ಪೋಸ್ಟ್‌ ಕೋವಿಡ್‌-19 ಅನಾರೋಗ್ಯ ಹಾವಳಿ !

ಗುಣಮುಖರ ಪೈಕಿ ಮೂವರಲ್ಲಿ ಒಬ್ಬರಿಗೆ ಆರೋಗ್ಯ ಸಮಸ್ಯೆ

Team Udayavani, Oct 14, 2020, 12:38 AM IST

ಪೋಸ್ಟ್‌ ಕೋವಿಡ್‌-19 ಅನಾರೋಗ್ಯ ಹಾವಳಿ !

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ ಆಯ್ತು, ಈಗ ಅದು ಸೃಷ್ಟಿಸುತ್ತಿರುವ “ಕೋವಿಡ್‌ ಅನಂತರದ ಅನಾರೋಗ್ಯ’ದ ಹಾವಳಿ ಶುರುವಾಗಿದೆ. ಸದ್ಯ ರಾಜ್ಯದಲ್ಲಿ ಗುಣಮುಖರ ಪೈಕಿ ಮೂವರಲ್ಲಿ ಒಬ್ಬರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.

ರಾಜ್ಯದಲ್ಲಿ ಮಂಗಳವಾರ ಗುಣಮುಖರ ಸಂಖ್ಯೆ ಆರು ಲಕ್ಷಕ್ಕೆ ತಲುಪಿದೆಯಾದರೂ ಸೋಂಕಿನಿಂದ ಗುಣಮುಖರಾದ ಶೇ. 33ರಷ್ಟು ಮಂದಿಯಲ್ಲಿ ಪ್ರಮುಖವಾಗಿ ಶ್ವಾಸಕೋಶ ಸೋಂಕು, ರಕ್ತ ಹೆಪ್ಪು ಗಟ್ಟುವಿಕೆ ಹಾಗೂ ತೀವ್ರ ಆಯಾಸದಂತಹ ಮೂರು ಸಮಸ್ಯೆಗಳು ಕಾಣಿಸಿ ಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕಾರಣಕ್ಕಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಹೊಂದಿ ರುವವರಿಗಾಗಿಯೇ ಪೋಸ್ಟ್‌ ಕೋವಿಡ್‌ ಕ್ಲಿನಿಕ್‌ಗಳನ್ನು ತೆರೆಯಲು ಚಿಂತನೆ ಮಾಡಲಾಗಿದೆ.

ಆರಂಭದ ದಿನಗಳಲ್ಲಿ ಕೊರೊನಾ ಕೇವಲ ಫ್ಲ್ಯೂ ಮಾದರಿಯ ಸೋಂಕು ಎಂದು ಭಾವಿಸಲಾಗಿತ್ತು. ಆದರೆ, ಕಳೆದ ಎಂಟು ತಿಂಗಳ ಅನುಭವ ಮತ್ತು ಸಂಶೋಧನೆಗಳ ಅನಂತರ ಸೋಂಕಿನ ಹೊಸ ಆಯಾಮಗಳು ಬೆಳಕಿಗೆ ಬರುತ್ತಿವೆ. ಸೋಂಕಿನಿಂದ ಗುಣಮುಖರಾದ ಬಳಿಕ ವ್ಯಕ್ತಿಯಲ್ಲಿ
ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಯು ಅತ್ಯಂತ ಪ್ರಮುಖವಾಗಿದೆ.

ವೈರಸ್‌ ಮನುಷ್ಯನ ದೇಹ ಸೇರಿದ ಬಳಿಕ ಕೇವಲ ಜ್ವರ, ಶೀತ, ಉಸಿರಾಟ ಸಮಸ್ಯೆಯನ್ನು ಮಾತ್ರ ಉಂಟು ಮಾಡುವುದಿಲ್ಲ. ವೈರಸ್‌ ಪ್ರಮಾಣ ಹೆಚ್ಚಿದ್ದಾಗ ಶ್ವಾಸಕೋಶ, ಹೃದಯ, ಕಿಡ್ನಿ ಸೇರಿದಂತೆ ಕೆಲ ಅಂಗಾಂಗಗಳ ಚಟುವಟಿಕೆಗಳಿಗೂ ತೊಂದರೆ ಮಾಡುತ್ತದೆ. ರಕ್ತದ ಹೆಪ್ಪುಗಟ್ಟುವಿಕೆ ಆರಂಭವಾಗುತ್ತದೆ. ರೋಗ ನಿರೋಧಕ ಅಂಶಗಳನ್ನು ನಾಶ ಮಾಡುತ್ತದೆ. ಇದರಿಂದಲೇ ಸೋಂಕಿತರು ಗುಣಮುಖರಾದ ಬಳಿಕ ಹೃದ್ರೋಗ, ಉಸಿರಾಟ ಸಮಸ್ಯೆಗಳು ಕಾಣಿಸಿಕೊಳ್ಳತೊಡಗಿವೆ ಎಂದು ಆರೋಗ್ಯ ತಜ್ಞ ಡಾ| ಸುದರ್ಶನ್‌ ಬಲ್ಲಾಳ್‌ ಹೇಳುತ್ತಾರೆ.

