“ಪರಿಸರ ಸ್ನೇಹಿ ಗಣೇಶ ಹಬ್ಬ-2022: 30 ನಿಮಿಷದಲ್ಲಿ 3,308 ಗಣೇಶ: ಗಿನ್ನೆಸ್‌ ದಾಖಲೆ


Team Udayavani, Aug 29, 2022, 7:45 AM IST

“ಪರಿಸರ ಸ್ನೇಹಿ ಗಣೇಶ ಹಬ್ಬ-2022: 30 ನಿಮಿಷದಲ್ಲಿ 3,308 ಗಣೇಶ: ಗಿನ್ನೆಸ್‌ ದಾಖಲೆ

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ನ್ಯಾಷನಲ್‌ ಕಾಲೇಜಿನ ಮೈದಾನದಲ್ಲಿ ರವಿವಾರ ಹಮ್ಮಿಕೊಂಡ “ಪರಿಸರ ಸ್ನೇಹಿ ಗಣೇಶ ಹಬ್ಬ-2022′ ಗಿನ್ನೆಸ್‌ ದಾಖಲೆಯ ಪುಟಕ್ಕೆ ಸೇರ್ಪಡೆಯಾಗಿದೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಗಣೇಶ ಉತ್ಸವ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡ ಜೇಡಿಮಣ್ಣಿನ ಗಣಪತಿ ನಿರ್ಮಾಣದ ಜಾಗೃತಿ ಕಾರ್ಯಕ್ರಮದಲ್ಲಿ ಕೇವಲ 30 ನಿಮಿಷದಲ್ಲಿ 3,308 ಜನರು ಪರಿಸರ ಸ್ನೇಹಿ ಗಣಪತಿಯನ್ನು ರಚಿಸುವ ಮೂಲಕ ಗಿನ್ನೆಸ್‌ ದಾಖಲೆಯ ಪುಟ ಸೇರಿದೆ. ಈ ಹಿಂದೆ 2,183 ಮಂದಿ ನಿರ್ಮಿಸಿದ ಪರಿಸರ ಸ್ನೇಹಿ ಗಣಪತಿ ದಾಖಲೆ ಬರೆದಿತ್ತು.

ನೂರಾರು ತರಬೇತುದಾರರು:
ಎಲ್ಲಿಯೂ ಗಣಪತಿಯ ಮೂರ್ತಿಗೆ ಚ್ಯುತಿ ಬರದಂತೆ ನೋಡಿಕೊಳ್ಳಲು ನೂರಾರು ಮಂದಿ ತರಬೇತಿದಾರರನ್ನು ನೇಮಿಸಲಾಗಿತ್ತು. ಮೈದಾನದಲ್ಲಿ ಬೃಹದಾಕಾರದ ಎಲ್‌ಇಡಿ ಪರೆದ ಮೇಲೆ ಮೂರ್ತಿ ನಿರ್ಮಾಣದ ಲೈವ್‌ ವಿಡಿಯೋ ಸಹ ಪ್ರಸಾರವಾಗಿತ್ತು. ತಮ್ಮ ಕೈಯಾರೆ ಮೂರ್ತಿ ತಯಾರಿಸಿ ನೆರೆದಿದ್ದವರು ಖುಷಿಪಟ್ಟರು. ತಯಾರಿಸಿದ ಮೂರ್ತಿಗಳನ್ನು ಮನೆಗಳಿಗೆ ತೆಗೆದುಕೊಂಡು ಹೋದರು. ಮನೆಯಲ್ಲಿ ರಾಸಾಯನಿಕ ಬಣ್ಣ ಬಳಿಯದೇ ಆಹಾರ ಧಾನ್ಯ, ತರಕಾರಿ, ಕುಂಕುಮ, ಅರಿಶಿಣದಲ್ಲಿ ಮೂರ್ತಿ ಅಲಂಕಾರ ಮಾಡಿ ಪೂಜಿಸಲು ಆಯೋಜಕರು ಸಲಹೆ ನೀಡಿದರು.

