Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ


Team Udayavani, Jun 29, 2024, 6:45 AM IST

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಸಂಬಂಧ ಇತ್ತೀಚೆಗೆ ಅವರನ್ನು ಧ್ವನಿ ಪರೀಕ್ಷೆಗೆ ಒಳಪಡಿಸಿದಾಗ ಕೊಂಚ ಧ್ವನಿ ಬದಲಾಯಿಸಿ ಮಾತನಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿತ್ತು.

ಹಾಸನದ ಅಶ್ಲೀಲ ಚಿತ್ರವಿರುವ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಚುರುಕುಗೊಳಿಸಿದ್ದು ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಸಾಲು-ಸಾಲು ದೂರುಗಳ ಪೈಕಿ ಒಂದೊಂದೇ ಪ್ರಕರಣದ ಸಾಕ್ಷ್ಯ ಕಲೆ ಹಾಕಲಾಗುತ್ತಿದೆ.

ಸಂತ್ರಸ್ತೆಯರಿಬ್ಬರು ಎಸ್‌ಐಟಿಗೆ ಪ್ರಜ್ವಲ್‌ ರೇವಣ್ಣ ವಿರುದ್ಧ ಕೊಟ್ಟಿರುವ ಪ್ರತ್ಯೇಕ 2 ಪ್ರಕರಣಗಳಲ್ಲಿ ಇತ್ತೀಚೆಗೆ ಪ್ರಜ್ವಲ್‌ನನ್ನು ಧ್ವನಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಧ್ವನಿ ಪರೀಕ್ಷೆಯ ವೇಳೆ ಪ್ರಜ್ವಲ್‌ ರೇವಣ್ಣ ತಮ್ಮ ಧ್ವನಿಯನ್ನು ಕೊಂಚ ಬದಲಾಯಿಸಿ ಮಾತನಾಡಲು ಯತ್ನಿಸಿದ್ದರು ಎನ್ನಲಾಗಿದೆ. ಈ ಮೂಲಕ ತಮ್ಮ ವಿರುದ್ಧ ಎಸ್‌ಐಟಿಗೆ ಸೂಕ್ತ ಸಾಕ್ಷ್ಯ ಸಿಗಬಾರದೆಂಬ ಉದ್ದೇಶದಿಂದ ಈ ರೀತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಧ್ವನಿ ಪರೀಕ್ಷೆ ಸಾಕ್ಷ್ಯ?
ಪ್ರಜ್ವಲ್‌ ಅವರದ್ದು ಎನ್ನಲಾದ ವೈರಲ್‌ ಆಗಿರುವ ಅಶ್ಲೀಲ ವೀಡಿಯೋದಲ್ಲಿ ಸಂತ್ರಸ್ತೆಯರ ಜತೆಗೆ ಸಂಭಾಷಣೆ ನಡೆಸಿರುವ ಆಡಿಯೋ ಕೇಳಿ ಬಂದಿದೆ. ಆದರೆ ಸಂತ್ರಸ್ತೆಯರ ಜತೆಗೆ ಇರುವ ವ್ಯಕ್ತಿಯ ಮುಖ ಚಹರೆ ಕಂಡುಬಂದಿಲ್ಲ ಎನ್ನಲಾಗಿದೆ. ಹೀಗಾಗಿ ವೀಡಿಯೋದಲ್ಲಿ ಕೇಳಿ ಬಂದಿರುವ ಆಡಿಯೋ ಪ್ರಜ್ವಲ್‌ ರೇವಣ್ಣ ಅವರದ್ದೇ ಎಂಬುದನ್ನು ಸಾಕ್ಷ್ಯ ಸಮೇತ ಸಾಬೀತು ಪಡಿಸುವ ಉದ್ದೇಶದಿಂದ ಅವರನ್ನು ಧ್ವನಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎರಡೂ ಧ್ವನಿಗಳು ಹೋಲಿಕೆಯಾದರೆ ವೀಡಿಯೋದಲ್ಲಿರುವುದು ಪ್ರಜ್ವಲ್‌ ರೇವಣ್ಣ ಎಂಬುದಕ್ಕೆ ಬಲವಾದ ತಾಂತ್ರಿಕ ಸಾಕ್ಷ್ಯ ಸಿಕ್ಕಂತಾಗುತ್ತದೆ. ಇದೀಗ ಧ್ವನಿ ಪರೀಕ್ಷೆಯ ವರದಿಗಾಗಿ ಎಸ್‌ಐಟಿ ತಂಡ ಕಾದು ಕುಳಿತಿದೆ.

ಇಂದು ಪ್ರಜ್ವಲ್‌ ಕಸ್ಟಡಿ ಅಂತ್ಯ
ಪ್ರಜ್ವಲ್‌ ರೇವಣ್ಣ ವಶಕ್ಕೆ ಪಡೆದ ಅವಧಿಯು ಶನಿವಾರ ಅಂತ್ಯಗೊಳ್ಳಲಿದ್ದು ಎಸ್‌ಐಟಿ ಅಧಿಕಾರಿಗಳು ಜೂ. 29ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ. ಕೋರ್ಟ್‌ ಪ್ರಜ್ವಲ್‌ನ‌ನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರೆ ಪ್ರಜ್ವಲ್‌ಗೆ ಇನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸಬೇಕಾಗಿದೆ. ನ್ಯಾಯಾಲಯದಲ್ಲಿ ಈ ಹಿಂದೆ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಸದ್ಯ ಜೈಲಿನಿಂದ ಹೊರ ಬರುವುದೇ ಅನುಮಾನ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.