Parappana Agrahara Prison; ದರ್ಶನ್ ದರ್ಬಾರ್ ಪ್ರಕರಣದಲ್ಲಿ 7 ಜೈಲಾಧಿಕಾರಿಗಳು ಸಸ್ಪೆಂಡ್
Team Udayavani, Aug 26, 2024, 12:36 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡ ನಟ ದರ್ಶನ್ ಗೆ (Darshan) ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ (Parappana agrahara prison) ರಾಜಾತಿಥ್ಯ ಸಿಗುತ್ತಿರುವ ವಿಚಾರ ಇದೀಗ ಜೈಲು ಅಧಿಕಾರಿಗಳಿಗೆ ಮುಳುವಾಗಿದೆ. ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು ಇದೀಗ ಏಳು ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್ ಅವರು, ನಿನ್ನೆ ಸಂಜೆ ಈ ಬಗ್ಗೆ ಸುದ್ದಿ ಬಂತು. ಮಧ್ಯರಾತ್ರಿಯವರೆಗೆ ಈ ಬಗ್ಗೆ ಆಂತರಿಕ ತನಖೆ ನಡೆಸಲಾಗಿದೆ. ಜೈಲಿನಲ್ಲಿರುವ ದರ್ಶನ್ ಸ್ನೇಹಿತರ ಜತೆ ಸೇರಿ ಟೀ ಕುಡಿಯುವ ಫೋಟೋ ವೈರಲ್ ಆಗಿದೆ. ಪ್ರಕರಣ ಸಂಬಂಧ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಘಟನೆ ಹೇಗೆ ನಡೆಯಿತು ಎಂದು ವರದಿ ಕೇಳಿದ್ದೇನೆ. ಇದರಲ್ಲಿ ಏಳು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ. ಜೈಲು ಸೂಪರಿಂಟೆಂಡೆಂಟ್ ಅವರನ್ನು ವರ್ಗಾವಣೆ ಮಾಡುತ್ತೇವೆ. ಈ ರೀತಿಯ ಘಟನೆ ನಡೆಯಬಾರದು. ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವರು ಹೇಳಿದರು.
ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮರಾ ಹಾಕಿದರೂ ಇಂತಹ ಘಟನೆ ನಡೆಯುವುದು ಸರಿಯಲ್ಲ. ಫೋನ್ ಎಲ್ಲಿಂದ ಬಂತು, ಸಿಗರೇಟ್ ಹೇಗೆ ಬಂತು ಎನ್ನುವ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಜೈಲಿನಲ್ಲಿ 24 ಗಂಟೆ ಮಾನಿಟರ್ ನಡೆಯುತ್ತಿರುತ್ತದೆ. ಪ್ರಕರಣದಿಂದ ಸರ್ಕಾರಕ್ಕೆ ಯಾವುದೇ ಮುಜುಗರ ಆಗಿಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ದರ್ಶನ್ ಗೆ ರಾಜಾತಿಥ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೀವನಕ್ಕೆ ಅವಕಾಶ ನೀಡಲಾಗಿದೆ, ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವುದಕ್ಕೆ ಪುರಾವೆ ನೀಡುವಂತೆ ರವಿವಾರ ಫೋಟೊ ಮತ್ತು ವಿಡಿಯೋ ಲೀಕ್ ಆಗಿ ಭಾರಿ ಸದ್ದು ಮಾಡಿದೆ.
ದರ್ಶನ್ ಅವರು ಪ್ರಕರಣದ 11ನೇ ಆರೋಪಿ ನಾಗರಾಜ್, ರೌಡಿಶೀಟರ್ ವಿಲ್ಸನ್ ನಾಗರಾಜ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಜೈಲಿನ ವಿಡಿಯೋ ಕಾನ್ಫೆರೆನ್ ಹಾಲ್ನ ಹಿಂಭಾಗದ ಸ್ಥಳದಲ್ಲಿ ಕುರ್ಚಿ ಮೇಲೆ ಕುಳಿತು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡಿರುವ ಫೋಟೋ ವೈರಲ್ ಆಗಿದೆ.
ಫೋಟೋ ಬೆನ್ನಲ್ಲೇ ಅದೇ ಮುಖಭಾವದಲ್ಲಿ ದರ್ಶನ್ ಆಪ್ತರೊಬ್ಬರೊಂದಿಗೆ ಇನ್ಸ್ಟಾ ಗ್ರಾಂ ವಿಡಿಯೋದಲ್ಲಿ ಮಾತನಾಡಿರುವ ವಿಡಿಯೋ ಕೂಡ ಬಯಲಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.