![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Feb 25, 2017, 11:18 AM IST
ಮಂಗಳೂರು : ಸಂಘಪರಿವಾರದ ಹರತಾಳದ ಕರೆಯ ಹೊರತಾಗಿಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಿಪಿಐ(ಎಂ) ಐಕ್ಯತಾ ರಾಲಿ ಉದ್ದೇಶಿಸಿ ಮಾತನಾಡಲು ಶನಿವಾರ ಮಂಗಳೂರಿಗೆ ಆಗಮಿಸಿದ್ದಾರೆ. ಕಾಸರಗೋಡಿನಿಂದ ರೈಲಿನಲ್ಲಿ ಆಗಮಿಸಿದ ವಿಜಯನ್ ಅವರನ್ನು ಸಿಪಿಐ(ಎಂ) ಕಾರ್ಯಕರ್ತರು ಜಯಘೋಷಗಳೊಂದಿಗೆ ಸ್ವಾಗತಿಸಿದರು.
ಸ್ವಾಗತದ ವೇಳೆ ಭದ್ರತಾ ವಿಚಾರವಾಗಿ ಪಿಣರಾಯಿ ವಿಜಯನ್ ಅವರೊಂದಿಗೆ ಆಗಮಿಸಿದ್ದ ಕೇರಳದ ಪೊಲೀಸ್ ಸಿಬಂದಿ ಮತ್ತು ಮಂಗಳೂರಿನ ಪೊಲೀಸರಿಗೆ ತೀವ್ರ ವಾಗ್ವಾದ ನಡೆಯಿತು.
ಇಲ್ಲಿ ಬಂದಿರುವ ವೇಳೆ ನಾವೇ ಭದ್ರತೆ ನೀಡುತ್ತೇವೆ ನೀವು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮಂಗಳೂರು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.
ನೂರಾರು ಪೊಲೀಸರು ಪಿಣರಾಯಿ ಅವರ ಬೆಂಗಾವಲಿಗೆ ನಿಂತಿದ್ದು ಎಲ್ಲೆಡೆ ಹದ್ದಿನ ಕಣ್ಣು ಇರಿಸಲಾಗಿದೆ.
ಕೋಮು ಸೌಹಾರ್ದ ರ್ಯಾಲಿ ಮತ್ತು ಸಭೆ ಹೊರತುಪಡಿಸಿ ಉಳಿದಂತೆ ಹರತಾಳ, ಬಂದ್ ಆಚರಿಸದಂತೆ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.