ಪೋಷಣ್‌ ಅಭಿಯಾನ್‌ ಸೀರೆ ವ್ಯರ್ಥ: ಒಪ್ಪಿದ ಸರಕಾರ


Team Udayavani, Mar 18, 2022, 6:35 AM IST

ಪೋಷಣ್‌ ಅಭಿಯಾನ್‌ ಸೀರೆ ವ್ಯರ್ಥ: ಒಪ್ಪಿದ ಸರಕಾರ

ಬೆಂಗಳೂರು: ಪೋಷಣ್‌ ಅಭಿಯಾನ್‌ ಯೋಜನೆಯಲ್ಲಿ 9.9 ಕೋ.ರೂ. ವೆಚ್ಚದಲ್ಲಿ ಖರೀದಿಸಿದ 2.56 ಲಕ್ಷ ಸೀರೆಗಳನ್ನು ಅಂಗನವಾಡಿ ಸಿಬಂದಿ ಸ್ವೀಕರಿಸಲಿಲ್ಲ. ಅವರಿಗೆ ನಿಯಮಗಳನ್ನು ಮನದಟ್ಟು ಮಾಡಲಾಗಿದೆ ಎಂದು ಸದನದಲ್ಲಿ ಹೇಳಿರುವ ಸರಕಾರ ಈ ಮೂಲಕ ಅದು ವ್ಯರ್ಥವಾದಂತಾಗಿದೆ ಎಂದು ಒಪ್ಪಿಕೊಂಡಿದೆ.

ತಲಾ 385.75 ರೂ.ಗಳಂತೆ 2,56,982 ಸೀರೆಗಳನ್ನು 9,91,30,806 ರೂ. ನೀಡಿ ಖರೀದಿಸಲಾಗಿದೆ. ಕೇಂದ್ರ ಸರಕಾರದ 2020ರ ಸೆ. 4ರ ಮಾರ್ಗಸೂಚಿ ಷರತ್ತಿನಲ್ಲಿ ಪೋಷಣ್‌ ಅಭಿಯಾನ್‌ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೀಡುವ ಸಮವಸ್ತ್ರದಲ್ಲಿ ಪೋಷಣ್‌ಅಭಿಯಾನ್‌ ಲೋಗೋವನ್ನು ಮುದ್ರಿಸಲು ತಿಳಿಸಲಾಗಿದೆ. ಅದರಂತೆ 2.56 ಲಕ್ಷ ಸೀರೆಗಳನ್ನು ವಿತರಿಸಲಾಗಿದೆ. ಆದರೆ ಈ ಸೀರೆಗಳನ್ನು ಧರಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿರೋಧಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಘಟನೆಗಳ ಸಭೆ ನಡೆಸಿ ಕೇಂದ್ರ ಸರಕಾರದ ಷರತ್ತುಗಳನ್ನು ಮನದಟ್ಟು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಅವರು ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಉತ್ತರಿಸಿದ್ದಾರೆ. ಅಂತೆಯೇ ಪೋಷಣ್‌ ಅಭಿಯಾನ್‌ ಯೋಜನೆಗೆ 85 ಕೋ.ರೂ. ನಿಗದಿಯಾಗಿದ್ದು ಅನುದಾನ ಬಿಡುಗಡೆಯಾಗಿಲ್ಲ ಎಂದು ತಿಳಿಸಿದ್ದಾರೆ. ಇದರಿಂದಾಗಿ ಸಿಬಂದಿಗೆ ವೇತನ ನೀಡಲು ಸಾಧ್ಯವಾಗಿಲ್ಲ.

ಉದಯವಾಣಿ’ ವರದಿ :

ಪೋಷಣ್‌ ಅಭಿಯಾನದಲ್ಲಿ ಖರೀದಿಸಿದ 2.56 ಲಕ್ಷ ಸೀರೆಗಳು ಇನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೋದಾಮಿನಲ್ಲಿದೆ. ಉಪಯೋಗ ಇಲ್ಲ ಎಂದು “ಉದಯವಾಣಿ’ ಫೆ. 24ರಂದು ವರದಿ ಮಾಡಿತ್ತು. ಅಂತೆಯೇ ಪೋಷಣ್‌ ಅಭಿಯಾನ್‌ ಸಿಬಂದಿಗೆ ವೇತನ ನೀಡಲು ಸಮಸ್ಯೆಯಾದ ಕುರಿತು “ಉದಯವಾಣಿ’ ಜ. 21ರಂದು “ಪೋಷಣ್‌ ಅಭಿಯಾನ ಸಿಬಂದಿಗೆ ಆರ್ಥಿಕ ಅಪೌಷ್ಟಿಕತೆ’ ಎಂದು ವರದಿ ಮಾಡಿತ್ತು. ಈ ಎರಡೂ ವರದಿಗಳ ಆಧಾರದಲ್ಲಿ ಸದನದಲ್ಲಿ ಪ್ರಶ್ನೆ ಮಂಡನೆಯಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.