Music ವಿದುಷಿ ಅಶ್ವಿನಿ ಭಿಡೆ ಅವರಿಗೆ ಪಂಡಿತ್ ರಾಜಗುರು ರಾಷ್ಟ್ರೀಯ ಪ್ರಶಸ್ತಿ


Team Udayavani, Aug 18, 2023, 7:32 PM IST

1-sadss

ಧಾರವಾಡ : ಸ್ವರಸಾಮ್ರಾಟ ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಪಂ. ಬಸವರಾಜ ರಾಜಗುರು ಅವರ 103ನೇ ಜನ್ಮದಿನಾಚರಣೆ ಅಂಗವಾಗಿ ಕೊಡ ಮಾಡುವ 2023-24 ನೇ ಸಾಲಿನ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಸಂಗೀತ ಕಲಾವಿದೆ ವಿದುಷಿ ಅಶ್ವಿನಿ ಭಿಡೆ-ದೇಶಪಾಂಡೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು 1 ಲಕ್ಷ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿದ್ದು, ತಲಾ 25 ಸಾವಿರ ರೂ. ನಗದು ಒಳಗೊಂಡ ರಾಷ್ಟ್ರೀಯ ಯುವ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಧಾರವಾಡದ ತಬಲಾ ವಾದಕರಾದ ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಗಾಯಕರಾದ ಇಮಾನ ದಾಸ್ ಅವರಿಗೆ ಯುವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಆ.24 ರಂದು ಸಂಜೆ 5:30ಕ್ಕೆ ಆಲೂರು ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಪ್ರಶಸ್ತಿ ಪುರಸ್ಕೃತರಾದ ವಿದುಷಿ ಅಶ್ವಿನಿ ಭಿಡೆ, ದೇಶಪಾಂಡೆ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದೆ. ಹಾಗೂ ಯುವ ಪ್ರಶಸ್ತಿ ಪಡೆದ ಕಲಾವಿದರಾದ ಉದಯ ಕುಲಕರ್ಣಿ, ಧಾರವಾಡ ಅವರಿಂದ ತಬಲಾ ಸೋಲೋ ವಾದನ ಮತ್ತು ಇಮಾನ ದಾಸ್ ಅವರ ಗಾಯನ ಕಾರ್ಯಕ್ರಮ ನೀಡಲಿದ್ದಾರೆ.

ವಿದುಷಿ ಅಶ್ವಿನಿ ಭಿಡೆ
ಪಿಟೀಲು ವಾದಕ ಡಿ.ಕೆ. ದಾತಾರ್ ಅವರ ಹಿರಿಯ ಸಹೋದರ ನಾರಾಯಣರಾವ್ ದಾತಾರ್ ಅವರಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದ್ದು, ತಾಯಿ ಮಾಣಿಕ್ ಭಿಡೆ ಅವರಿಂದ ಜೈಪುರ-ಅತ್ರೌಲಿ ಶೈಲಿಯಲ್ಲಿ ಸಂಗೀತವನ್ನು ಕಲಿತಿದ್ದಾರೆ. ಅಶ್ವಿನಿ ಭಿಡೆ ಅವರು ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮುಂಬನ ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲದಿಂದ ಸಂಗೀತ ವಿಶಾರದ ಮತ್ತು ಬಾಬಾ ಅಟಾಮಿಕ್ ರಿಸರ್ಚ ಸೆಂಟರ್‌ನಿಂದ ಬಯೋಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದು, ಗೌರವ ಡಿ.ಲಿಟ್‌ಗೂ ಸಹ ಭಾಜನರಾಗಿದ್ದಾರೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಲಭಿಸಿದೆ.

ಡಾ.ಉದಯ ಕುಲಕರ್ಣಿ
ಆಕಾಶವಾಣಿ ಹಾಗೂ ದೂರದರ್ಶನದ ‘ಎ’ ಶ್ರೇಣಿಯ ಕಲಾವಿದರಾಗಿದ್ದು, ಪಂ.ಎಚ್.ಸೋಮಶೇಖರ, ಡಾ.ರಾಚಯ್ಯ ಹಿರೇಮಠ, ಪಂ.ರವೀಂದ್ರ ಯಾವಗಲ್ಲ, ಪಂ.ಸೂರಜ ಪುರಂದರೆ ಇವರಂತಹ ದಿಗ್ಗಜ ಕಲಾವಿದರಿಂದ ಗುರು-ಶಿಷ್ಯ ಪರಂಪರೆಯ ಮೂಲಕ ತಬಲಾ ಕಲೆಯಲ್ಲಿ ಉನ್ನತ ಅಭ್ಯಾಸ ಮಾಡಿದ್ದಾರೆ. ಪ್ರಸ್ತುತ ವಿಶ್ವವಿಖ್ಯಾತ ತಬಲಾ ವಾದಕರಾದ ಪಂ.ಅನೀಂದೂ ಚಟರ್ಜಿ ಅವರಲ್ಲಿ ಉನ್ನತ ತರಬೇತಿಯನ್ನು ಪಡೆಯುತ್ತಿದ್ದಾರೆ. ತಮ್ಮ ಉತ್ಕೃಷ್ಟ ಮಟ್ಟದ ಕಲಾ ಪ್ರದರ್ಶನದಿಂದಾಗಿ ಅವರು ತಬಲಾ ಸ್ವತಂತ್ರ ವಾದನ ಹಾಗೂ ಸಾಥ್ ಸಂಗತ್ ಎರಡರಲ್ಲಿಯೂ ದೇಶಾದ್ಯಂತ ಬಹುಬೇಡಿಕೆಯ ಕಲಾವಿದರಾಗಿದ್ದಾರೆ. ಪದ್ಮಭೂಷಣ ಡಾ.ಎನ್. ರಾಜಮ್, ಪದ್ಮಶ್ರೀ ಎಂ. ವೆಂಕಟೇಶಕುಮಾರ. ಪಂ. ಕೇದಾರ ಬೋಡಸ್, ಪಂ. ರೋಣು ಮುಜುಮದಾರ್ ಮುಂತಾದ ದಿಗ್ಗಜ ಕಲಾವಿದರ ಜತೆಗೆ ವೇದಿಕೆಯನ್ನು ಹಂಚಿಕೊಂಡಿದ್ದಾರೆ.

ಇಮಾನ ದಾಸ್
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಟಿಯಾಲಾ ಘರಾನಾದ ಶಾಸ್ತ್ರೀಯ ಗಾಯಕರಾಗಿದ್ದು, ದೂರದರ್ಶನದ ಶ್ರೇಣಿಕೃತ ಕಲಾವಿದರು. ದೆಹಲಿಯ ಶುಭಿ ಪಬ್ಲಿಕೇಶನ್ಸ್ ಅವರಿಂದ ಒಂದು ಸಂಗೀತ ಪುಸ್ತಕ ಪ್ರಪಂಚದಾದ್ಯಂತ ಬಿಡುಗಡೆಯಾಗಿದೆ. ಅಮೇಜಾನ್‌ನಲ್ಲಿ ಬೆಸ್ಟ ಸೆಲ್ಲರ ಆಗಿದೆ. ಸಂಗೀತದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ೨೦೨೦ರ ಬ್ಯುಸಿನೆಸ್ ಎಕ್ಸಲೆನ್ಸ್ ಪ್ರಶಸ್ತಿ ವಿಜೇತರಿವರು. ವಿದ್ವಾನ ಇಮಾನ ದಾಸ್ ಅವರು ಕಳೆದ ೨೦ ವರ್ಷಗಳಿಂದ ಪ್ರಪಂಚದಾದ್ಯಂತ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ. ಜರ್ಮನಿ, ಆಸ್ಟ್ರೇಲಿಯಾ, ಬೆಲ್ಜಿಯಂ, ಇಟಲಿ ಹಾಗೂ ಪ್ರಾನ್ಸ್‌ನಲ್ಲಿ ಪ್ರಮುಖ ರಾಯಭಾರ ಕಚೇರಿಗಳಲ್ಲಿ ಕಾರ್ಯಕ್ರಮ ನೀಡಿರುತ್ತಾರೆ. ಅಮೀತ್ ಕುಮಾರ, ಸಿತಾರ್ ದಂತಕಥೆ ಪಂ. ಸುಬ್ರೋಟೊರಾವ್ ಚೌಧರಿ ಅವರೊಂದಿಗೆ ಜುಗಲಬಂದಿಗಳನ್ನು ಸಹ ಮಾಡಿದ್ದಾರೆ. ಬೆಂಗಳೂರು ಹಾಗೂ ಕೊಲ್ಕತಾದಲ್ಲಿ ಅವರು ಓಂಕಾರ ಮ್ಯೂಸಿಕ್ ಅಕಾಡೆಮಿ ತೆರೆದಿದ್ದಾರೆ, ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.