ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು


Team Udayavani, May 7, 2024, 6:30 AM IST

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯ ಲಿದ್ದು, ಒಟ್ಟು 2.59 ಕೋಟಿ ಮತ ದಾರರು ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.

ಒಂದೂವರೆ ತಿಂಗಳಿಂದ ರಣ ಬಿಸಿಲನ್ನು ಲೆಕ್ಕಿಸದೆ ರಾಜಕೀಯ ಪಕ್ಷಗಳು ಭರ್ಜರಿಯಾಗಿ ಮತ ಬೇಟೆ ನಡೆಸಿದ್ದು, ಉತ್ತಮ ಫ‌ಸಲಿನ ನಿರೀಕ್ಷೆಯಲ್ಲಿವೆ. ಮತದಾರರನ್ನು ಸೆಳೆಯಲು ಎಲ್ಲ ತಂತ್ರಗಾರಿಕೆ, ರಾಜಕೀಯ ಪಟ್ಟುಗಳನ್ನು ಬಳ ಸಿದ ಬಿಜೆಪಿ ಹಾಗೂ ಕಾಂಗ್ರೆಸ್‌ ಅಂತಿಮವಾಗಿ ಮತದಾರರನ ಮೇಲೆ ಭಾರ ಹಾಕಿದ್ದಾರೆ.

ಒಟ್ಟು 28,257 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿ ಯುತ ಮತದಾನಕ್ಕೆ ಚುನಾವಣ ಆಯೋಗ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಮುಖ್ಯವಾಗಿ ಬಿಸಿಲು ನಿರ್ವಹಿಸುವುದಕ್ಕಾಗಿ ಶಾಮಿಯಾನ, ಫ್ಯಾನ್‌, ವಿಶ್ರಾಂತಿ ಕೊಠಡಿ, ಕುಡಿಯುವ ನೀರು, ಒಆರ್‌ಎಸ್‌ ಮತ್ತಿತರ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕಾನೂನು-ಸುವ್ಯವಸ್ಥೆಗೆ ಪೊಲೀಸ್‌ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಚುನಾವಣ ಆಯೋಗ ಮತದಾನ ಪ್ರಕ್ರಿಯೆ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಎಲ್ಲ 14 ಕ್ಷೇತ್ರಗಳಲ್ಲಿ ಸದ್ಯ ಬಿಜೆಪಿ ಸಂಸದರಿದ್ದು, ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್‌ ಹೊಂದಿದೆ.

ಘಟಾನುಘಟಿಗಳು ಕಣದಲ್ಲಿ
ಇಬ್ಬರು ಮಾಜಿ ಸಿಎಂಗಳು, ಇಬ್ಬರು ಹಾಲಿ ಕೇಂದ್ರ ಸಚಿವರು ಸ್ಪರ್ಧೆಯಲ್ಲಿ ರುವುದರಿಂದ ಚುನಾವಣೆ ಪ್ರತಿಷ್ಠೆ ಪಡೆದುಕೊಂಡಿದೆ. ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಿದ್ದರೆ, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಧಾರವಾಡದಿಂದ, ಭಗವಂತ ಖೂಬಾ ಬೀದರ್‌ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದ್ದಾರೆ.

ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌, ಚಿಕ್ಕೋಡಿಯಿಂದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತ ಪಾಟೀಲ್‌, ಬೀದರ್‌ನಿಂದ ಸಚಿವ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರೆ, ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಬಿಜೆಪಿಯಿಂದ ಕಣದಲ್ಲಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್‌ಕುಮಾರ್‌, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆಯಿಂದ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅವರ ಸಹೋದರ ಕೆ. ರಾಜಶೇಖರ್‌ ಹಿಟ್ನಾಳ್‌ ಕೊಪ್ಪಳದಿಂದ ಸ್ಪರ್ಧೆಯಲ್ಲಿದ್ದಾರೆ. ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಸಂಡೂರು ಶಾಸಕ ತುಕಾರಾಂ ಸ್ಪರ್ಧಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಬಿಜೆಪಿ ವಿರುದ್ಧ ಬಂಡೆದಿದ್ದರೆ, ದಾವಣಗೆರೆಯಲ್ಲಿ ವಿನಯ್‌ ಕುಮಾರ್‌ ಕಾಂಗ್ರೆಸ್‌ ವಿರುದ್ಧ ಸೆಟೆದು ನಿಂತಿದ್ದಾರೆ.

ಒಟ್ಟು ಕ್ಷೇತ್ರಗಳು 14 (10 ಸಾಮಾನ್ಯ,
4 ಮೀಸಲು)

ಅತೀ ಹೆಚ್ಚು ಮತದಾರರು
ಕಲಬುರಗಿ: 20.98 ಲಕ್ಷ
ಅತೀ ಕಡಿಮೆ ಮತದಾರರು
ಉತ್ತರ ಕನ್ನಡ: 16.41 ಲಕ್ಷ
ಅತೀ ಹೆಚ್ಚು ಅಭ್ಯರ್ಥಿಗಳು
ದಾವಣಗೆರೆ: 30
ಅತೀ ಕಡಿಮೆ ಅಭ್ಯರ್ಥಿಗಳು
ವಿಜಯಪುರ: 8
ಅತೀ ಹೆಚ್ಚು ಮತಗಟ್ಟೆಗಳು
ರಾಯಚೂರು: 2,203
ಅತೀ ಕಡಿಮೆ ಮತಗಟ್ಟೆಗಳು
ಧಾರವಾಡ: 1,893

ಒಟ್ಟು ಮತದಾರರು

2.59 ಕೋಟಿ
ಪುರುಷರು 1,29,48,978
ಮಹಿಳೆಯರು 1,29,66,570
ಯುವ ಮತದಾರರು 6.90 ಲಕ್ಷ
ಪೊಲೀಸರು 45,000ಕ್ಕೂ ಹೆಚ್ಚು
ಒಟ್ಟು ಮತಗಟ್ಟೆಗಳು 28,257
ಒಟ್ಟು ಅಭ್ಯರ್ಥಿಗಳು 227

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈಗ ಮಂಗಳವಾರ ಮತದಾನ ನಡೆಯಲಿರುವ 14 ಕ್ಷೇತ್ರಗಳ ಮತದಾರರು ತಮ್ಮ ಮನೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಹೊರಬಂದು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು. ಮೊದಲ ಹಂತದ ಮತದಾನ ದಾಖಲೆ ಹಿಂದಿಕ್ಕುವ ರೀತಿ ಮತದಾನ ಮಾಡಬೇಕು ಎಂಬುದು ಚುನಾವಣ ಆಯೋಗದ ಮನವಿಯಾಗಿದೆ.
ಮನೋಜ್‌ ಕುಮಾರ್‌ ಮೀನಾ,
ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.