Pen Drive Case; ಜೂನ್ 6ರವರೆಗೆ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ


Team Udayavani, May 31, 2024, 4:41 PM IST

ಪ್ರಜ್ವಲ್ ರೇವಣ್ಣ

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರ ತನಕ 6 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರು 35 ದಿನಗಳ ಬಳಿಕ ದೇಶಕ್ಕೆ ಮರಳಿದ್ದರು. ಗುರುವಾರ ತಡರಾತ್ರಿ ಬೆಂಗಳೂರಿಗೆ ಮರಳುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿಯೇ ಎಸ್ ಐಟಿ ತಂಡವು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.

ಎಸ್ಐಟಿ ಪ್ರಜ್ವಲ್ ಅವರನ್ನು 15 ದಿನಗಳ ಕಾಲ ಕಸ್ಟಡಿಗೆ ಮನವಿ ಮಾಡಿತ್ತು. ಆದರೆ ಕೋರ್ಟ್ ಆರು ದಿನಗಳ ಕಾಲ ಕಸ್ಟಡಿಗೆ ನೀಡಿದೆ

ಇಂದು ಪ್ರಜ್ವಲ್ ರೇವಣ್ಣ ಅವರ ಮೆಡಿಕಲ್ ಚೆಕಪ್ ನಡೆಸಿರುವ ಎಸ್ಐಟಿ ಅಧಿಕಾರಿಗಳು ಬಳಿಕ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಮತ್ತು ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನು ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಿದರು. ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಸಂಪೂರ್ಣವಾಗಿ ವೈದ್ಯಕೀಯ ತಪಾಸಣೆ ಮಾಡಲಾಯಿತು.

ಏರ್‌ಪೋರ್ಟ್‌ನಲ್ಲಿ ಹಲವು ಪ್ರಕ್ರಿಯೆ: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ಹಾಗೂ ಲುಕ್‌ಔಟ್‌ ನೋಟಿಸ್‌ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರು ವಿಮಾನ ಏರಿದ ಕೂಡಲೇ ಬ್ಯೂರೋ ಆಫ್ ಇಮಿಗ್ರೇಷನ್‌ ಮೂಲಕ ಇಮಿಗ್ರೇಷನ್‌ ಸೆಂಟರ್‌ಗೆ ಪ್ರಜ್ವಲ್‌ ಬಗ್ಗೆ ಮಾಹಿತಿ ರವಾನೆಯಾಗಿತ್ತು. ಜೊತೆಗೆ ಎಸ್‌ಐಟಿ ತನಿಖಾಧಿಕಾರಿಗಳಿಗೂ ಮಾಹಿತಿ ರವಾನೆಯಾಗಿತ್ತು. ಲುಕ್‌ ಔಟ್‌ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ ಅವರನ್ನು ಬೆಂಗಳೂರಿನಲ್ಲಿ ಏರ್‌ಪೋರ್ಟ್‌ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಬಳಿಕ ಅವರ ಪಾಸ್‌ಪೋರ್ಟ್‌, ಟಿಕೆಟ್‌, ವೀಸಾ ಪರಿಶೀಲಿಸಿದ ಬಳಿಕ ಏರ್‌ಪೋರ್ಟ್‌ ಪೊಲೀಸರ ವಶಕ್ಕೆ ಪ್ರಜ್ವಲ್‌ರನ್ನು ನೀಡಲಾಗಿದೆ. ಬಳಿಕ ಕೆಲವೊಂದು ಪ್ರಕ್ರಿಯೆ ನಡೆಸಿ ಎಸ್‌ಐಟಿಗೆ ಹಸ್ತಾಂತರಿಸಲಾಗಿತ್ತು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-fox

Foxconn ಹೇಳಿಕೆ: ಮಹಿಳೆಯರಿಗೆ ತಾರತಮ್ಯ ಮಾಡಿಲ್ಲ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.