Power Cuts; ಬೆಂಕಿ ಬಿದ್ದಾಗ ಬಾವಿ ತೋಡುವಂತೆ ಪೂರ್ವಸಿದ್ಧತೆ ಇಲ್ಲದೆ ಎಡವಟ್ಟು

ಏರಿಕೆ ಟ್ರೆಂಡ್‌ 3 ತಿಂಗಳಿಂದಲೂ ಇದೆ ಸರಕಾರ ತಡವಾಗಿ ಎಚ್ಚೆತ್ತುಕೊಂಡ ಆರೋಪ

Team Udayavani, Oct 14, 2023, 6:10 AM IST

current

ಬೆಂಗಳೂರು: ವಿದ್ಯುತ್‌ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರಕಾರವು ಬೆಂಕಿ ಬಿದ್ದಾಗ ಬಾವಿ ತೋಡುವಂತೆ ವರ್ತಿಸುತ್ತಿದೆ. ಹೌದು, ಈ ಪ್ರಮಾಣದಲ್ಲಿ ವಿದ್ಯುತ್‌ ಬೇಡಿಕೆ ರಾತೋರಾತ್ರಿ ಏರಿಕೆ ಆಗಿದ್ದಲ್ಲ. ಪ್ರಸಕ್ತ ಸಾಲಿನ ಮುಂಗಾರು ಆರಂಭದಲ್ಲೇ ಈ ಟ್ರೆಂಡ್‌ ಆರಂಭವಾಗಿತ್ತು. ಮತ್ತೂಂದೆಡೆ ಈ ಬಾರಿ ಮಳೆ ಕೊರತೆ ಇರಲಿದೆ ಎಂಬ ಮುನ್ಸೂಚನೆಯೂ ಹವಾಮಾನ ತಜ್ಞರಿಂದ ಸಿಕ್ಕಿತ್ತು. ಆದರೂ ಸರಕಾರ ಗಾಢನಿದ್ರೆಯಲ್ಲಿತ್ತು. ಈಗ ಎಚ್ಚೆತ್ತು ಏಕಾಏಕಿ ವಿದ್ಯುತ್‌ಗಾಗಿ ಹುಡುಕಾಟ ಆರಂಭಿಸಿದೆ. ಆದರೆ ನಿರೀಕ್ಷಿತ ಫ‌ಲಿತಾಂಶ ಸಿಗುತ್ತಿಲ್ಲ.

ಸರಕಾರದ ಅಂಕಿ-ಅಂಶಗಳ ಪ್ರಕಾರ ಹೇಳುವುದಾದರೆ, ಮೂರು ತಿಂಗಳುಳಿಂದ ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ 250 ಮಿಲಿಯನ್‌ ಯುನಿಟ್‌ ಆಸುಪಾಸಿನಲ್ಲೇ ಇದೆ. ಅದರಂತೆ ಬುಧವಾರ (ಅ. 11) ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ 257.08 ದಶಲಕ್ಷ ಯೂನಿಟ್‌ ಇದ್ದು, ಪೀಕ್‌ ಲೋಡ್‌ 14,448 ಮೆ.ವಾ. ಇದೆ. ಇದೇ ದಿನ ಸೆಪ್ಟಂಬರ್‌ನಲ್ಲಿ 245.2 ದಶಲಕ್ಷ ಯೂನಿಟ್‌ ಇದ್ದು, ಪೀಕ್‌ ಲೋಡ್‌ 13,630 ಮೆ.ವಾ. ಇತ್ತು. ಆಗಸ್ಟ್‌ನಲ್ಲಿ ಇದೇ ಅವಧಿಯಲ್ಲಿ 253.40 ದಶಲಕ್ಷ ಯೂನಿಟ್‌ ಇದ್ದು, ಪೀಕ್‌ ಲೋಡ್‌ 15,233 ಮೆ.ವಾ. ಇತ್ತು. ಜೂನ್‌ನಲ್ಲಿ ಬೇಡಿಕೆ 225 ದಶಲಕ್ಷ ಯೂನಿಟ್‌ ದಾಖಲಾಗಿದೆ (ಸಾಮಾನ್ಯವಾಗಿ ಆ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಇನ್ನೂ ಸಮರ್ಪಕವಾಗಿ ಆರಂಭವಾಗಿರುವುದಿಲ್ಲ).

