Gram Panchayat ಸಮಸ್ಯೆಗೆ ಪಂಚಮಿತ್ರ ವಾಟ್ಸ್ಅಪ್ ಚಾಟ್
ದೇಶದಲ್ಲೇ ಪ್ರಥಮ ಬಾರಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ: ಪ್ರಿಯಾಂಕ್ ಖರ್ಗೆ
Team Udayavani, Mar 2, 2024, 12:13 AM IST
ಬೆಂಗಳೂರು: ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಮತ್ತು ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಪಂಚಮಿತ್ರ ವಾಟ್ಸ್ಅಪ್ ಚಾಟ್ನ್ನು ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಂಚಮಿತ್ರ ಪೋರ್ಟಲ್ನ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಪಂಗಳ ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಮತ್ತು ಗ್ರಾಪಂಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೆ ಎಲ್ಲ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಿಸಿಕೊಳ್ಳಲು ಯಾವುದೇ ನಿರ್ದಿಷ್ಟವಾದ ವೆಬ್ಸೈಟ್ ಅಥವಾ ಪೋರ್ಟಲ್ಗಳು ಇರಲಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ರಾಜ್ಯದ ಎಲ್ಲ ಗ್ರಾಪಂಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ವಾಟ್ಸ್ಆಪ್ ಚಾಟ್ ತಂತ್ರಜ್ಞಾನವನ್ನು ದೇಶದಲ್ಲೇ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಪಂಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ವಾಟ್ಸ್ಅಪ್ ಚಾಟ್ ಸಂಖ್ಯೆ 8277506000 ಮೂಲಕ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹದೇವನ್ ಸೇರಿದಂತೆ ಇನ್ನಿತರ ಅಧಿ ಕಾರಿಗಳು ಇದ್ದರು.
ಏನಿದು ಪಂಚಮಿತ್ರ?
ಪಂಚಮಿತ್ರ ಪೋರ್ಟಲ್ ಮೂಲಕ ಗ್ರಾಪಂಗಳ ಮಾಹಿತಿಗಳಾದ ಚುನಾಯಿತ ಪ್ರತಿನಿ ಧಿಗಳ ವಿವರ, ಸಿಬಂದಿ ವಿವರ, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿ, ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾ.ಪಂ.ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು, 4 (1) (ಎ) 4 (1) (ಬಿ) ಆರ್ಟಿಐ ದಾಖಲೆಗಳ ವಿವರಗಳನ್ನು ಪಡೆಯಬಹುದಾಗಿದೆ.
ಯಾವೆಲ್ಲ ಸೇವೆ ಲಭ್ಯ?
ಗ್ರಾಪಂಗಳಿಗೆ ಸಂಬಂಧಿ ಸಿ ಕಟ್ಟಡ ನಿರ್ಮಾಣ ಪರವಾನಿಗೆ ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜು ಸಂಪರ್ಕದ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಿಗೆ, ಸ್ವಾಧಿಧೀನ ಪ್ರಮಾಣಪತ್ರ, ರಸ್ತೆ, ಅಗೆಯಲು ಅನುಮತಿ, ಕೈಗಾರಿಕೆ/ಕೃಷಿ ಆಧಾರಿತ ಉತ್ಪಾದನ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣ ಪತ್ರ, ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ ಅಥವಾ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ, ನಿಯಮಿತಗೊಳಿಸುವಿಕೆ, ಓವರ್ ಗ್ರೌಂಡ್ ಕೇಬಲ್ ಮೂಲಸೌಕರ್ಯ, ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ, ನಮೂನೆ 9/11ಎ, ನಮೂನೆ 11ಬಿ ಸೇವೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ ಹಾಗೂ ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.