ಜನ ಈಗ ಸಚಿವ ತಂಗಡಗಿಗೇ ಹೊಡೆಯಿರಿ ಎನ್ನುತ್ತಿದ್ದಾರೆ: ಅಶೋಕ್‌

ಸಚಿವ ತಂಗಡಗಿ ವಿರುದ್ಧ ಪ್ರತಿಪಕ್ಷ ನಾಯಕನ ವಾಗ್ಧಾಳಿ

Team Udayavani, Mar 27, 2024, 11:00 PM IST

ಜನ ಈಗ ಸಚಿವ ತಂಗಡಗಿಗೇ ಹೊಡೆಯಿರಿ ಎನ್ನುತ್ತಿದ್ದಾರೆ: ಅಶೋಕ್‌

ಬೆಂಗಳೂರು: ಸಚಿವ ಶಿವರಾಜ್‌ ತಂಗಡಗಿ ಬಿಜೆಪಿಯಲ್ಲಿದ್ದಾಗ ಸಕ್ಕರೆ ತಿಂದುಕೊಂಡಿರಲಿ ಎಂದು ಅದೇ ಖಾತೆ ಕೊಟ್ಟಿದ್ದೆವು. ಆಗ ಸೋನಿಯಾಗೆ ಹೊಡೆಯಿರಿ ಎನ್ನುತ್ತಿದ್ದರು. ಈಗ ಕಾಂಗ್ರೆಸ್‌ ಸೇರಿ ಮೋದಿಗೆ ಹೊಡೆಯಿರಿ ಎನ್ನುತ್ತಾರೆ. ಆದರೆ, ಜನ ತಂಗಡಗಿಗೆ ಹೊಡೆಯಿರಿ ಎನ್ನುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದರು.

ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಂಗಡಗಿ ಅವರ ಗುರು ಡಿ.ಕೆ. ಶಿವಕುಮಾರ್‌ ಅವರು ಹಳ್ಳಿ ಭಾಷೆಯಲ್ಲಿ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾತ್ರವಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಸಿಎಂ ಸಿದ್ದರಾಮಯ್ಯ ಏಕವಚನ ಬಳಸುತ್ತಾರೆ. ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಸಚಿವರಾಗಿದ್ದಾರೆ. ರಾಜ್ಯದ ಜನರಿಗೆ ನೀರು ಕೊಡಲಾಗದವರು ನೀರಾವರಿ ಸಚಿವರಾಗಿದ್ದಾರೆ. ಒಟ್ಟಾರೆ ಸಂಸ್ಕಾರ, ಸಂಸ್ಕೃತಿ ಇಲ್ಲದ ಕಾಂಗ್ರೆಸ್‌, ನಾವು ಉಚಿತ ಯೋಜನೆಗಳನ್ನು ಕೊಡುತ್ತಿದ್ದೇವೆ ಎಂದು ಎಷ್ಟೇ ಹೇಳಿಕೊಂಡರೂ ಸೋಲು ಮಾತ್ರ ನಿಶ್ಚಿತ ಎಂದು ವಿಶ್ಲೇಷಿಸಿದರು.

ಸುಮಾರು 50 ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್‌ ಸರ್ಕಾರಗಳು ಎಷ್ಟು ಉದ್ಯೋಗ ಸೃಷ್ಟಿಸಿದ್ದವು. ಅಧಿಕಾರಕ್ಕೆ ಬಂದ ಕೂಡಲೇ ಪಂಚಗ್ಯಾರಂಟಿ ಎಂದಿದ್ದವರು ಹೇಗೆ ಅನುಷ್ಠಾನ ಮಾಡುತ್ತಿದ್ದೀರಿ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದೇವೆ. ಈ ಸರ್ಕಾರದ ಮೊದಲ ಸಂಪುಟಯೂ ಆಯಿತು, ಕೊನೆಯ ಸಂಪುಟ ಸಭೆಯೂ ಮುಗಿಯಿತು. ಯುವನಿಧಿ ಎಷ್ಟು ಜನರಿಗೆ ತಲುಪಿದೆ ಎಂದು ಪ್ರಶ್ನಿಸಿದರು.

ಕಮಲ ಕೆಸರಲ್ಲಿರಬೇಕು, ಹೊರೆ ಗದ್ದೆಯಲ್ಲಿರಬೇಕು ಎಂದಿರುವ ಡಿಸಿಎಂ ಶಿವಕುಮಾರ್‌ ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ಕೆಸರಲ್ಲಿ ಅರಳಿದ ಕಮಲ ಸೇರುವುದು ದೇವರ ಮುಡಿಯನ್ನೇ. ಗದ್ದೆಯಲ್ಲಿ ಬೆಳೆದ ಹೊರೆ ಕಣದಿಂದ ಮನೆ ಬರುವಾಗ ಧಾನ್ಯಲಕ್ಷ್ಮೀಯಾಗಿ ಬರುತ್ತದೆ. ಭ್ರಷ್ಟಾಚಾರದ ಕೈ ಮಾತ್ರ ವಿಧಾನಸೌಧದ ಮೂರನೇ ಮಹಡಿಯಲ್ಲಿ ಆಡಳಿತ ನಡೆಸಬೇಕೇ? ಈ ಬಾರಿಯ ಚುನಾವಣೆಯಲ್ಲಿ ಜನ ಒಂದು ಬೆರಳು ತೋರಿಸಿ ಮತ ಒತ್ತುವ ಮೂಲಕ ಇಡೀ ಕೈ ನುಂಗಿ ಹಾಕಲಿದ್ದಾರೆ ಎಂದು ಎಚ್ಚರಿಸಿದರು.

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ, ಮೇಲ್ಮನೆ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವಕ್ತಾರರಾದ ಎಚ್‌.ಎನ್‌. ಚಂದ್ರಶೇಖರ್‌, ಸುರಭಿ ಹೊದಿಗೆರೆ ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.