ಉಚಿತ ಕಿಟ್‌:
ಕಾರ್ಯಕ್ರಮದಲ್ಲಿ ಭಾಗಿಯಾಗಿದ ಪ್ರತಿಯೊಬ್ಬರಿಗೂ ಗಣೇಶ ಮೂರ್ತಿ ತಯಾರಿಕೆಗೆ ಹದ ಮಾಡಿದ 3.5 ಕೆ.ಜಿ. ಜೇಡಿ ಮಣ್ಣು, ಹೂವು ಮತ್ತು ಔಷಧ ಗುಣವುಳ್ಳ ಸಸ್ಯಗಳ ಬೀಜ, ತಯಾರಿಕೆ ಬೇಕಾದ ಕಡ್ಡಿ, ಒಂದು ನೀರಿನ ಲೋಟ, ಅರ್ಧ ಮೀಟರ್‌ ಬಟ್ಟೆ, ಒಂದು ಮರದ ರಟ್ಟನ್ನು ಒಳಗೊಂಡ ಉಚಿತ ಕಿಟ್‌ ನೀಡಲಾಗಿತ್ತು. ಜತೆಗೆ ವಿದ್ಯಾರ್ಥಿಗಳನ್ನು ಕರೆ ತರಲು ಮಾಲಿನ್ಯ ನಿಯಂತ್ರಣ ಮಂಡಳಿ 20 ಬಿಎಂಟಿಸಿ ಬಸ್‌ಗಳ ನಿಯೋಜನೆ ಮಾಡಿದೆ.

ಮುಂದಿನ ವರ್ಷ ರಾಜ್ಯಾದ್ಯಂತ
ಪರಿಸರ ಸ್ನೇಹಿ ಗಣೇಶ ಕಾರ್ಯಾಗಾರ
ಬೆಂಗಳೂರು: ಮುಂದಿನ ವರ್ಷದಿಂದ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ಪರಿಸರ ಸ್ನೇಹಿ ಗಣಪತಿ ನಿರ್ಮಾಣ ಬೃಹತ್‌ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಂತ ಎ.ತಿಮ್ಮಯ್ಯ ತಿಳಿಸಿದರು.

ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆದ ಪರಿಸರ ಸ್ನೇಹಿ ಗಣೇಶ ಹಬ್ಬ-2022′ ಕಾರ್ಯಕ್ರಮದಲ್ಲಿ ಮಾತನಾಡಿದ ಅವ ರು, ಮುಂದಿನ ವರ್ಷದಿಂದ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಿನ ಸ್ಥಳೀಯ ಗಣೇಶೋತ್ಸವ ಸಮಿತಿಗಳ ಸಹಯೋಗದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದರು.

ಕಳೆದ ವರ್ಷ ಸಾಮಾಜಿಕ ಜಾಲತಾಣಗಳ ಮೂಲಕ ಪಿಒಪಿ ಗಣೇಶ ಬದಲು ಅರಿಶಿಣ ಗಣೇಶ ಮೂರ್ತಿ ತಯಾರಿಸಿ ಬಳಸುವ ಬಗ್ಗೆ ಅರಿಶಿನ ಗಣೇಶ ಅಭಿಯಾನವನ್ನು ಮಂಡಳಿ ಆಯೋಜಿಸಿತ್ತು. ಈ ಅಭಿಯಾನದಲ್ಲಿ 2,138 ಮೂರ್ತಿಗಳನ್ನು ತಯಾರಿಸುವ ಮೂಲಕ ಅಭೂತಪೂರ್ವ ಯಶಸ್ಸು ಕಂಡಿತು. ಜತೆಗೆ ಏಷಿಯಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿತ್ತು. ಈ ಬಾರಿ ರಾಸಾಯನಿಕ ಬಣ್ಣಲೇಪಿತ ಬದಲು ಮಣ್ಣಿನ ಮತ್ತು ಔಷಧೀಯ ಸಸ್ಯಗಳ ಬೀಜ ಒಳಗೊಂಡ ಗಣೇಶ ಮೂರ್ತಿ ಬಳಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದಾರೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಬೆಂಗಳೂರು ಗಣೇಶೋತ್ಸವ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.