![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 17, 2024, 6:41 AM IST
ಮೈಸೂರು: “ನನ್ನ ಬಳಿಯಿರುವ ಭ್ರಷ್ಟಾ ಚಾರದ ಮಾಹಿತಿಯ ಪೆನ್ಡ್ರೈವ್ ನಿಮಗೆ ಕೊಡುತ್ತೇನೆ. ಅದರ ವಿರುದ್ಧ ಕ್ರಮ ತೆಗೆದು ಕೊಳ್ಳುವ ತಾಕತ್ತು ನಿಮಗಿದೆಯೇ?’- ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಕಿರುವ ಸವಾಲು.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, “ನನ್ನ ಬಳಿಯಿರುವ ಪೆನ್ಡ್ರೈವ್ನಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಹಣ ಹೊಂದಿಸಲು ಯಾವ ರೀತಿ ಪರದಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಆ ಪೆನ್ಡ್ರೈವ್ ಕೊಟ್ಟರೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರಾ?’ ಎಂದು ಪ್ರಶ್ನಿಸಿದರು. ಅಲ್ಲದೆ, “ನನ್ನನ್ನು ಹಿಟ್ ಅಂಡ್ ರನ್ ಎನ್ನುವ ಸಿಎಂ ಈ ಹಿಂದೆ ದಾಖಲೆಗಳ ಸಹಿತ ನಾನು ಮಾಡಿದ ಆರೋಪಗಳಿಗೆ ಯಾವ ಕ್ರಮ ಕೈಗೊಂಡಿದ್ದಾರೆ? ಈ ಸರಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ನಾನು ಪೆನ್ಡ್ರೈವ್ ಕೊಡುತ್ತಿಲ್ಲ’ ಎಂದರು.
ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ(ವಿಶೇಷ ತನಿಖಾ ತಂಡ) ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಎಸ್ಐಟಿಯನ್ನು ಕಾಣದ ಕೈಗಳು ನಿಯಂತ್ರಿಸುತ್ತಿವೆ. ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ಕೊಡದೆ ಬೇರೆಯವರಿಗೆ ಮಾಹಿತಿ ನೀಡುತ್ತಿದ್ದು, ಇದರಿಂದ ಎಸ್ಐಟಿ ತನಿಖೆ ಸರಿಯಾಗಿ ಆಗುತ್ತಿಲ್ಲ ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.