Session; ಗದ್ದಲದ ನಡುವೆ 5 ಮಸೂದೆ ಅಂಗೀಕಾರ! ಕೆರಳಿದ ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ

ಮುಡಾ ವಿರುದ್ಧದ ಚರ್ಚೆಗೆ ಅವಕಾಶ ನೀಡದ ಸಭಾಪತಿ ಬಸವರಾಜ ಹೊರಟ್ಟಿ

Team Udayavani, Jul 26, 2024, 12:06 AM IST

ಗದ್ದಲದ ನಡುವೆ 5 ಮಸೂದೆ ಅಂಗೀಕಾರ! ಕೆರಳಿದ ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ

ಬೆಂಗಳೂರು: ಅಹೋರಾತ್ರಿ ಧರಣಿ ಅನಂತರವೂ ಮುಡಾ ನಿವೇಶನ ಹಂಚಿಕೆ ಹಗರಣ ಕುರಿತ ಚರ್ಚೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಳ್ಳಿಹಾಕಿದ್ದರಿಂದ ಗುರುವಾರ ಕೂಡ ಮೇಲ್ಮನೆಯಲ್ಲಿ ವಿಪಕ್ಷಗಳ ಹೋರಾಟ ಮುಂದುವರಿಯಿತು. ಆ ಗದ್ದಲದ ನಡುವೆಯೇ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಬಹುತೇಕ ಎಲ್ಲ ಮಸೂದೆಗಳಿಗೆ ಅನುಮೋದನೆ ನೀಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಬಾವಿಗಿಳಿದು ಧರಣಿ ನಡೆಸಿದ ವಿಪಕ್ಷಗಳ ಸದಸ್ಯರು, ಈಗಾಗಲೇ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಒಂದು ದಿನದ ಹಿಂದೆಯೇ ಮರುಪರಿಶೀಲನೆ ಅರ್ಜಿ ಸಲ್ಲಿಸಲಾಗಿತ್ತು. ಅದರ ಪರಿಶೀಲನೆಗೆ ಸಾಕಷ್ಟು ಸಮಯಾವಕಾಶವನ್ನೂ ತೆಗೆದುಕೊಂಡಿದ್ದೀರಿ. ಈಗಲಾದರೂ ಅವಕಾಶ ಕಲ್ಪಿಸಬೇಕು ಎಂದು ಸಭಾಪತಿಗಳಿಗೆ ಮನವಿ ಮಾಡಿದರು.

ಪ್ರತಿಕ್ರಿಯಿಸಿದ ಸಭಾಪತಿಗಳು, ನಿಯಮ 62ರ ಅಡಿ ನಿಲುವಳಿ ಸೂಚನೆ ಮಂಡನೆಗೆ ವಿಪಕ್ಷ ನಾಯಕರು ಈಗಾಗಲೇ ನಿರಾಕರಿಸಿದ ಪ್ರಸ್ತಾವವನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ವಿಚಾರದ ಬಗ್ಗೆ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಆಯೋಗ ನೇಮಕ ಮಾಡಿದ್ದು ತನಿಖೆ ನಡೆಯುತ್ತಿದೆ. ತನಿಖೆ ನಡೆಸಿ ವರದಿ ನೀಡುವಂತೆ ಸರಕಾರ ಆಯೋಗಕ್ಕೆ ಹೇಳಿದೆ. ಹಾಗಾಗಿ ಮರುಪರಿಶೀಲನೆ ಅರ್ಜಿಯನ್ನು ನಿರಾಕರಿಸಲಾಗಿದೆ ಎಂದು ಪ್ರಕಟಿಸಿದರು. ಇದರ ಬೆನ್ನಲ್ಲೇ ಆಡಳಿತ ಪಕ್ಷದವರು ಮೇಜು ಕುಟ್ಟಿ ಸ್ವಾಗತಿಸಿದರು.

ನಿರ್ಣಯವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಒಂದೇ ಒಂದು ಕಪ್ಪುಚುಕ್ಕೆ ಇಲ್ಲ. ಇದರಿಂದ ವಿಪಕ್ಷಗಳಿಗೆ ಹೊಟ್ಟೆಕಿಚ್ಚು ಶುರುವಾಗಿದೆ. ಹಾಗಾಗಿ ನನಗೆ ಮಸಿ ಬಳಿಯಬೇಕು ಎಂಬ ದುರುದ್ದೇಶದಿಂದ ಹಗರಣವೇ ಇಲ್ಲದಿದ್ದರೂ ಹಗರಣದಂತೆ ಬಿಂಬಿಸಲು ಹೊರಟಿದ್ದಾರೆ. ಸಭಾಪತಿಗಳು ಯಾವುದೇ ಕಾರಣಕ್ಕೂ ನಿರ್ಣಯ ದಿಂದ ಹಿಂದೆ ಸರಿಯಬಾರದು ಎಂದರು.

ಮತ್ತಷ್ಟು ಕೆರಳಿದ ವಿಪಕ್ಷಗಳ ಸದಸ್ಯರು, ಮುಡಾ ನಿವೇಶನಗಳನ್ನು ನುಂಗಿ ನೀರುಕುಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ… ಸಮಾಜವಾದಿ ಅಂತಾರೆ ಬಡವರ ಸೈಟ್‌ಗಳನ್ನು ನುಂಗುತ್ತಾರೆ…’ ಅಂತ ಘೋಷಣೆ ಕೂಗಿದರು. ಮತ್ತೂಂದೆಡೆ ಬಹುದೊಡ್ಡ ಹಗರಣ ಇದಾಗಿದ್ದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸಭಾಪತಿಗಳನ್ನೂ ಒತ್ತಾಯಿಸಿದರು.

ಕೇವಲ ಅರ್ಧಗಂಟೆಯಲ್ಲಿ ಅಂಗೀಕಾರ
ಕೇವಲ ಅರ್ಧಗಂಟೆಯಲ್ಲಿ 5 ಮಸೂದೆಗಳು ಮತ್ತು 2 ನಿರ್ಣಯಗಳ ಮಂಡನೆ ಜತೆಗೆ ಅಂಗೀಕಾರಗೊಂಡವು. ಅಷ್ಟೇ ಅಲ್ಲ, ವರದಿ ಮತ್ತು ಕಾಗದಪತ್ರಗಳನ್ನು ಇದೇ ಅವಧಿಯಲ್ಲಿ ಮಂಡಿಸಲಾಯಿತು.

ಈ ಪೈಕಿ ಕರ್ನಾಟಕ ಧನವಿನಿಯೋಗ (ಸಂಖ್ಯೆ-4) ಮಸೂದೆ -2024, ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ, ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ದಿ) ಮಸೂದೆ, ಸರಕು-ಸೇವೆಗಳ ಮಸೂದೆಗಳು ಚರ್ಚೆ ಇಲ್ಲದೆ ಅಂಗೀಕಾರಗೊಂಡವು.

2026ರಲ್ಲಿನ ಅಥವಾ ಅದರ ಅನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಸಬಾರದು. 1971ರ ಜನಗಣತಿ ಆಧರಿಸಿ ನಿರ್ಧರಿಸಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು. ಜತೆಗೆ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯ ಉಂಟುಮಾಡಲಿದೆ. ಹಾಗಾಗಿ ಈ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.