು ಬಿಟ್ಟು ತಮ್ಮೇಶ, ರುದ್ರೇಶ, ಪ್ರೀತಮ್‌ಗೆ ಮಾತ್ರ ಆದ್ಯತೆ
– ಕೋರ್‌ ಕಮಿಟಿಯ ಸದಸ್ಯರಲ್ಲದವರ ನಿರ್ದೇಶನದ ಮೇರೆಗೆ ತೀರ್ಮಾನ

ಜೆಡಿಎಸ್‌ ಆಕ್ಷೇಪಕ್ಕೆ ಕಾರಣವೇನು ?
– ಪಾದಯಾತ್ರೆ ಪ್ರಚಾರ ಸಾಮಗ್ರಿಯಲ್ಲಿ ಜೆಡಿಎಸ್‌ ಉಲ್ಲೇಖವೇ ಇಲ್ಲ.
– ಜೆಡಿಎಸ್‌ ಬೆಲ್ಟ್ ನಲ್ಲಿ ಕುಮಾರಸ್ವಾಮಿ ನಿರ್ಲಕ್ಷ್ಯ
– ದಿನಾಂಕ ಮುಂದೂಡುವಂತೆ ಮಾಡಿದ ಮನವಿಗೆ ಬಾರದ ಸ್ಪಂದನೆ
– ಪ್ರೀತಮ್‌ ಗೌಡಗೆ ನೀಡುತ್ತಿರುವ ಅತಿ ಆದ್ಯತೆ
– ಜೆಡಿಎಸ್‌ ಶಾಸಕರ ನೇರ ಸಂಪರ್ಕ
– ದೊಡ್ಡ ಕಾರ್ಯಕ್ರಮಕ್ಕೆ ಸಮನ್ವಯ ಸಮಿತಿಯನ್ನೂ ಮಾಡದೇ ಅವಗಣನೆ
– ಮುಡಾ ಹೋರಾಟ ಬೇಡ ಎಂಬ ಜೆಡಿಎಸ್‌ ನಾಯಕರ ಒಳ ಒತ್ತಾಯ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.