Politics: ಎರಡೂ ಕಡೆ ಸಂಧಾನ ಸದ್ಯಕ್ಕಿಲ್ಲ ಜಿಗಿತ?

 ಪಕ್ಷಾಂತರಿಗಳ ಮನವೊಲಿಕೆಯಿಂದ ತತ್‌ಕ್ಷಣಕ್ಕೆ ಕ್ಷೀಣಿಸಿದ ಪಕ್ಷಾಂತರ ಸಾಧ್ಯತೆ

Team Udayavani, Aug 19, 2023, 12:14 AM IST

bjp cong election fight

ಬೆಂಗಳೂರು: “ಆಪರೇಶನ್‌ ಕಾಂಗ್ರೆಸ್‌’ ಚರ್ಚೆ ತೀವ್ರವಾಗಿರುವುದರ ಮಧ್ಯೆಯೇ ಪಕ್ಷಾಂತರಿಗಳ ಓಲೈಕೆಗೆ ಎರಡೂ ಪಕ್ಷಗಳಿಂದ ಪ್ರಯತ್ನಗಳು ಪ್ರಾರಂಭ ವಾಗಿದ್ದು, ತತ್‌ಕ್ಷಣಕ್ಕೆ ಪಕ್ಷಾಂತರ ಸಾಧ್ಯತೆಗಳು ಕ್ಷೀಣವಾಗಿವೆ. ಆದರೆ ಈ ಪ್ರಕ್ರಿಯೆ ಮುಂದಿನ 2 ತಿಂಗಳೊಳಗಾಗಿ ಫ‌ಲ ನೀಡಬಹುದೆಂಬ ಆಶಾವಾದದಲ್ಲಿ ಕಾಂಗ್ರೆಸ್‌ ನಾಯಕರು ಇದ್ದರೆ, ಸಂಭಾವ್ಯರ ಜತೆ ಬಿಜೆಪಿ ನಾಯಕರು ಸಂಧಾನ ಪ್ರಾರಂಭಿಸಿದ್ದಾರೆ.

ಮಾಜಿ ಸಚಿವರಾದ ಎಸ್‌.ಟಿ. ಸೋಮ ಶೇಖರ್‌, ಶಿವರಾಂ ಹೆಬ್ಟಾರ್‌, ಬೈರತಿ ಬಸವರಾಜ್‌, ಮಾಜಿ ಸಂಸದ ಬಿ.ವಿ. ನಾಯಕ್‌, ಮಾಜಿ ಶಾಸಕಿ ಪೂರ್ಣಿಮಾ ಸಹಿತ ಅನೇಕರಿಗೆ ಕಾಂಗ್ರೆಸ್‌ ಈಗಾಗಲೇ ಗಾಳ ಹಾಕಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಬಹಿರಂಗವಾಗಿ ಹೊಸ ರಾಜಕೀಯ ಸಮೀಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಧಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ  ಬಿ.ಎಸ್‌. ಯಡಿಯೂರಪ್ಪ ನಿವಾಸದಲ್ಲಿ ನಡೆದ

ಶಾಸಕರ ಸಭೆಗೆ ಗೈರು ಹಾಜರಾಗುವ ಮೂಲಕ ಎಸ್‌.ಟಿ. ಸೋಮಶೇಖರ್‌ ಇನ್ನಷ್ಟು ಕುತೂಹಲ ಸೃಷ್ಟಿಸಿದ್ದಾರೆ.

ಶೆಟ್ಟರ್‌, ಸವದಿಗೆ ಹೊಣೆ

ಈ ಮಧ್ಯೆ ಸಂಸತ್‌ ಚುನಾವಣೆ ದೃಷ್ಟಿಯಿಂದ ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕರನ್ನು

ಕಾಂಗ್ರೆಸ್‌ಗೆ ಸೆಳೆಯುವ ಜವಾಬ್ದಾರಿ ಯನ್ನು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಯವರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಬಾಗಲ ಕೋಟೆ ಭಾಗದ ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವುದಕ್ಕೆ ಕಾಂಗ್ರೆಸ್‌ ಯೋಜನೆ ರೂಪಿಸಿದೆ.

ಬಿಜೆಪಿ ಶಾಸಕರು ಪಕ್ಷ ತೊರೆಯುತ್ತಾರೆಂಬುದು ಸುಳ್ಳು ಸುದ್ದಿ. ಎಸ್‌.ಟಿ. ಸೋಮಶೇಖರ್‌, ಶಿವರಾಮ್‌ ಹೆಬ್ಟಾರ್‌ ಜತೆ ನಾನು ಮಾತನಾಡಿದ್ದು, ಯಾರೂ ಪಕ್ಷ ತೊರೆಯುವುದಿಲ್ಲ.

-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ

ಸ್ಥಳೀಯವಾಗಿರುವ ಕೆಲವು ಸಮಸ್ಯೆಗಳನ್ನು ಪಕ್ಷದ ನಾಯಕರ ಗಮನಕ್ಕೆ ತಂದಿದ್ದೇನೆ. ಶನಿವಾರ ಸಿ.ಟಿ. ರವಿ ಅವರನ್ನು ಭೇಟಿ ಮಾಡಲಿದ್ದೇನೆ. ಕಾದು ನೋಡುತ್ತೇನೆ.

-ಎಸ್‌.ಟಿ. ಸೋಮಶೇಖರ್‌, ಬಿಜೆಪಿ ಶಾಸಕ

ನಾನು ಕಾಂಗ್ರೆಸ್‌ ಸೇರುವ ಪ್ರಮೇಯವೇ ಇಲ್ಲ. ಈ ಬಗ್ಗೆ ಕೇಳಿಬರುತ್ತಿರುವ ಸುದ್ದಿಗಳು ವದಂತಿ. ಯಾರೂ ಇದನ್ನು ನಂಬಬಾರದು. ನಾನು ಕನಸಿನಲ್ಲೂ ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಯೋಚಿಸಿಲ್ಲ.

-ಕೆ. ಗೋಪಾಲಯ್ಯ, ಮಾಜಿ ಸಚಿವ

 

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.