ಈ ಮಧ್ಯೆ ಉಚಿತ ವಿದ್ಯುತ್‌ ಘೋಷಿಸಿರುವುದೂ ತಕ್ಕಮಟ್ಟಿಗೆ ಬೇಡಿಕೆ ಹೆಚ್ಚಳಕ್ಕೆ ಪೂರಕವಾದಂತಿದೆ. ಸೆಕೆ ಕಾರಣಕ್ಕೆ ಹವಾನಿಯಂತ್ರಿತ ಯಂತ್ರಗಳ ಬಳಕೆಯೂ ಹೆಚ್ಚಾಗಿದೆ. ಮಳೆ ಕಡಿಮೆಯಾದ ಕಾರಣ ಕೃಷಿ ಪಂಪ್‌ಸೆಟ್‌ಗಳ ಬಳಕೆಯೂ ಹೆಚ್ಚಾಗಿದೆ. ಇವೆಲ್ಲದರ ಮುನ್ಸೂಚನೆ ಇದ್ದರೂ ಅಧಿಕಾರಿಗಳ ನಿರ್ವಹಣ ವೈಫ‌ಲ್ಯ ಎದ್ದುಕಾಣುತ್ತಿದೆ ಎಂಬ ಆರೋಪ ಇಂಧನ ಇಲಾಖೆ ವಲಯದಲ್ಲೇ ಕೇಳಿಬರುತ್ತಿದೆ.
ಸಾಮಾನ್ಯವಾಗಿ “ರಿಯಲ್‌ ಟೈಮ್‌’ ಮಾರುಕಟ್ಟೆಯಲ್ಲಿ 250ರಿಂದ 300 ಮೆ.ವಾ. ವಿದ್ಯುತ್‌ ಕೊರತೆಯನ್ನು ನೀಗಿಸಲು ಸಾಧ್ಯವಿದೆ. ಅಬ್ಬಬ್ಟಾ ಎಂದರೆ 400 ಮೆ.ವಾ. ಅನ್ನು ಹೆಣಗಾಡಿ ನಿಭಾಯಿಸಬಹುದು. ಆದರೆ ರಾಜ್ಯದಲ್ಲಿ ಕೊರತೆ ಇರುವುದು 1,500ರಿಂದ 2,000 ಮೆ.ವಾ. ಈ ನಡುವೆ ನೆರೆ ರಾಜ್ಯಗಳಲ್ಲೂ ಮಳೆ ಕೊರತೆ ಜತೆಗೆ ವಿದ್ಯುತ್‌ ಬೇಡಿಕೆ ಹೆಚ್ಚಿದೆ. ಹೀಗೆ ಎಲ್ಲೆಡೆಯಿಂದ ಬೇಡಿಕೆ ಕೇಳಿಬರುವುದರಿಂದ ಸಹಜವಾಗಿ ಮಾರುಕಟ್ಟೆಯಲ್ಲಿ ಅದರ ಬೆಲೆ ಕೂಡ ಏರಿಕೆಯಾಗುತ್ತದೆ. ಹಾಗಾಗಿ, ರಾಜ್ಯಕ್ಕೆ ತಾನು ನಿರೀಕ್ಷಿಸಿದ ಬೆಲೆಯಲ್ಲಿ ವಿದ್ಯುತ್‌ ಸಿಗುವುದಿಲ್ಲ.

ಏನು ಮಾಡಬಹುದಿತ್ತು?
ಸರಕಾರ ಮೊದಲೇ ಎಚ್ಚೆತ್ತು ಜೂನ್‌ನಲ್ಲೇ ಹೆಚ್ಚುವರಿ ವಿದ್ಯುತ್‌ ಉತ್ಪಾದನೆ ಮಾಡುವ ರಾಜ್ಯಗಳೊಂದಿಗೆ ಪರಿಣಾಮಕಾರಿಯಾಗಿ ವಿನಿಮಯ ಮಾಡಿಕೊಳ್ಳಬಹುದಿತ್ತು. ಅದೇ ಸಮಯದಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ದ ಮೊರೆಹೋಗಿ, ಮಾರುಕಟ್ಟೆಯಲ್ಲಿ ಟ್ರೆಂಡ್‌ ಯಾವ ರೀತಿ ಇದೆ ಎಂಬುದನ್ನು ಅರಿತು ದೀರ್ಘಾವಧಿಗೆ ವಿದ್ಯುತ್‌ ಖರೀದಿಗೆ ಒಡಂಬಡಿಕೆ ಮಾಡಿಕೊಳ್ಳಬಹುದಿತ್ತು. ವಿದ್ಯುತ್‌ ಸಮಸ್ಯೆಯ ಗಂಭೀರತೆಯನ್ನು ಅರಿತು ಆರಂಭದಲ್ಲೇ ವಿದ್ಯುತ್ಛಕ್ತಿ ಕಾಯ್ದೆ- 2003ರ ಸೆಕ್ಷನ್‌ 11 ಅನ್ನು ಆಗಲೇ ಜಾರಿಗೊಳಿಸಬಹುದಿತ್ತು. ಇದರಿಂದ ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ವಿದ್ಯುತ್‌ ಉತ್ಪಾದಕರು ಬೇರೆ ಮಾರಾಟ ಮಾಡಲು ಬರುವುದಿಲ್ಲ. ಇದ್ಯಾವ ಪ್ರಯತ್ನಗಳಿಗೂ ಸರಕಾರ ಮುಂದಾಗಲಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ವಿದ್ಯುತ್‌ ವಿನಿಮಯ ಒಪ್ಪಂದ ನವೀಕರಣ
ಪಂಜಾಬ್‌ ಮತ್ತು ಉತ್ತರ ಪ್ರದೇಶದೊಂದಿಗೆ ವಿದ್ಯುತ್‌ ವಿನಿಮಯ ಒಪ್ಪಂದ ನವೀಕರಣವು ಸರಕಾರವನ್ನು ತಕ್ಕಮಟ್ಟಿಗೆ ಬೀಸೋ ದೊಣ್ಣೆಯಿಂದ ತಪ್ಪಿಸಿದೆ. ಕಳೆದ ಅಕ್ಟೋಬರ್‌ನಲ್ಲೇ ಪಂಜಾಬ್‌ ಮತ್ತು ಉತ್ತರ ಪ್ರದೇಶದೊಂದಿಗೆ ವಿದ್ಯುತ್‌ ವಿನಿಮಯಕ್ಕೆ ಒಡಂಬಡಿಕೆ ಆಗಿತ್ತು. ಈಗ ಆ ಒಪ್ಪಂದ ನವೀಕರಿಸಲಾಗಿದೆ. ಪರಿಣಾಮ ಎರಡೂ ರಾಜ್ಯಗಳಿಂದ ಕ್ರಮವಾಗಿ 300-600 ಮೆ.ವಾ. ಮತ್ತು 500 ಮೆ.ವಾ. ದೊರೆಯುತ್ತಿದೆ.

*ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.