ಪರೀಕ್ಷೆಗಳಿಂದ ಖಚಿತ
ಸೋಂಕಿನ ಲಕ್ಷಣ ಇದ್ದವರಲ್ಲಿ ಮಾತ್ರ ಈ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿಯೇ, ಲಕ್ಷಣಗಳೊಂದಿಗೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವವರಿಗೆ ಐದು ದಿನದ ಬಳಿಕ ಡಿ ಡೈಮರ್‌, ಸೇರಮ್‌ ಫೆರಿಟಿನ್‌, ಇಸಿಜಿ, ಸಿಟಿ ಸ್ಕ್ಯಾನ್‌ ಸೇರಿದಂತೆ 14 ವಿವಿಧ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಬಳಿಕ ವ್ಯತ್ಯಾಸ ಕಂಡುಬಂದರೆ ಆ ಪ್ರಕಾರ ಚಿಕಿತ್ಸೆ ಮುಂದುವರಿಸ ಲಾಗುತ್ತದೆ. ಇನ್ನು ಗುಣಮುಖರಾಗಿ ಮನೆಗೆ ತೆರಳಿದ ಬಳಿಕ ಏನಾದರೂ ಸಮಸ್ಯೆ ಕಂಡು ಬಂದರೆ ಈ ಪರೀಕ್ಷೆಗಳನ್ನು ಸೂಚಿಸಲಾಗುತ್ತಿದೆ.

ನಿರ್ಲಕ್ಷ್ಯ ಬೇಡ
ಕೊರೊನಾ ಸೋಂಕು ಬಂದು ಹೋಗಿದೆ, ಇಮ್ಯುನಿಟಿ ಪವರ್‌ ಹೆಚ್ಚಾಗಿದೆ. ಇನ್ನೆರಡು ತಿಂಗಳು ನನಗೆ ಯಾವ ಆರೋಗ್ಯ ಸಮಸ್ಯೆ ಇರುವುದಿಲ್ಲ ಎಂದು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬೇಡ. ಯಾಕೆಂದರೆ ಗುಣಮುಖರಾದ ಅರ್ಧದಷ್ಟು ಮಂದಿಗೆ ಆ್ಯಂಟಿ ಬಾಡಿಸ್‌ ಉತ್ಪತ್ತಿಯಾಗದ ಕಾರಣ ಇಮ್ಯುನಿಟಿ ಹೆಚ್ಚಾಗಿರುವುದಿಲ್ಲ. ಈ ರೀತಿಯ ಮನಃಸ್ಥಿತಿಯಿಂದ ಹೊರಬಂದು ಎರಡರಿಂದ ಮೂರು ತಿಂಗಳು ಮುಂಜಾಗ್ರತೆ ವಹಿಸುವಂತೆ ಆರೋಗ್ಯ ತಜ್ಞರು ಸೂಚಿಸಿದ್ದಾರೆ.

ಗುಣಮುಖರಾದ ಶೇ.30ಕ್ಕೂ ಹೆಚ್ಚು ಮಂದಿಯಲ್ಲಿ ಪೋಸ್ಟ್‌ ಕೋವಿಡ್‌ ಇಲ್‌ನೆಸ್‌ ಕಾಣಿಸಿಕೊಳ್ಳುತ್ತಿವೆ. ಸಮಸ್ಯೆ ಕಾಣಿಸಿಕೊಂಡರೇ ಪರೀಕ್ಷೆಗೊಳಗಾಗಿ ಚಿಕಿತ್ಸೆ ಪಡೆಯಬೇಕು. ಗುಣಮುಖರಾದವರು ಎರಡರಿಂದ ಮೂರು ತಿಂಗಳು ಸೂಕ್ತ ಆಹಾರ ಕ್ರಮಗಳೊಂದಿಗೆ ಮುಂಜಾಗ್ರತೆ ವಹಿಸಬೇಕು.
– ಡಾ| ಸುದರ್ಶನ್‌ ಬಲ್ಲಾಳ್‌, ಅಧ್ಯಕ್ಷರು ಮಣಿಪಾಲ್‌ ಆಸ್ಪತ್ರೆ.

 

ವರದಿ- ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.