Police ಬಲ ಬಳಸಿ ಹೋರಾಟ ಹತ್ತಿಕ್ಕುವ ಯತ್ನ: ವಿಜಯೇಂದ್ರ ಕಿಡಿ
ಅಕ್ರಮದಿಂದ ಕಳಚಿದ ಸಿಎಂ ಮುಖವಾಡ
Team Udayavani, Jul 12, 2024, 11:08 PM IST
ಬೆಂಗಳೂರು: ಮುಡಾ ಅಕ್ರಮದ ವಿರುದ್ಧ ಬಿಜೆಪಿ ನಡೆಸಿರುವ ಹೋರಾಟವನ್ನು ಪೊಲೀಸ್ ಬಲ ಬಳಸಿ ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಿಡಿ ಕಾರಿದರು.
ಮೈಸೂರಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅವರನ್ನು ನೈಸ್ ರಸ್ತೆ ಜಂಕ್ಷನ್ ಬಳಿ ಪೊಲೀಸರು ವಶಕ್ಕೆ ಪಡೆದ ಅನಂತರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಅಕ್ರಮದಿಂದ ಸಿಎಂ ಸಿದ್ದರಾಮಯ್ಯ ಅವರ ಮುಖವಾಡ ಕಳಚಿದೆ. ಒಂದೆಡೆ ದಲಿತರ ಹಣ ಲೂಟಿ ಹೊಡೆಯುತ್ತಿದ್ದರೆ, ಮತ್ತೊಂದೆಡೆ ಹರಾಜಿನ ಮೂಲಕ ಬಡವರಿಗೆ ಹಂಚಬೇಕಾದ ನಿವೇಶನಗಳನ್ನು ಪ್ರಭಾವಿಗಳು ಕಬಳಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ ಎಂದು ವಾಗ್ಧಾಳಿ ನಡೆಸಿದರು. ಈ ಬಗ್ಗೆ ಸಿದ್ದರಾಮಯ್ಯನವರು ಉತ್ತರ ಕೊಡಲೇಬೇಕಾಗುತ್ತದೆ. ಬಿಜೆಪಿಯ ಶಾಂತಿಯುತ ಹೋರಾಟಕ್ಕೆ ಕಲ್ಲು ಹಾಕಿದ ಮಾತ್ರಕ್ಕೆ ಎಲ್ಲವನ್ನು ನಿಭಾಯಿಸಿದೆ ಎಂದು ಬೀಗಬೇಡಿ. ಈ ಪ್ರಕರಣವನ್ನು ನೀವು ಸಿಬಿಐಗೆ ಕೊಡಲೇಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.